ಬ್ರೇಕಿಂಗ್ ನ್ಯೂಸ್
26-04-21 10:18 pm Mangaluru correspondent ಕರಾವಳಿ
ಮಂಗಳೂರು, ಎ.26: ಇತಿಹಾಸ ಪ್ರಸಿದ್ಧ ಸೋಮೇಶ್ವರ ಸೋಮನಾಥ ದೇವರ ಬ್ರಹ್ಮಕಲಶ ಸಂಪನ್ನಗೊಂಡ ಬೆನ್ನಲ್ಲೇ ಮಂಗಳೂರು ಸಹಾಯಕ ಕಮಿಷನರ್ ಮದನ್ ಮೋಹನ್ ಎಂಟ್ರಿಯಾಗಿದ್ದು ಕೋವಿಡ್ ನಿಯಮಗಳನ್ನು ಮೀರಿ ಸೇರಿದ್ದ ಜನರನ್ನ ಚದುರಿಸಿದ್ದಾರೆ.

ಕಳೆದ ಬಾರಿ ಕೊರೊನಾ ಲಾಕ್ ಡೌನ್ ನಿಂದ ಮುಂದೂಡಲ್ಪಟ್ಟ ಸೋಮನಾಥ ದೇವರ ಬ್ರಹ್ಮಕಲಶೋತ್ಸವ ಇಂದು ಮಧ್ಯಾಹ್ನ ಸಂಪನ್ನಗೊಂಡಿತ್ತು. ಸೋಮನಾಥನಿಗೆ ಮಹಾಪೂಜೆ ನೆರವೇರಿ ಅನ್ನಸಂತರ್ಪಣೆ ನಡೆಯುತ್ತಿದ್ದ ವೇಳೆ ಸಹಾಯಕ ಕಮಿಷನರ್ ಮದನ್ ಮೋಹನ್, ಉಪವಿಭಾಗದ ಎಸಿಪಿ ರಂಜಿತ್ ಬಂಡಾರು, ಸೋಮೇಶ್ವರ ಗ್ರಾಮದ ಗ್ರಾಮಕರಣಿಕೆ ಲಾವಣ್ಯ ಸೇರಿದಂತೆ ಅಧಿಕಾರಿಗಳ ತಂಡವು ಭೇಟಿ ನೀಡಿದ್ದು ಕ್ಷೇತ್ರದಲ್ಲಿ ಕೋವಿಡ್ ಕಟ್ಟುನಿಟ್ಟಿನ ಮಾರ್ಗಸೂಚಿಯ ನಡುವಲ್ಲಿಯೂ ಸೇರಿದ್ದ ಭಕ್ತಾದಿಗಳನ್ನು ಅರ್ಧ ಗಂಟೆಯೊಳಗೆ ಮನೆ ಸೇರುವಂತೆ ಮೈಕ್ ಅನೌನ್ಸ್ ಮೆಂಟ್ ಮೂಲಕ ಆದೇಶಿಸಿದ್ದಾರೆ. ಕೂಡಲೇ ಅಲ್ಲಿ ಅನ್ನಪ್ರಸಾದಕ್ಕೆ ಸೇರಿದ್ದ ಭಕ್ತಾದಿಗಳೆಲ್ಲರೂ ಚದುರಿ ಮನೆಗೆ ಸೇರಿದ್ದಾರೆ.
ಸೋಮೇಶ್ವರಕ್ಕೆ ಕಳೆದ ಸೋಮವಾರ ಸಾಗಿದ ಹಸಿರು ಹೊರೆಕಾಣಿಕೆಯಲ್ಲೂ ಕೋವಿಡ್ ನಿಯಮ ಉಲ್ಲಂಘನೆಯಾಗಿದೆ ಎಂದು ತಹಶೀಲ್ದಾರ್ ಗುರುಪ್ರಸಾದ್ ಬ್ರಹ್ಮಕಲಶೋತ್ಸವ ಸಮಿತಿಗೆ ನೋಟೀಸು ನೀಡಿದ್ದಲ್ಲದೆ ಉಳ್ಳಾಲ ಠಾಣೆಯಲ್ಲಿ ಕೇಸ್ ದಾಖಲಿಸಿದ್ದರು.

ಇಂದು ಸಂಜೆ ಶತಮಾನದ ನಂತರ ಸೋಮನಾಥ ದೇವರಿಗೆ ಸಮರ್ಪಣೆಯಾದ ನೂತನ ಬ್ರಹ್ಮರಥೋತ್ಸವ ನಡೆಯಲಿದ್ದು, ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರೇ ರಥೋತ್ಸವವನ್ನು ಸರಳವಾಗಿ ಆಚರಿಸಲು ಮುಂದಾಗಿದ್ದಾರೆ. ನಾಳೆಯಿಂದ ಕ್ಷೇತ್ರದಲ್ಲಿ ನಡೆಯುವ ವರ್ಷಾವಧಿ ಉತ್ಸವಕ್ಕೆ ಬ್ರೇಕ್ ಬೀಳುವ ಸಾಧ್ಯತೆಯಿದೆ.

ಭಗವತಿ ಆವಾಹನೆಗೆ ಸಾಕ್ಷಿಯಾದ ಕ್ಷೇತ್ರ !

ವಾಡಿಕೆ ಪ್ರಕಾರ, ಸೋಮೇಶ್ವರದ ವರ್ಷಾವಧಿ ಜಾತ್ರೆಯ ಕೊನೆಯ ದಿನ ಹತ್ತಿರದ ಅಡ್ಕ ಭಗವತೀ ಕ್ಷೇತ್ರದಲ್ಲಿ ನಡೆಯುವ ವರ್ಷಾವಧಿ ಜಾತ್ರೆಯ ಕೊಡಿಯೇರಿಸಲು ಅಪ್ಪಣೆ ಪಡೆಯಲು ಭಗವತೀ ದೈವಗಳು ಸೋಮನಾಥನ ಭೇಟಿ ಮಾಡಿ ಅಪ್ಪಣೆ ಪಡೆಯೋದು ಪ್ರತೀತಿ. ಇಂದು ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಅಡ್ಕ ಭಗವತೀ ಕ್ಷೇತ್ರದ ಅರ್ಚಕರಿಗೆ ಭಗವತೀ ಆವಾಹನೆಯಾಗಿ ಕಾರಣಿಕ ಪ್ರದರ್ಶನವಾಗಿದೆ. ಆ ಮೂಲಕ ಸೋಮನಾಥ ಮತ್ತು ಭಗವತೀ ದೈವಗಳ ಅವಿನಾಭಾವ ಸಂಬಂಧಕ್ಕೆ ಸಾಕ್ಷಿ ತೋರಿಸಿದೆ.
Mangalore AC raids and stops Someshwara Temple programme in the middle for violating covid norms even after government has restricted ban on religious activities.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm