ಬ್ರೇಕಿಂಗ್ ನ್ಯೂಸ್
04-05-21 11:19 am Mangalore Correspondent ಕರಾವಳಿ
ಮಂಗಳೂರು, ಮೇ 4 : ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ (57) ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬ್ರಹ್ಮಾವರದ ಆವರ್ಸೆ ಪಡುಮನೆ ಮೂಲದ ಸುರೇಂದ್ರ ಶೆಟ್ಟಿ ಮಂಗಳೂರು ವಿ.ವಿ.ಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಮುಂಗಾರು, ಸಂಯುಕ್ತ ಕರ್ನಾಟಕ, ಕನ್ನಡಪ್ರಭ, ವಿಜಯಕರ್ನಾಟಕ, ವಾರ್ತಾ ಭಾರತಿ ಮತ್ತಿತರ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಕೆಲ ಕಾಲ ಕನ್ನಡಪ್ರಭ ಪತ್ರಿಕೆಯ ಮಂಗಳೂರು ಆವೃತ್ತಿ ಮುಖ್ಯಸ್ಥರಾಗಿಯೂ ಕೆಲಸ ಮಾಡಿದ್ದರು.

ಮಂಗಳೂರು ವಿ.ವಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಹಳೆ ವಿದ್ಯಾರ್ಥಿಗಳ ಸಂಘ MAAM ಸ್ಥಾಪಕ ಗೌರವಾಧ್ಯಕ್ಷರಾಗಿದ್ದರು. ವಿಭಾಗದ ಬೆಳ್ಳಿಹಬ್ಬ ಸಮಿತಿಯ ಅಧ್ಯಕ್ಷರಾಗಿದ್ದರು. MAAM ಸಂಘಟನೆ ಮಂಗಳೂರಿನ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರಿಗೆ ಏರ್ಪಡಿಸಿದ ಮನೋಭಿನಂದನ ಸಮಾರಂಭದಲ್ಲಿ ಹೊರತಂದ ಮನೋಭಿನಂದನ ಅಭಿನಂದನಾ ಗ್ರಂಥದ ಸಂಪಾದಕರಾಗಿದ್ದರು. ಕಳೆದ ಎರಡು ವರ್ಷಗಳಿಂದ ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ದುಡಿಯುತ್ತಿದ್ದರು. ಅವರು ಪತ್ನಿ, ಪುತ್ರಿ, ಕುಟುಂಬಸ್ಥರನ್ನು ಅಗಲಿದ್ದಾರೆ.
ಸುರೇಂದ್ರ ಶೆಟ್ಟಿ ನಿಧನಕ್ಕೆ ಮೀಡಿಯಾ ಅಲ್ಯುಮ್ನಿ ಅಸೋಸಿಯೇಷನ್ ಆಫ್ ಮಂಗಳಗಂಗೋತ್ರಿ (MAAM) ಇದರ ಗೌರವಾಧ್ಯಕ್ಷ ವೇಣು ಶರ್ಮ ಸಹಿತ ಎಲ್ಲ ಪದಾಧಿಕಾರಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ. ಸಂಘಟನೆಯ ಆರಂಭದ ದಿನಗಳಿಂದಲೂ ಅವರ ಸಹಭಾಗಿತ್ವ ಮತ್ತು ಮಾರ್ಗದರ್ಶನವನ್ನು ವೇಣು ಶರ್ಮ ಸ್ಮರಿಸಿದ್ದಾರೆ.
Mangalore Senior Journalist Surendra Shetty passes away at 57. He was suffering from health issues and was admitted in the hospital.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm