ಬ್ರೇಕಿಂಗ್ ನ್ಯೂಸ್
26-04-21 05:30 pm Mangalore Correspondent ಕರಾವಳಿ
ಮಂಗಳೂರು, ಎ.26: ಗರ್ಭಿಣಿ ಮಹಿಳೆಯನ್ನು ನಡುರಾತ್ರಿಯಲ್ಲಿ ಕಾರಿನಲ್ಲಿ ಕರೆತರುತ್ತಿದ್ದಾಗ ಕಾರು ಕೆಟ್ಟು ಹೋಗಿತ್ತು. ಇನ್ನೇನು ಮಾಡುವುದೆಂದು ಆಕೆಯ ಗಂಡ ಯೋಚನೆ ಮಾಡುತ್ತಿದ್ದಾಗ, ಅಲ್ಲಿದ್ದ ಪೊಲೀಸರು ಸಹಾಯಕ್ಕೆ ಬಂದಿದ್ದಾರೆ. ಮಾನವೀಯ ಕಾರ್ಯ ಮಾಡಿದ ಕಂಕನಾಡಿ ಗ್ರಾಮಾಂತರ ಠಾಣೆಯ ಎಎಸ್ಐ ಹರೀಶ್ ಕೆ. ಮತ್ತು ಕಾನ್ ಸ್ಟೇಬಲ್ ವಿಜಯ್ ಕುಮಾರ್ ಅವರನ್ನು ಪೊಲೀಸ್ ಕಮಿಷನರ್ ಸನ್ಮಾನಿಸಿದ್ದಾರೆ.


ಗುರುವಾಯನಕೆರೆಯ ಶಾಹಿದಾ (29) ಎಂಬ ಮಹಿಳೆಗೆ ಎ.23ರಂದು ರಾತ್ರಿ ಹೆರಿಗೆ ನೋವು ಕಾಣಿಸಿತ್ತು. ಈ ಹಿನ್ನೆಲೆಯಲ್ಲಿ ಆಕೆಯ ಗಂಡ ಸಿದ್ದಿಕ್ ತನ್ನ ಆಲ್ಟೋ ಕಾರಿನಲ್ಲಿ ಮಂಗಳೂರಿಗೆ ಕರೆತರುತ್ತದ್ದರು. ಫರಂಗಿಪೇಟೆ ಬಳಿಯ ಅರ್ಕುಳಕ್ಕೆ ತಲುಪಿದಾಗ ನಡುರಾತ್ರಿ 1.30 ಗಂಟೆ ಆಗಿತ್ತು. ಕಾರು ರಸ್ತೆ ಮಧ್ಯೆ ಕೆಟ್ಟು ನಿಂತಿದ್ದರಿಂದ ದಿಕ್ಕು ತೋಚದಾಗಿತ್ತು. ಈ ವೇಳೆ, ಅಲ್ಲಿಯೇ ಸ್ವಲ್ಪ ದೂರದಲ್ಲಿ ಚೆಕ್ ಪೋಸ್ಟ್ ಹಾಕಿದ್ದ ಪೊಲೀಸರ ಬಳಿಗೆ ಸಿದ್ದಿಕ್ ತೆರಳಿದ್ದಾರೆ. ಕಾರು ಕೆಟ್ಟು ಹೋಗಿರುವ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದು, ಕೂಡಲೇ ಅಲ್ಲಿದ್ದ ಪೊಲೀಸರು ನೆರವಿಗೆ ಬಂದಿದ್ದಾರೆ.


ಕಂಕನಾಡಿ ಗ್ರಾಮಾಂತರ ಠಾಣೆಯ ಎಎಸ್ಐ ಹರೀಶ್ ತಮ್ಮದೇ ಇಲಾಖೆಯ ಜೀಪಿನಲ್ಲಿ ಗರ್ಭಿಣಿಯನ್ನು ಕುಳ್ಳಿರಿಸಿ, ಮಂಗಳೂರಿನ ಎಜೆ ಆಸ್ಪತ್ರೆಗೆ ತಲುಪಿಸಿದ್ದಾರೆ. ಶಾಹಿದಾ ಬಾನು ಮರುದಿನ ಬೆಳಗ್ಗೆ ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ವಿಷಯ ತಿಳಿದ ಕಮಿಷನರ್ ಶಶಿಕುಮಾರ್, ಇಬ್ಬರು ಸಿಬಂದಿಯನ್ನೂ ಕಚೇರಿಗೆ ಕರೆಸಿ ಸನ್ಮಾನಿಸಿದ್ದಾರೆ. ಸೂಕ್ತ ಸಮಯಕ್ಕೆ ನೆರವಿಗೆ ಬಂದ ಸಿಬಂದಿಯನ್ನು ಅಭಿನಂದಿಸುತ್ತೇನೆ. ಮಹಿಳೆಯ ಬಗ್ಗೆ ಸಿಬಂದಿ ಸಕಾಲದಲ್ಲಿ ನೆರವಿಗೆ ಬರದಿರುತ್ತಿದ್ದರೆ, ತಾಯಿ ಮತ್ತು ಮಗುವಿಗೆ ಅಪಾಯ ಬರುವ ಸಾಧ್ಯತೆಯಿತ್ತು. ಕೆಲವರು ಆಂಬುಲೆನ್ಸ್ ಕರೆಸಿ, ಕಳಿಸಿಕೊಡುವ ವ್ಯವಸ್ಥೆ ಮಾಡುತ್ತಾರೆ. ಆದರೆ, ಇವರು ತಮ್ಮದೇ ವಾಹನದಲ್ಲಿ ಕರೆದೊಯ್ದು ಮಾನವೀಯತೆ ಮೆರೆದಿದ್ದಾರೆ ಎಂದು ಕಮಿಷನರ್ ಇಬ್ಬರು ಸಿಬಂದಿಯ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.


ರಾತ್ರಿ ವೇಳೆ ಕರ್ಫ್ಯೂ ಇರುವುದರಿಂದ ಪೊಲೀಸರು ಹೆದ್ದಾರಿಯ ಅಲ್ಲಲ್ಲಿ ಗಸ್ತು ನಿರತರಾಗಿದ್ದಾರೆ. ಚೆಕ್ ಪೋಸ್ಟ್ ಹಾಕಿ, ವಿನಾಕಾರಣ ವಾಹನ ಚಲಾಯಿಸುವ ಮಂದಿಯನ್ನು ನಿಯಂತ್ರಿಸುತ್ತಿದ್ದಾರೆ. ಇದರ ಮಧ್ಯೆಯೇ ಇಬ್ಬರು ಪೊಲೀಸ್ ಸಿಬಂದಿ ಮಾನವೀಯ ಕಾರ್ಯ ಮಾಡಿದ್ದು ಸಾರ್ವಜನಿಕರ ಮೆಚ್ಚುಗೆಗೆ ಕಾರಣವಾಗಿದೆ.
Two police personnel of Kankandy Rural police station were felicitated by Mangalore Police Commissioner for helping in shifting a pregnant woman undergoing labour pain to the hospital in the police car. The police personnel are Mangaluru rural police station assistant sub-inspector Harish K and constable Vijay Kumar.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm