ಬ್ರೇಕಿಂಗ್ ನ್ಯೂಸ್
29-04-21 02:50 pm Mangalore Correspondent ಕರಾವಳಿ
ಉಳ್ಳಾಲ, ಎ.29 : ಪತಿ ಮೃತಪಟ್ಟ ಎರಡು ಗಂಟೆಗಳ ಅಂತರದಲ್ಲಿ ಪತ್ನಿಯೂ ಕೊನೆಯುಸಿರೆಳೆದ ಘಟನೆ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಕಾಂಗ್ರೆಸ್ ಮುಖಂಡ ನಝೀರ್ ಅಹ್ಮದ್(62) ಮತ್ತು ಅವರ ಪತ್ನಿ ಜಮೀಲಾ(54) ಮೃತಪಟ್ಟ ದಂಪತಿಯಾಗಿದ್ದಾರೆ. ನ್ಯುಮೋನಿಯಾದಿಂದ ಬಳಲುತ್ತಿದ್ದ ನಝೀರ್ ಅಹ್ಮದ್ ಅವರಿಗೆ ಬುಧವಾರ ತಡರಾತ್ರಿ ತೀವ್ರ ರಕ್ತದೊತ್ತಡ ಸಮಸ್ಯೆ ಕಾಣಿಸಿಕೊಂಡಿತ್ತು. ಅವರನ್ನು ಕೂಡಲೇ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದು ದಾರಿಮಧ್ಯೆ 12:30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಬಳಿಕ ಮೃತದೇಹವನ್ನು ಮನೆಗೆ ತಂದಿದ್ದು, ಅಂತಿಮ ದರ್ಶನ ಪಡೆದ ನಝೀರ್ ಅಹ್ಮದ್ ಅವರ ಪತ್ನಿ ಜಮೀಲಾ ಅವರು ಪತಿಯ ಅಗಲುವಿಕೆಯಿಂದ ತೀವ್ರ ಖಿನ್ನರಾಗಿದ್ದರು. ತಡರಾತ್ರಿ 2:30ರ ಸುಮಾರಿಗೆ ಅವರಿಗೂ ಹೃದಯಾಘಾತ ಆಗಿದ್ದು ಅವರೂ ಕೊನೆಯುಸಿರೆಳೆದಿದ್ದಾರೆ.
ಮುಸ್ಲಿಂ ಲೀಗ್ ಉಳ್ಳಾಲ ವಲಯ ಪ್ರಧಾನ ಕಾರ್ಯದರ್ಶಿಯಾಗಿದ್ದ ನಝೀರ್ ಅಹ್ಮದ್ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಬಂದು ಎರಡು ಬಾರಿ ನಗರ ಪಂಚಾಯಿತಿಗೆ ಸ್ಪರ್ಧಿಸಿದ್ದರು. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ನ ಜಂಟಿ ಕಾರ್ಯದರ್ಶಿಯಾಗಿ, 15 ವರ್ಷಗಳ ಕಾಲ ಮೇಲಂಗಡಿ ಉರ್ದು ಶಾಲೆಯ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಸದ್ಯ ಉಳ್ಳಾಲ ನಗರಸಭೆಯ ಕುಡಿಯುವ ನೀರಿನ ಗುತ್ತಿಗೆದಾರರಾಗಿದ್ದರು. ಮೃತರ ದಫನ ಕಾರ್ಯ ಗುರುವಾರ ಉಳ್ಳಾಲ ದರ್ಗಾ ವಠಾರದ 'ಮಯ್ಯತ್ ಗಾರ್' ನಲ್ಲಿ ನೆರವೇರಿತು.
Their wife dies just in two hours of Husband death in Ullal, Mangalore. Nazir Ahmed (62) died of high BP and their wife Jamila (54) was in trauma after husband death also passed away.
10-11-25 01:23 pm
Bangalore Correspondent
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm