ಬ್ರೇಕಿಂಗ್ ನ್ಯೂಸ್
29-04-21 10:17 pm Mangaluru correspondent ಕರಾವಳಿ
ಮಂಗಳೂರು, ಎ.29: ನಗರದ ವಳಚ್ಚಿಲ್ ನಲ್ಲಿರುವ ಎಕ್ಸ್ ಪರ್ಟ್ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಲಾಕ್ಡೌನ್ ಹೇರುವ ಮೂಲಕ ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆ ನಿಷೇಧಿಸಿದ್ದರೂ, ಎಕ್ಸ್ ಪರ್ಟ್ ಕಾಲೇಜಿನವರು ತಮ್ಮ ಸಂಸ್ಥೆಯಲ್ಲಿ 30 ಜನ ಪಿಯುಸಿ ವಿದ್ಯಾರ್ಥಿಗಳನ್ನು ಇರಿಸಿಕೊಂಡಿದ್ದು ಹೆತ್ತವರು ಕಾಲೇಜಿಗೆ ಬಂದು ತಮ್ಮ ಜೊತೆ ಕಳಿಸಿಕೊಡಲು ಕೇಳಿಕೊಂಡರೂ ಕಳಿಸದೆ ಲಾಕ್ಡೌನ್ ನಿಯಮವನ್ನು ಉಲ್ಲಂಘಿಸಿದ್ದಾರೆಂದು ಪ್ರಕರಣ ದಾಖಲಾಗಿದೆ.







ಗ್ರಾಮಾಂತರ ಠಾಣೆಯ ಪಿಎಸ್ಐ ಮಂಜುಳಾ ಈ ಬಗ್ಗೆ ದೂರು ದಾಖಲಿಸಿದ್ದು ಠಾಣಾಧಿಕಾರಿ ಕರ್ನಾಟಕ ವಿಪತ್ತು ನಿರ್ವಹಣಾ ಕಾಯ್ದೆ ಪ್ರಕಾರ ಪ್ರಕರಣ ದಾಖಲು ಮಾಡಿದ್ದಾರೆ.
ವಿದ್ಯಾರ್ಥಿಗಳ ದೂರಿನಂತೆ ಪೋಷಕರು ಅವರನ್ನು ಕರೆದೊಯ್ಯಲು ಇಂದು ಬೆಳಗ್ಗೆ ಕಾಲೇಜು ಕ್ಯಾಂಪಸಿಗೆ ಆಗಮಿಸಿದ್ದರು. 20ರಿಂದ 30 ಜನ ಸ್ಥಳಕ್ಕೆ ಬಂದಿದ್ದು ಎಕ್ಸ್ ಪರ್ಟ್ ಸಂಸ್ಥೆಯ ಮುಖ್ಯಸ್ಥ ನರೇಂದ್ರ ನಾಯಕ್ ವಿದ್ಯಾರ್ಥಿಗಳನ್ನು ಕಳಿಸಿಕೊಡಲು ಒಪ್ಪಿಗೆ ನೀಡಿರಲಿಲ್ಲ. ಈ ವೇಳೆ, ಪೊಲೀಸರು ಬಂದಿದ್ದು ಲಾಕ್ಡೌನ್ ಕಾನೂನು ಗಾಳಿಗೆ ತೂರಿದ ಕಾಲೇಜು ಆಡಳಿತದ ವಿರುದ್ಧ ಪೋಷಕರು ದೂರಿಕೊಂಡಿದ್ದರು.
ಈ ಬಗ್ಗೆ ಹೆಡ್ ಲೈನ್ ಕರ್ನಾಟಕದಲ್ಲಿ ವಿಡಿಯೋ ಸಹಿತ ಸುದ್ದಿ ಪ್ರಸಾರ ಮಾಡಲಾಗಿತ್ತು. ವಿಷಯ ಸಾರ್ವಜನಿಕರ ಗಮನ ಸೆಳೆಯುತ್ತಿದ್ದಂತೆ ಪೊಲೀಸರು ಸ್ವಯಂ ಆಗಿ ಕಾಲೇಜು ಮುಖ್ಯಸ್ಥ ನರೇಂದ್ರ ನಾಯಕ್ ಮತ್ತು ಸಿಬಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Kankanady Rural police have filed a case against Narendra Nayak Expert College Valachil for violating covid guidelines and placing students in the hostel without sending them home after lockdown. Parents held a protest demanding to leave students to go home.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm