ಬ್ರೇಕಿಂಗ್ ನ್ಯೂಸ್
22-04-21 11:05 pm Mangaluru Crime correspondent ಕರಾವಳಿ
ಮಂಗಳೂರು, ಎ.22: ನಾಯಿಯನ್ನು ಬೈಕಿಗೆ ಕಟ್ಟಿ ಎಳ್ಕೊಂಡು ಹೋಗಿರುವ ದೃಶ್ಯ ಸಹಿತ ಸುದ್ದಿ ಮಾಡಿದ್ದ ಹೆಡ್ ಲೈನ್ ಕರ್ನಾಟಕ ವರದಿ ಭಾರೀ ಇಂಪ್ಯಾಕ್ಟ್ ಆಗಿದೆ. ಮಂಗಳೂರು ಕಮಿಷನರ್ ಮತ್ತು ಡಿಸಿಪಿಯ ಸೂಚನೆಯಂತೆ ಸುರತ್ಕಲ್ ಪೊಲೀಸರು ತುರ್ತು ಕಾರ್ಯಾಚರಣೆ ನಡೆಸಿ ಒಬ್ಬ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಹೆಡ್ ಲೈನಲ್ಲಿ ಸುದ್ದಿ ಪ್ರಕಟಗೊಂಡು ವೈರಲ್ ಆಗುತ್ತಿದ್ದಂತೆ ಅದನ್ನು ವಿಡಿಯೋ ಮಾಡಿದ್ದ ಸುರತ್ಕಲ್ ನಿವಾಸಿ ಜೀವನ್ ಘಟನೆಯ ವಿಡಿಯೋವನ್ನು ಮುಂಬೈನ ಅನಿಮಲ್ ಕೇರ್ ಎನ್ ಜಿಓ ಒಂದಕ್ಕೆ ಕಳುಹಿಸಿದ್ದರು. ಅದರ ಪ್ರತಿನಿಧಿಗಳು ಕರೆ ಮಾಡಿ, ಪೊಲೀಸರಿಗೆ ದೂರು ನೀಡಲು ತಿಳಿಸಿದ್ದಾರೆ. ಅದರಂತೆ, ಜೀವನ್ ಸುರತ್ಕಲ್ ಠಾಣೆಗೆ ತೆರಳಿದ್ದು ಅಲ್ಲಿನ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ. ಏನಪ್ಪಾ.. ನಾಯಿ ವಿಚಾರ ಹಿಡ್ಕೊಂಡು ಕಂಪ್ಲೇಂಟ್ ಮಾಡಲು ಬಂದಿದ್ದೀಯಲ್ಲಾ.. ಬೇರೇನು ಕೆಲ್ಸ ಇಲ್ವಾ ನಿಂಗೆ ಎಂದು ದಬಾಯಿಸಿ ಕಳಿಸಿದ್ದಾರೆ.

ಈ ವಿಷಯ ತಿಳಿದ ಸಾಮಾಜಿಕ ಕಾರ್ಯಕರ್ತ ಸುಹಾನ್ ಆಳ್ವ, ಡಿಸಿಪಿ ಹರಿರಾಂಗೆ ವಿಷಯ ತಿಳಿಸಿದ್ದು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಡಿಸಿಪಿ ಹಾಕಿದ್ದ ಮೆಸೇಜನ್ನು ಸುರತ್ಕಲ್ ಪೊಲೀಸರಿಗೆ ತಿಳಿಸಿದಾಗ, ಅಲ್ಲಿನವರು ಎಲರ್ಟ್ ಆಗಿದ್ದಾರೆ. ಕೂಡಲೇ ಎಫ್ಐಆರ್ ಮಾಡಿದ್ದಾರೆ. ಜೀವನ್ ದೂರುದಾರನಾದರೆ, ಸುಹಾನ್ ಸಾಕ್ಷಿಯಾಗಿ ಸಹಿ ಹಾಕಿದ್ದು ಪೊಲೀಸರು ಕೂಡಲೇ ಕಾರ್ಯಾಚರಣೆ ನಡೆಸಿದ್ದಾರೆ.
ಆರೋಪಿಗಳು ಕೊಪ್ಪಳ ಮೂಲದವರು ಎನ್ನಲಾಗುತ್ತಿದ್ದು ಒಬ್ಬನನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಆತನನ್ನೂ ಬಂಧಿಸುವುದಾಗಿ ಡಿಸಿಪಿ ಭರವಸೆ ವ್ಯಕ್ತಪಡಿಸಿದ್ದಾರೆ.
ಎ.15 ರಂದು ರಾತ್ರಿ 8.30 ರ ಸುಮಾರಿಗೆ ನಾಯಿಯನ್ನು ಬೈಕಿಗೆ ಕಟ್ಟಿ ಎಳೆದೊಯ್ದಿದ್ದ ಘಟನೆ ನಡೆದಿತ್ತು. ಎನ್ಐಟಿಕೆ ಫ್ಲೈ ಓವರ್ ಬಳಿ ಘಟನೆ ನಡೆದಿದ್ದು ಇದನ್ನು ಇನ್ನೊಂದು ಬೈಕಿನಲ್ಲಿ ತೆರಳುತ್ತಿದ್ದ ಮಂದಿ ವಿಡಿಯೋ ಮಾಡಿದ್ದರು.
ನಾಯಿಯನ್ನು ಬೈಕಿಗೆ ಕಟ್ಟಿ ದರ ದರನೆ ಎಳೆದೊಯ್ದ ಪಾಪಿಗಳು ! ಮಂಗಳೂರಿನಲ್ಲೇ ಮನಕಲಕುವ ಘಟನೆ !
The Surathkal Police have succeeded in arresting one Person in connection to a per dog being tied to a two-wheeler and dragged along a road at NITk, Surathkal in Mangalore.
10-11-25 12:22 pm
Bangalore Correspondent
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm