ಬ್ರೇಕಿಂಗ್ ನ್ಯೂಸ್
24-04-21 03:38 pm Mangalore Correspondent ಕರಾವಳಿ
ಮಂಗಳೂರು, ಎ.24: ಮಂಗಳೂರು ಹೊರವಲಯದ ಬಜ್ಪೆ ಬಳಿಯ ಎಸ್ಇಝೆಡ್ ಏರಿಯಾದಲ್ಲಿ ಕೆಮಿಕಲ್ ಫ್ಯಾಕ್ಟರಿಗೆ ಬೆಂಕಿ ಹತ್ತಿಕೊಂಡಿದೆ. ಭಾರೀ ಪ್ರಮಾಣದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಪರಿಸರದಲ್ಲಿ ಭೀತಿ ಸೃಷ್ಟಿಯಾಗಿದೆ.

ಮುಂಬೈ ಮೂಲದ ಕ್ಯಾಟಸಿಂಥ್ ಸ್ಪೆಷಾಲಿಟಿ ಕೆಮಿಕಲ್ಸ್ ಎನ್ನುವ ಹೆಸರಿನ ಪರ್ಫ್ಯೂಮ್ ಉತ್ಪಾದಿಸುವ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಧ್ಯಾಹ್ನ 2.30 ರ ಸುಮಾರಿಗೆ ಘಟನೆ ನಡೆದಿದ್ದು ಒಮ್ಮೆಲೇ ಬೆಂಕಿಯ ಜ್ವಾಲೆಗೆ ಭಾರೀ ಪ್ರಮಾಣದಲ್ಲಿ ಹೊಗೆ ಆವರಿಸಿದೆ. ದೂರದಿಂದಲೇ ಕಪ್ಪು ಹೊಗೆ ಏಳುತ್ತಿರುವುದು ಕಂಡುಬಂದಿದ್ದು ಕೆಲವೇ ಕ್ಷಣದಲ್ಲಿ ವಿಡಿಯೋ ವೈರಲ್ ಆಗಿದೆ.


ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಕಾಣಿಸಿದೆ ಎನ್ನಲಾಗುತ್ತಿದ್ದು ಅಗ್ನಿಶಾಮಕ ಸಿಬಂದಿ ಬೆಂಕಿ ಶಮನದ ಕಾರ್ಯಾಚರಣೆ ಆರಂಭಿಸಿದ್ದಾರೆ. ವಾರಾಂತ್ಯದ ಲಾಕ್ಡೌನ್ ಆಗಿದ್ದರಿಂದ ಫ್ಯಾಕ್ಟರಿ ಬಂದ್ ಆಗಿತ್ತು. ಕಾರ್ಮಿಕರು ಕೂಡ ಹೆಚ್ಚಿರಲಿಲ್ಲ. ಕೆಲವು ಮಂದಿ ಮಾತ್ರ ಇದ್ದರು. ಸದ್ಯಕ್ಕೆ ಪ್ರಾಣಾಪಾಯದ ಬಗ್ಗೆ ಮಾಹಿತಿ ಇಲ್ಲ ಎಂದು ಎಸ್ಇಝೆಡ್ ಕಂಪನಿ ಅಧಿಕಾರಿಗಳು ತಿಳಿಸಿದ್ದಾರೆ.



ಪೆಟ್ರೋಲಿಯಂ ಉತ್ಪನ್ನಗಳಿಂದ ಪರ್ಫ್ಯೂಮ್ ಇನ್ನಿತರ ಉಪ ಉತ್ಪನ್ನಗಳ ತಯಾರಿಕೆ ನಡೆದಿತ್ತು. ಈ ಕಂಪನಿ ನಿರ್ಮಾಣಗೊಂದು ಮೂರು ವರ್ಷ ಆಗಿದ್ದು ಕಳೆದ ಒಂದು ವರ್ಷದಿಂದ ಉತ್ಪಾದನೆ ಕಾರ್ಯ ನಡೆಯುತ್ತಿತ್ತು. ಮುಂಬೈ ಮೂಲದ ಕಾರ್ಮುಕರೇ ಹೆಚ್ಚಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ.
ರಫ್ತು ಉದ್ದೇಶಿತ ಕಂಪನಿಯಾಗಿದ್ದು 10ರಿಂದ 15 ಎಕ್ರೆ ವ್ಯಾಪ್ತಿಯಲ್ಲಿ ಫ್ಯಾಕ್ಟರಿಯಿದ್ದು ಹೇಗೆ ಬೆಂಕಿ ಕಾಣಿಸಿಕೊಂಡಿದೆ ಎನ್ನುವುದರ ಖಚಿತ ಮಾಹಿತಿಯಿಲ್ಲ. ಇದರ ಬೆಂಕಿ ಅಲ್ಲಿರುವ ಇತರ ಏಳೆಂಟು ಇದೇ ಮಾದರಿಯ ಕೆಮಿಕಲ್ ಫ್ಯಾಕ್ಟರಿಗಳಿಗೆ ಹರಡಿಕೊಳ್ಳುವ ಸಾಧ್ಯತೆ ಇದೆಯಾ ಎನ್ನುವ ಭಯ ಪರಿಸರದಲ್ಲಿ ಮೂಡಿದೆ.
Mangalore Sez Massive fire breaks out in perfume factory Catasynth Speciality Chemicals. The fire service team has reached the spot. No casualties reported
10-11-25 12:22 pm
Bangalore Correspondent
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm