ಬ್ರೇಕಿಂಗ್ ನ್ಯೂಸ್
22-04-21 11:05 pm Mangaluru Crime correspondent ಕರಾವಳಿ
ಮಂಗಳೂರು, ಎ.22: ನಾಯಿಯನ್ನು ಬೈಕಿಗೆ ಕಟ್ಟಿ ಎಳ್ಕೊಂಡು ಹೋಗಿರುವ ದೃಶ್ಯ ಸಹಿತ ಸುದ್ದಿ ಮಾಡಿದ್ದ ಹೆಡ್ ಲೈನ್ ಕರ್ನಾಟಕ ವರದಿ ಭಾರೀ ಇಂಪ್ಯಾಕ್ಟ್ ಆಗಿದೆ. ಮಂಗಳೂರು ಕಮಿಷನರ್ ಮತ್ತು ಡಿಸಿಪಿಯ ಸೂಚನೆಯಂತೆ ಸುರತ್ಕಲ್ ಪೊಲೀಸರು ತುರ್ತು ಕಾರ್ಯಾಚರಣೆ ನಡೆಸಿ ಒಬ್ಬ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಹೆಡ್ ಲೈನಲ್ಲಿ ಸುದ್ದಿ ಪ್ರಕಟಗೊಂಡು ವೈರಲ್ ಆಗುತ್ತಿದ್ದಂತೆ ಅದನ್ನು ವಿಡಿಯೋ ಮಾಡಿದ್ದ ಸುರತ್ಕಲ್ ನಿವಾಸಿ ಜೀವನ್ ಘಟನೆಯ ವಿಡಿಯೋವನ್ನು ಮುಂಬೈನ ಅನಿಮಲ್ ಕೇರ್ ಎನ್ ಜಿಓ ಒಂದಕ್ಕೆ ಕಳುಹಿಸಿದ್ದರು. ಅದರ ಪ್ರತಿನಿಧಿಗಳು ಕರೆ ಮಾಡಿ, ಪೊಲೀಸರಿಗೆ ದೂರು ನೀಡಲು ತಿಳಿಸಿದ್ದಾರೆ. ಅದರಂತೆ, ಜೀವನ್ ಸುರತ್ಕಲ್ ಠಾಣೆಗೆ ತೆರಳಿದ್ದು ಅಲ್ಲಿನ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ. ಏನಪ್ಪಾ.. ನಾಯಿ ವಿಚಾರ ಹಿಡ್ಕೊಂಡು ಕಂಪ್ಲೇಂಟ್ ಮಾಡಲು ಬಂದಿದ್ದೀಯಲ್ಲಾ.. ಬೇರೇನು ಕೆಲ್ಸ ಇಲ್ವಾ ನಿಂಗೆ ಎಂದು ದಬಾಯಿಸಿ ಕಳಿಸಿದ್ದಾರೆ.

ಈ ವಿಷಯ ತಿಳಿದ ಸಾಮಾಜಿಕ ಕಾರ್ಯಕರ್ತ ಸುಹಾನ್ ಆಳ್ವ, ಡಿಸಿಪಿ ಹರಿರಾಂಗೆ ವಿಷಯ ತಿಳಿಸಿದ್ದು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಡಿಸಿಪಿ ಹಾಕಿದ್ದ ಮೆಸೇಜನ್ನು ಸುರತ್ಕಲ್ ಪೊಲೀಸರಿಗೆ ತಿಳಿಸಿದಾಗ, ಅಲ್ಲಿನವರು ಎಲರ್ಟ್ ಆಗಿದ್ದಾರೆ. ಕೂಡಲೇ ಎಫ್ಐಆರ್ ಮಾಡಿದ್ದಾರೆ. ಜೀವನ್ ದೂರುದಾರನಾದರೆ, ಸುಹಾನ್ ಸಾಕ್ಷಿಯಾಗಿ ಸಹಿ ಹಾಕಿದ್ದು ಪೊಲೀಸರು ಕೂಡಲೇ ಕಾರ್ಯಾಚರಣೆ ನಡೆಸಿದ್ದಾರೆ.
ಆರೋಪಿಗಳು ಕೊಪ್ಪಳ ಮೂಲದವರು ಎನ್ನಲಾಗುತ್ತಿದ್ದು ಒಬ್ಬನನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಆತನನ್ನೂ ಬಂಧಿಸುವುದಾಗಿ ಡಿಸಿಪಿ ಭರವಸೆ ವ್ಯಕ್ತಪಡಿಸಿದ್ದಾರೆ.
ಎ.15 ರಂದು ರಾತ್ರಿ 8.30 ರ ಸುಮಾರಿಗೆ ನಾಯಿಯನ್ನು ಬೈಕಿಗೆ ಕಟ್ಟಿ ಎಳೆದೊಯ್ದಿದ್ದ ಘಟನೆ ನಡೆದಿತ್ತು. ಎನ್ಐಟಿಕೆ ಫ್ಲೈ ಓವರ್ ಬಳಿ ಘಟನೆ ನಡೆದಿದ್ದು ಇದನ್ನು ಇನ್ನೊಂದು ಬೈಕಿನಲ್ಲಿ ತೆರಳುತ್ತಿದ್ದ ಮಂದಿ ವಿಡಿಯೋ ಮಾಡಿದ್ದರು.
ನಾಯಿಯನ್ನು ಬೈಕಿಗೆ ಕಟ್ಟಿ ದರ ದರನೆ ಎಳೆದೊಯ್ದ ಪಾಪಿಗಳು ! ಮಂಗಳೂರಿನಲ್ಲೇ ಮನಕಲಕುವ ಘಟನೆ !
The Surathkal Police have succeeded in arresting one Person in connection to a per dog being tied to a two-wheeler and dragged along a road at NITk, Surathkal in Mangalore.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm