ಬ್ರೇಕಿಂಗ್ ನ್ಯೂಸ್
25-08-20 05:03 pm Mangalore News ಕರಾವಳಿ
ಮಂಗಳೂರು, ಆಗಸ್ಟ್ 25: ಕೇಂದ್ರ ಸರಕಾರ ಅಂತಾರಾಜ್ಯ ಸಂಚಾರ ಮುಕ್ತ ಅವಕಾಶ ನೀಡಿದ್ದರೂ, ಕೇರಳ ಸರಕಾರ ಕಾಸರಗೋಡು - ಮಂಗಳೂರು ಗಡಿಯನ್ನು ಬಂದ್ ಮಾಡಿರುವುದನ್ನು ವಿರೋಧಿಸಿ ಗಡಿಭಾಗ ತಲಪಾಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಗಡಿಭಾಗ ತಲಪಾಡಿಯಲ್ಲಿ ಹೆದ್ದಾರಿಗೆ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಗಳನ್ನು ಕೆಡವಿ ಮುನ್ನುಗ್ಗಿ ಮೆರವಣಿಗೆ ನಡೆಸಿದ ಕಾರ್ಯಕರ್ತರು ತಲಪಾಡಿಯಲ್ಲಿ ಪ್ರತಿಭಟನೆ ನಡೆಸಿದರು. ಗಡಿಯಲ್ಲಿ ತಡೆಬೇಲಿ ಹಾಕಿದ್ದ ಪೊಲೀಸರ ಕ್ರಮ ಹಾಗೂ ಕಾಸರಗೋಡು ಜಿಲ್ಲಾಡಳಿತ ಮಾಡಿರುವ ಪಾಸ್ ವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಕಾಸರಗೋಡು ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ ನಡೆದಿದ್ದು ಪಕ್ಷದ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್ ನೇತೃತ್ವ ವಹಿಸಿದ್ದರು.


ಕಾಸರಗೋಡು ಜಿಲ್ಲೆಯ ಐದು ಸಾವಿರಕ್ಕೂ ಹೆಚ್ಚು ಜನ ನಿತ್ಯ ಉದ್ಯೋಗಕ್ಕಾಗಿ ಮಂಗಳೂರನ್ನು ಆಶ್ರಯಿಸಿದ್ದಾರೆ. ಆದರೆ ಕೇರಳ ಸರಕಾರ ಗಡಿ ತೆರೆಯದೆ ಈ ಭಾಗದ ಜನರಿಗೆ ತೊಂದರೆ ನೀಡುತ್ತಿದೆ. ಕರ್ನಾಟಕಕ್ಕೆ ತೆರಳಿದರೆ ಕೊರೊನಾ ಬರುತ್ತದೆ ಎನ್ನುವ ಮೊಂಡುವಾದ ಮುಂದಿಡುತ್ತಿದೆ. ಅಂತಾರಾಜ್ಯ ಸಂಚಾರ ಮುಕ್ತಗೊಳಿಸಿ ಕೇಂದ್ರ ಸರಕಾರ ಆದೇಶ ಮಾಡಿದ್ದಲ್ಲದೆ ಹೈಕೋರ್ಟ್ ಕೂಡ ಜನರ ಸಂಚಾರಕ್ಕೆ ಅವಕಾಶ ಕೊಡಬೇಕೆಂದು ಸೂಚನೆ ನೀಡಿದೆ. ಆದರೆ, ಕಾಸರಗೋಡು ಭಾಗದ ಶಾಸಕರು ಮತ್ತು ಸಂಸದರು ಜನರ ಬವಣೆಗೆ ಕಿವುಡಾಗಿದ್ದಾರೆ ಎಂದು ಕೆ.ಶ್ರೀಕಾಂತ್ ಕಿಡಿಕಾರಿದ್ದಾರೆ.
ಇನ್ನೊಂದು ದಿನದಲ್ಲಿ ಗಡಿ ಓಪನ್ ಮಾಡದಿದ್ದಲ್ಲಿ ಹೋರಾಟ ತೀವ್ರಗೊಳಿಸುವ ಎಚ್ಚರಿಕೆಯನ್ನು ಶ್ರೀಕಾಂತ್ ನೀಡಿದ್ದಾರೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm