ಬ್ರೇಕಿಂಗ್ ನ್ಯೂಸ್
25-04-21 09:44 pm Mangaluru correspondent ಕರಾವಳಿ
ಮಂಗಳೂರು, ಎ.25: ವೀಕೆಂಡ್ ಕರ್ಫ್ಯೂ ನಡುವೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇಂದು 47 ಜೋಡಿಗಳು ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿವೆ.
ಕಟೀಲು ದೇಗುಲದಲ್ಲಿ ಮದುವೆಯಾಗಲು 88 ಮಂದಿ ನೋಂದಣಿ ಮಾಡಿದ್ದರು. ಆದರೆ ವೀಕೆಂಡ್ ಲಾಕ್ಡೌನ್ ಕಾರಣದಿಂದ 47 ಜೋಡಿಗಳು ಮಾತ್ರ ವಿವಾಹವಾಗಿದ್ದಾರೆ.

ಸ್ಥಳೀಯ ಶಾಸಕ ಉಮಾನಾಥ ಕೋಟ್ಯಾನ್ ಮತ್ತು ದೇವಳದ ಆಡಳಿತ ಮಂಡಳಿಯವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಮದುವೆಯಲ್ಲಿ ಭಾಗವಹಿಸಲು ವಧೂವರರ ಕಡೆಯಿಂದ ಒಟ್ಟು 10 ಮಂದಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಅದರಂತೆ ಇಂದು ಕೋವಿಡ್ ನಿಯಮದ ರೀತಿ ವಿವಾಹ ಕಾರ್ಯ ನಡೆದಿದ್ದು ಜನಸಂದಣಿಯನ್ನು ನಿಭಾಯಿಸಲು ದೇವಳದ ಸರಸ್ವತೀ ಸದನ, ಮಹಾಲಕ್ಷೀ ಸದನ ಮತ್ತು ಅನ್ನಛತ್ರದಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು.


ದೇವರ ದರ್ಶನಕ್ಕಾಗಿ ದೇಗುಲದ ಪ್ರವೇಶ ನಿಷೇಧಿಸಲಾಗಿತ್ತು. ಹೊರ ಭಾಗದಿಂದಲೇ ನವ ಜೋಡಿಗಳು ದೇವರಿಗೆ ನಮಸ್ಕರಿಸಲು ಅವಕಾಶ ಕಲ್ಪಿಸಲಾಗಿತ್ತು. ಕಟೀಲು ದೇವಳದಲ್ಲಿ ಸಾಮಾನ್ಯವಾಗಿ ಮದುವೆಯ ಧಾರೆ ನಡೆದು, ಹೊರಗಡೆಯ ಹಾಲ್ ನಲ್ಲಿ ರಿಸೆಪ್ಷನ್ ನಡೆಸುತ್ತಿದ್ದರು. ಆದರೆ, ಈ ಬಾರಿ ಹಾಲ್ ಗಳಲ್ಲಿ ಮದುವೆ ನಡೆಯುವುದಿದ್ದರೂ 50 ಮಂದಿಗಷ್ಟೇ ಅವಕಾಶ ನೀಡಲಾಗಿತ್ತು. ಹೀಗಾಗಿ ಹೆಚ್ಚಿನ ಜೋಡಿಗಳು ಕಟೀಲಿನಲ್ಲೇ ಮದುವೆಯಾಗಿ ಅಲ್ಲಿಯೇ ಎಲ್ಲವನ್ನೂ ಮುಗಿಸಿದ್ದಾರೆ. ಕೆಲವರು ಮದುವೆಯ ಧಾರೆ ನಡೆದ ಬಳಿಕ ಮನೆಗೆ ತೆರಳಿ, ಮದುವೆ ಸಂಭ್ರಮ ಮಾಡಿದ್ದಾರೆ. ಕೆಲವರು ಮದುವೆಯನ್ನೇ ರದ್ದು ಪಡಿಸಿ ಮುಂದೂಡಿಕೆ ಮಾಡಿದ್ದರು.

ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಅತಿ ಹೆಚ್ಚು ಮಂದಿ ಎ.25 ಮತ್ತು 26 ರಂದು ಮದುವೆಗೆ ದಿನ ನಿಗದಿ ಮಾಡಿಕೊಂಡಿದ್ದರು. ಆದರೆ, ಈ ಬಾರಿ ಕೊರೊನಾ ಲಾಕ್ಡೌನ್ ಮದುವೆ ಸಂಭ್ರಮಕ್ಕೆ ಎಳ್ಳು ನೀರು ಬಿಟ್ಟಿದೆ.
Covid Weekend Curfew in Karnataka Mangalore administration curtails 44 Marriages that was in Kateel temple today to 10.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm