ಬ್ರೇಕಿಂಗ್ ನ್ಯೂಸ್
25-04-21 09:44 pm Mangaluru correspondent ಕರಾವಳಿ
ಮಂಗಳೂರು, ಎ.25: ವೀಕೆಂಡ್ ಕರ್ಫ್ಯೂ ನಡುವೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇಂದು 47 ಜೋಡಿಗಳು ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿವೆ.
ಕಟೀಲು ದೇಗುಲದಲ್ಲಿ ಮದುವೆಯಾಗಲು 88 ಮಂದಿ ನೋಂದಣಿ ಮಾಡಿದ್ದರು. ಆದರೆ ವೀಕೆಂಡ್ ಲಾಕ್ಡೌನ್ ಕಾರಣದಿಂದ 47 ಜೋಡಿಗಳು ಮಾತ್ರ ವಿವಾಹವಾಗಿದ್ದಾರೆ.

ಸ್ಥಳೀಯ ಶಾಸಕ ಉಮಾನಾಥ ಕೋಟ್ಯಾನ್ ಮತ್ತು ದೇವಳದ ಆಡಳಿತ ಮಂಡಳಿಯವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಮದುವೆಯಲ್ಲಿ ಭಾಗವಹಿಸಲು ವಧೂವರರ ಕಡೆಯಿಂದ ಒಟ್ಟು 10 ಮಂದಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಅದರಂತೆ ಇಂದು ಕೋವಿಡ್ ನಿಯಮದ ರೀತಿ ವಿವಾಹ ಕಾರ್ಯ ನಡೆದಿದ್ದು ಜನಸಂದಣಿಯನ್ನು ನಿಭಾಯಿಸಲು ದೇವಳದ ಸರಸ್ವತೀ ಸದನ, ಮಹಾಲಕ್ಷೀ ಸದನ ಮತ್ತು ಅನ್ನಛತ್ರದಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು.


ದೇವರ ದರ್ಶನಕ್ಕಾಗಿ ದೇಗುಲದ ಪ್ರವೇಶ ನಿಷೇಧಿಸಲಾಗಿತ್ತು. ಹೊರ ಭಾಗದಿಂದಲೇ ನವ ಜೋಡಿಗಳು ದೇವರಿಗೆ ನಮಸ್ಕರಿಸಲು ಅವಕಾಶ ಕಲ್ಪಿಸಲಾಗಿತ್ತು. ಕಟೀಲು ದೇವಳದಲ್ಲಿ ಸಾಮಾನ್ಯವಾಗಿ ಮದುವೆಯ ಧಾರೆ ನಡೆದು, ಹೊರಗಡೆಯ ಹಾಲ್ ನಲ್ಲಿ ರಿಸೆಪ್ಷನ್ ನಡೆಸುತ್ತಿದ್ದರು. ಆದರೆ, ಈ ಬಾರಿ ಹಾಲ್ ಗಳಲ್ಲಿ ಮದುವೆ ನಡೆಯುವುದಿದ್ದರೂ 50 ಮಂದಿಗಷ್ಟೇ ಅವಕಾಶ ನೀಡಲಾಗಿತ್ತು. ಹೀಗಾಗಿ ಹೆಚ್ಚಿನ ಜೋಡಿಗಳು ಕಟೀಲಿನಲ್ಲೇ ಮದುವೆಯಾಗಿ ಅಲ್ಲಿಯೇ ಎಲ್ಲವನ್ನೂ ಮುಗಿಸಿದ್ದಾರೆ. ಕೆಲವರು ಮದುವೆಯ ಧಾರೆ ನಡೆದ ಬಳಿಕ ಮನೆಗೆ ತೆರಳಿ, ಮದುವೆ ಸಂಭ್ರಮ ಮಾಡಿದ್ದಾರೆ. ಕೆಲವರು ಮದುವೆಯನ್ನೇ ರದ್ದು ಪಡಿಸಿ ಮುಂದೂಡಿಕೆ ಮಾಡಿದ್ದರು.

ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಅತಿ ಹೆಚ್ಚು ಮಂದಿ ಎ.25 ಮತ್ತು 26 ರಂದು ಮದುವೆಗೆ ದಿನ ನಿಗದಿ ಮಾಡಿಕೊಂಡಿದ್ದರು. ಆದರೆ, ಈ ಬಾರಿ ಕೊರೊನಾ ಲಾಕ್ಡೌನ್ ಮದುವೆ ಸಂಭ್ರಮಕ್ಕೆ ಎಳ್ಳು ನೀರು ಬಿಟ್ಟಿದೆ.
Covid Weekend Curfew in Karnataka Mangalore administration curtails 44 Marriages that was in Kateel temple today to 10.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm