ಬ್ರೇಕಿಂಗ್ ನ್ಯೂಸ್
23-04-21 07:02 pm Mangaluru correspondent ಕರಾವಳಿ
ಕೊಣಾಜೆ, ಎ.23: ಕೊರೊನಾ ಸೋಂಕಿನ ಹಿನ್ನೆಲೆ ರಾಜ್ಯದೆಲ್ಲೆಡೆ ಕರ್ಫ್ಯೂ, ಅಘೋಷಿತ ಬಂದ್ ವಾತಾವರಣ ನೆಲೆಸಿದ್ದರೆ ಕೊಣಾಜೆ ಠಾಣೆ ಸಮೀಪದ ಪರಂಡೆ ಎಂಬಲ್ಲಿ ಅಕ್ರಮ ಕೋಳಿ ಅಂಕ ನಡೆಸಲಾಗುತ್ತಿತ್ತು. ಮಾಹಿತಿ ಪಡೆದ ಕೊಣಾಜೆ ಪೊಲೀಸರು ದಾಳಿ ನಡೆಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯಲ್ಲಿ ಕೆಲವು ಪೊಲೀಸರ ಹಿಂಬಾಗಿಲ ಸಹಕಾರದಿಂದ ಅಕ್ರಮ ಕೋಳಿ ಅಂಕಗಳು ನಡೆಯುವುದು ಮಾಮೂಲಿ ಆಗಿದೆ. ಆದರೆ ಈಗ ಕೊರೊನಾ ಭೀತಿಯಲ್ಲಿ ಅಧಿಕಾರಿಗಳು, ಪೊಲೀಸರೆಲ್ಲ ಸೇರಿ ಊರಿನೆಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದರೆ, ಇದರ ಗೊಡವೆಯೇ ಇಲ್ಲ ಎಂಬಂತೆ ಕೊಣಾಜೆ ಬಳಿ ಭಾರೀ ಕೋಳಿ ಅಂಕ ಏರ್ಪಡಿಸಲಾಗಿತ್ತು. ಮಧ್ಯಾಹ್ನದ ಬಳಿಕ ನೂರಾರು ಜೂಜು ಪ್ರಿಯರನ್ನು ಒಟ್ಟು ಸೇರಿಸಿ ಅಕ್ರಮ ಕೋಳಿ ಅಂಕ ನಡೆಸಲಾಗುತ್ತಿತ್ತು.

ಕೊಣಾಜೆ ಪೊಲೀಸ್ ಠಾಣೆಯಿಂದ 3 ಕಿಮೀ ದೂರದ ಪರಂಡೆ ಎಂಬಲ್ಲಿ ಸ್ಥಳೀಯ ಕುಟುಂಬವೊಂದಕ್ಕೆ ಸಂಬಂಧಿಸಿದ ವಾರ್ಷಿಕ ಕೋಲ ನಡೆದಿದ್ದು ಆ ಪ್ರದೇಶದಲ್ಲೇ ಕೊರೊನಾ ಕಟ್ಟುನಿಟ್ಟಿನ ಆದೇಶಗಳನ್ನು ಧಿಕ್ಕರಿಸಿ ಕೋಳಿ ಅಂಕ ನಡೆಸಲಾಗುತ್ತಿತ್ತು. ಈ ಬಗ್ಗೆ ಸ್ಥಳೀಯರೋರ್ವರು ಹೆಡ್ ಲೈನ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದು ಅಕ್ರಮ ಕೋಳಿ ಅಂಕದೆಡೆಗೆ ರಹಸ್ಯ ಕ್ಯಾಮೆರಾ ಚಲಾಯಿಸಲು ನಮ್ಮ ಪ್ರತಿನಿಧಿ ತೆರಳಿದಾಗ ಅದಾಗಲೇ ಅಲ್ಲಿ ಕೊಣಾಜೆ ಪೊಲೀಸರ ಎಂಟ್ರಿ ಆಗಿ ಜೂಜುಕೋರರೆಲ್ಲ ಸ್ಥಳದಿಂದ ದಿಕ್ಕಾಪಾಲಾಗಿ ಓಡಿದ್ದಾರೆ.

ಸ್ಥಳೀಯರು ಅಕ್ರಮ ಕೋಳಿ ಅಂಕದ ಬಗ್ಗೆ ರಹಸ್ಯವಾಗಿ ಪೊಲೀಸರಿಗೆ ದೂರಿರುವುದಾಗಿ ತಿಳಿದು ಬಂದಿದೆ. ಹಾಗಾಗಿ ಕೊಣಾಜೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಅಂಕವನ್ನು ನಿಲ್ಲಿಸಿದ್ದಾರೆ. ಜೂಜಿನಲ್ಲಿ ನಿರತರಾಗಿದ್ದ 7 ಮಂದಿ ಮತ್ತು ಅಂಕದ ಕೋಳಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
The Konaje Police raid on Cockfight event and take seven persons into Custody. The public alleged that amid covid tough guidelines the event was organised without anyone's fear.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm