ಬ್ರೇಕಿಂಗ್ ನ್ಯೂಸ್
25-08-20 05:03 pm Mangalore News ಕರಾವಳಿ
ಮಂಗಳೂರು, ಆಗಸ್ಟ್ 25: ಕೇಂದ್ರ ಸರಕಾರ ಅಂತಾರಾಜ್ಯ ಸಂಚಾರ ಮುಕ್ತ ಅವಕಾಶ ನೀಡಿದ್ದರೂ, ಕೇರಳ ಸರಕಾರ ಕಾಸರಗೋಡು - ಮಂಗಳೂರು ಗಡಿಯನ್ನು ಬಂದ್ ಮಾಡಿರುವುದನ್ನು ವಿರೋಧಿಸಿ ಗಡಿಭಾಗ ತಲಪಾಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಗಡಿಭಾಗ ತಲಪಾಡಿಯಲ್ಲಿ ಹೆದ್ದಾರಿಗೆ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಗಳನ್ನು ಕೆಡವಿ ಮುನ್ನುಗ್ಗಿ ಮೆರವಣಿಗೆ ನಡೆಸಿದ ಕಾರ್ಯಕರ್ತರು ತಲಪಾಡಿಯಲ್ಲಿ ಪ್ರತಿಭಟನೆ ನಡೆಸಿದರು. ಗಡಿಯಲ್ಲಿ ತಡೆಬೇಲಿ ಹಾಕಿದ್ದ ಪೊಲೀಸರ ಕ್ರಮ ಹಾಗೂ ಕಾಸರಗೋಡು ಜಿಲ್ಲಾಡಳಿತ ಮಾಡಿರುವ ಪಾಸ್ ವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಕಾಸರಗೋಡು ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ ನಡೆದಿದ್ದು ಪಕ್ಷದ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್ ನೇತೃತ್ವ ವಹಿಸಿದ್ದರು.


ಕಾಸರಗೋಡು ಜಿಲ್ಲೆಯ ಐದು ಸಾವಿರಕ್ಕೂ ಹೆಚ್ಚು ಜನ ನಿತ್ಯ ಉದ್ಯೋಗಕ್ಕಾಗಿ ಮಂಗಳೂರನ್ನು ಆಶ್ರಯಿಸಿದ್ದಾರೆ. ಆದರೆ ಕೇರಳ ಸರಕಾರ ಗಡಿ ತೆರೆಯದೆ ಈ ಭಾಗದ ಜನರಿಗೆ ತೊಂದರೆ ನೀಡುತ್ತಿದೆ. ಕರ್ನಾಟಕಕ್ಕೆ ತೆರಳಿದರೆ ಕೊರೊನಾ ಬರುತ್ತದೆ ಎನ್ನುವ ಮೊಂಡುವಾದ ಮುಂದಿಡುತ್ತಿದೆ. ಅಂತಾರಾಜ್ಯ ಸಂಚಾರ ಮುಕ್ತಗೊಳಿಸಿ ಕೇಂದ್ರ ಸರಕಾರ ಆದೇಶ ಮಾಡಿದ್ದಲ್ಲದೆ ಹೈಕೋರ್ಟ್ ಕೂಡ ಜನರ ಸಂಚಾರಕ್ಕೆ ಅವಕಾಶ ಕೊಡಬೇಕೆಂದು ಸೂಚನೆ ನೀಡಿದೆ. ಆದರೆ, ಕಾಸರಗೋಡು ಭಾಗದ ಶಾಸಕರು ಮತ್ತು ಸಂಸದರು ಜನರ ಬವಣೆಗೆ ಕಿವುಡಾಗಿದ್ದಾರೆ ಎಂದು ಕೆ.ಶ್ರೀಕಾಂತ್ ಕಿಡಿಕಾರಿದ್ದಾರೆ.
ಇನ್ನೊಂದು ದಿನದಲ್ಲಿ ಗಡಿ ಓಪನ್ ಮಾಡದಿದ್ದಲ್ಲಿ ಹೋರಾಟ ತೀವ್ರಗೊಳಿಸುವ ಎಚ್ಚರಿಕೆಯನ್ನು ಶ್ರೀಕಾಂತ್ ನೀಡಿದ್ದಾರೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm