ಬ್ರೇಕಿಂಗ್ ನ್ಯೂಸ್
29-04-21 10:17 pm Mangaluru correspondent ಕರಾವಳಿ
ಮಂಗಳೂರು, ಎ.29: ನಗರದ ವಳಚ್ಚಿಲ್ ನಲ್ಲಿರುವ ಎಕ್ಸ್ ಪರ್ಟ್ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಲಾಕ್ಡೌನ್ ಹೇರುವ ಮೂಲಕ ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆ ನಿಷೇಧಿಸಿದ್ದರೂ, ಎಕ್ಸ್ ಪರ್ಟ್ ಕಾಲೇಜಿನವರು ತಮ್ಮ ಸಂಸ್ಥೆಯಲ್ಲಿ 30 ಜನ ಪಿಯುಸಿ ವಿದ್ಯಾರ್ಥಿಗಳನ್ನು ಇರಿಸಿಕೊಂಡಿದ್ದು ಹೆತ್ತವರು ಕಾಲೇಜಿಗೆ ಬಂದು ತಮ್ಮ ಜೊತೆ ಕಳಿಸಿಕೊಡಲು ಕೇಳಿಕೊಂಡರೂ ಕಳಿಸದೆ ಲಾಕ್ಡೌನ್ ನಿಯಮವನ್ನು ಉಲ್ಲಂಘಿಸಿದ್ದಾರೆಂದು ಪ್ರಕರಣ ದಾಖಲಾಗಿದೆ.







ಗ್ರಾಮಾಂತರ ಠಾಣೆಯ ಪಿಎಸ್ಐ ಮಂಜುಳಾ ಈ ಬಗ್ಗೆ ದೂರು ದಾಖಲಿಸಿದ್ದು ಠಾಣಾಧಿಕಾರಿ ಕರ್ನಾಟಕ ವಿಪತ್ತು ನಿರ್ವಹಣಾ ಕಾಯ್ದೆ ಪ್ರಕಾರ ಪ್ರಕರಣ ದಾಖಲು ಮಾಡಿದ್ದಾರೆ.
ವಿದ್ಯಾರ್ಥಿಗಳ ದೂರಿನಂತೆ ಪೋಷಕರು ಅವರನ್ನು ಕರೆದೊಯ್ಯಲು ಇಂದು ಬೆಳಗ್ಗೆ ಕಾಲೇಜು ಕ್ಯಾಂಪಸಿಗೆ ಆಗಮಿಸಿದ್ದರು. 20ರಿಂದ 30 ಜನ ಸ್ಥಳಕ್ಕೆ ಬಂದಿದ್ದು ಎಕ್ಸ್ ಪರ್ಟ್ ಸಂಸ್ಥೆಯ ಮುಖ್ಯಸ್ಥ ನರೇಂದ್ರ ನಾಯಕ್ ವಿದ್ಯಾರ್ಥಿಗಳನ್ನು ಕಳಿಸಿಕೊಡಲು ಒಪ್ಪಿಗೆ ನೀಡಿರಲಿಲ್ಲ. ಈ ವೇಳೆ, ಪೊಲೀಸರು ಬಂದಿದ್ದು ಲಾಕ್ಡೌನ್ ಕಾನೂನು ಗಾಳಿಗೆ ತೂರಿದ ಕಾಲೇಜು ಆಡಳಿತದ ವಿರುದ್ಧ ಪೋಷಕರು ದೂರಿಕೊಂಡಿದ್ದರು.
ಈ ಬಗ್ಗೆ ಹೆಡ್ ಲೈನ್ ಕರ್ನಾಟಕದಲ್ಲಿ ವಿಡಿಯೋ ಸಹಿತ ಸುದ್ದಿ ಪ್ರಸಾರ ಮಾಡಲಾಗಿತ್ತು. ವಿಷಯ ಸಾರ್ವಜನಿಕರ ಗಮನ ಸೆಳೆಯುತ್ತಿದ್ದಂತೆ ಪೊಲೀಸರು ಸ್ವಯಂ ಆಗಿ ಕಾಲೇಜು ಮುಖ್ಯಸ್ಥ ನರೇಂದ್ರ ನಾಯಕ್ ಮತ್ತು ಸಿಬಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Kankanady Rural police have filed a case against Narendra Nayak Expert College Valachil for violating covid guidelines and placing students in the hostel without sending them home after lockdown. Parents held a protest demanding to leave students to go home.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm