ಬ್ರೇಕಿಂಗ್ ನ್ಯೂಸ್
26-08-20 10:46 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 26: ಕೊರೊನಾ ಲಾಕ್ಡೌನ್ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಕಾರ್ಮಿಕರಿಗೂ ರಾಜಯೋಗ ತಂದಿಟ್ಟಿದೆ. ಲಾಕ್ ಡೌನ್ ಬಳಿಕ ತಮ್ಮೂರಿಗೆ ತೆರಳಿದ್ದ ಉತ್ತರ ಭಾರತ ಮೂಲದ ಮರಳು ಕಾರ್ಮಿಕರನ್ನು ಮಂಗಳೂರಿನ ಹೊಯ್ಗೆ ಮಾಫಿಯಾ ವಿಮಾನದಲ್ಲಿ ತರಿಸಿಕೊಂಡಿದೆ ಎನ್ನುವ ಸುದ್ದಿ ಬಂದಿದೆ.
ಲಾಕ್ಡೌನ್ ಬಳಿಕ ಬದುಕಿದರೆ ಬೇಡಿ ತಿಂದೇನು ಎಂದು ತಮ್ಮೂರಿಗೆ ಓಡಿಹೋಗಿದ್ದ ಕಾರ್ಮಿಕರು ಈಗ ಮತ್ತೆ ನಗರಕ್ಕೆ ಕಾಲಿಡತೊಡಗಿದ್ದಾರೆ. ಆದರೆ, ಉತ್ತರ ಭಾರತ ಮೂಲದ ಮರಳು ಕಾರ್ಮಿಕರು ಆಗಮಿಸಲು ರೈಲು ಸಂಚಾರ ಇಲ್ಲದೆ ಕಷ್ಟವಾಗಿದೆ. ಹೀಗಾಗಿ ಮಂಗಳೂರಿನ ಹೊಯ್ಗೆ ಮಾಲಕರು ಸೇರಿ ನೂರಕ್ಕೂ ಹೆಚ್ಚು ಕಾರ್ಮಿಕರನ್ನು ತುರ್ತಾಗಿ ಫ್ಲೈಟಿನಲ್ಲಿ ಕರೆತಂದಿದ್ದಾರೆ ಎನ್ನಲಾಗುತ್ತಿದೆ.

ಎರಡು ದಿನಗಳ ಹಿಂದೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕಾರ್ಮಿಕರನ್ನು ನೋಡಿದ ಅಲ್ಲಿನ ಸಿಬಂದಿಗೇ ಅಚ್ಚರಿಯಾಗಿತ್ತು. ಸಾಧಾರಣ ಮಧ್ಯಮ ವರ್ಗದವರೇ ವಿಮಾನ ಹತ್ತಲು ಅಸಾಧ್ಯ ಎನ್ನುವಂತಿದ್ದರೆ, ಮರಳು ಕಾರ್ಮಿಕರು ಜೀವನದಲ್ಲಿ ಎಂದೂ ಸಿಗದ ಭಾಗ್ಯವನ್ನು ತಮ್ಮ ಮಾಲಕರ ಮೂಲಕ ಅನುಭವಿಸಿದ್ದಾರೆ ಎಂದು ಅಲ್ಲಿನ ಸಿಬಂದಿ ಹೇಳುತ್ತಿದ್ದಾರೆ. ಉತ್ತರ ಪ್ರದೇಶ, ಬಿಹಾರ, ಒರಿಸ್ಸಾ ಮೂಲದ ಕಾರ್ಮಿಕರು ಹೆಚ್ಚಾಗಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಮರಳನ್ನು ತೆಗೆಯುತ್ತಾರೆ. ಜಿಲ್ಲಾಡಳಿತದಿಂದ ಮರಳು ತೆಗೆಯಲು ಅನುಮತಿ ಸಿಕ್ಕಿರದಿದ್ದರೂ, ದಂಧೆಕೋರರು ಈಗಲೇ ಮರಳು ಎತ್ತುವ ಕಾರ್ಯ ಆರಂಭಿಸಿದ್ದಾರೆ.

ಮಂಗಳೂರಿನ ಅಡ್ಯಾರ್, ಕಣ್ಣೂರಿನಲ್ಲಿ ಮರಳು ಎತ್ತುವ ಕಾರ್ಯ ಸರಾಗವಾಗಿ ನಡೆದಿದೆ. ಫಲ್ಗುಣಿ ನದಿಯಿಂದಲೂ ಅಲ್ಲಲ್ಲಿ ಮರಳು ತೆಗೆಯಲು ದಂಧೆಕೋರರು ಕೆಲಸ ಆರಂಭಿಸಿದ್ದಾರೆಂದು ಅಲ್ಲಿನ ಸ್ಥಳೀಯರು ಹೇಳುತ್ತಾರೆ. ಆದರೆ ತುರ್ತಾಗಿ ಮರಳು ತೆಗೆಯಬೇಕಿದ್ದರೆ ಇಲ್ಲಿನ ಕಾರ್ಮಿಕರಿಂದ ಸಾಧ್ಯವಾಗಲ್ಲ. ನದಿಯಲ್ಲಿ ನೀರು ಹೆಚ್ಚಿರುವಾಗ ಮರಳು ತೆಗೆಯುವುದು ಅಪಾಯ ಆಗಿರುವುದರಿಂದ ಸ್ಥಳೀಯ ಕಾರ್ಮಿಕರು ಈ ಕೆಲಸಕ್ಕೆ ಬರಲ್ಲ. ಅದಕ್ಕಾಗಿ ಈ ಹಿಂದೆ ಇಲ್ಲಿ ಮರಳೆತ್ತುವ ಕೆಲಸ ಮಾಡುತ್ತಿದ್ದ ಉತ್ತರ ಭಾರತದ ಕಾರ್ಮಿಕರನ್ನು ಮಾಲಕರು ಮತ್ತೆ ಕರೆಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಮರಳು ಉದ್ಯಮ ನಡೆಸುವ ಒಬ್ಬರಲ್ಲಿ ಕೇಳಿದರೆ, ಹೌದಾ.. ನಂಗೊತ್ತಿಲ್ಲ ಮಾರ್ರೇ.. ಎಂದು ಮೂಗು ಮುರಿಯುತ್ತಾರೆ !
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm