ಬ್ರೇಕಿಂಗ್ ನ್ಯೂಸ್
25-04-21 09:44 pm Mangaluru correspondent ಕರಾವಳಿ
ಮಂಗಳೂರು, ಎ.25: ವೀಕೆಂಡ್ ಕರ್ಫ್ಯೂ ನಡುವೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇಂದು 47 ಜೋಡಿಗಳು ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿವೆ.
ಕಟೀಲು ದೇಗುಲದಲ್ಲಿ ಮದುವೆಯಾಗಲು 88 ಮಂದಿ ನೋಂದಣಿ ಮಾಡಿದ್ದರು. ಆದರೆ ವೀಕೆಂಡ್ ಲಾಕ್ಡೌನ್ ಕಾರಣದಿಂದ 47 ಜೋಡಿಗಳು ಮಾತ್ರ ವಿವಾಹವಾಗಿದ್ದಾರೆ.

ಸ್ಥಳೀಯ ಶಾಸಕ ಉಮಾನಾಥ ಕೋಟ್ಯಾನ್ ಮತ್ತು ದೇವಳದ ಆಡಳಿತ ಮಂಡಳಿಯವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಮದುವೆಯಲ್ಲಿ ಭಾಗವಹಿಸಲು ವಧೂವರರ ಕಡೆಯಿಂದ ಒಟ್ಟು 10 ಮಂದಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಅದರಂತೆ ಇಂದು ಕೋವಿಡ್ ನಿಯಮದ ರೀತಿ ವಿವಾಹ ಕಾರ್ಯ ನಡೆದಿದ್ದು ಜನಸಂದಣಿಯನ್ನು ನಿಭಾಯಿಸಲು ದೇವಳದ ಸರಸ್ವತೀ ಸದನ, ಮಹಾಲಕ್ಷೀ ಸದನ ಮತ್ತು ಅನ್ನಛತ್ರದಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು.


ದೇವರ ದರ್ಶನಕ್ಕಾಗಿ ದೇಗುಲದ ಪ್ರವೇಶ ನಿಷೇಧಿಸಲಾಗಿತ್ತು. ಹೊರ ಭಾಗದಿಂದಲೇ ನವ ಜೋಡಿಗಳು ದೇವರಿಗೆ ನಮಸ್ಕರಿಸಲು ಅವಕಾಶ ಕಲ್ಪಿಸಲಾಗಿತ್ತು. ಕಟೀಲು ದೇವಳದಲ್ಲಿ ಸಾಮಾನ್ಯವಾಗಿ ಮದುವೆಯ ಧಾರೆ ನಡೆದು, ಹೊರಗಡೆಯ ಹಾಲ್ ನಲ್ಲಿ ರಿಸೆಪ್ಷನ್ ನಡೆಸುತ್ತಿದ್ದರು. ಆದರೆ, ಈ ಬಾರಿ ಹಾಲ್ ಗಳಲ್ಲಿ ಮದುವೆ ನಡೆಯುವುದಿದ್ದರೂ 50 ಮಂದಿಗಷ್ಟೇ ಅವಕಾಶ ನೀಡಲಾಗಿತ್ತು. ಹೀಗಾಗಿ ಹೆಚ್ಚಿನ ಜೋಡಿಗಳು ಕಟೀಲಿನಲ್ಲೇ ಮದುವೆಯಾಗಿ ಅಲ್ಲಿಯೇ ಎಲ್ಲವನ್ನೂ ಮುಗಿಸಿದ್ದಾರೆ. ಕೆಲವರು ಮದುವೆಯ ಧಾರೆ ನಡೆದ ಬಳಿಕ ಮನೆಗೆ ತೆರಳಿ, ಮದುವೆ ಸಂಭ್ರಮ ಮಾಡಿದ್ದಾರೆ. ಕೆಲವರು ಮದುವೆಯನ್ನೇ ರದ್ದು ಪಡಿಸಿ ಮುಂದೂಡಿಕೆ ಮಾಡಿದ್ದರು.

ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಅತಿ ಹೆಚ್ಚು ಮಂದಿ ಎ.25 ಮತ್ತು 26 ರಂದು ಮದುವೆಗೆ ದಿನ ನಿಗದಿ ಮಾಡಿಕೊಂಡಿದ್ದರು. ಆದರೆ, ಈ ಬಾರಿ ಕೊರೊನಾ ಲಾಕ್ಡೌನ್ ಮದುವೆ ಸಂಭ್ರಮಕ್ಕೆ ಎಳ್ಳು ನೀರು ಬಿಟ್ಟಿದೆ.
Covid Weekend Curfew in Karnataka Mangalore administration curtails 44 Marriages that was in Kateel temple today to 10.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm