ಬ್ರೇಕಿಂಗ್ ನ್ಯೂಸ್
04-05-21 12:46 pm Mangalore Correspondent ಕರಾವಳಿ
ಮಂಗಳೂರು, ಮೇ 4 : ನಗರದ ಮೀನುಗಾರಿಕೆ ಬಂದರು ದಕ್ಕೆಯಲ್ಲಿ ಸಾರ್ವಜನಿಕರು ನೇರವಾಗಿ ಮೀನು ಖರೀದಿ ಮಾಡಲು ಬರುತ್ತಿದ್ದರು. ಜನ ಸೇರುವುದರಿಂದ ಸೋಂಕು ಹರಡುತ್ತೆ ಎಂಬ ಭೀತಿಯಲ್ಲಿ ಬಂದರಿನಲ್ಲಿ ಸಾರ್ವಜನಿಕರು ಮೀನು ಖರೀದಿ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಸಕರು ಹಾಗೂ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳ ಜೊತೆ ಹಳೆ ಬಂದರಿನಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಾರ್ವಜನಿಕರು ಮೀನುಗಾರಿಕೆ ಬಂದರಿನಲ್ಲಿ ಕೋವಿಡ್ ಮಾರ್ಗಸೂಚಿ ಗಾಳಿಗೆ ತೂರಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಮೀನು ಖರೀದಿಸುತ್ತಿದ್ದು ಜನಜಂಗುಳಿ ಏರ್ಪಡುತ್ತಿದ್ದು , ಇದರಿಂದ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಬಂದರಿನಲ್ಲಿ ಮೀನು ಖರೀದಿ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಯಮ ಉಲ್ಲಂಘನೆ ಮಾಡಿದಲ್ಲಿ ಅಂತವರ ವಿರುದ್ಧ ದಂಡ ವಸೂಲಿ ಮಾಡುವುದರೊಂದಿಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಸಾರ್ವಜನಿಕರು ಮೀನುಗಳನ್ನು ಸ್ಥಳೀಯ ವ್ಯಾಪ್ತಿಯ ಮೀನು ಮಾರುಕಟ್ಟೆಗಳಲ್ಲಿ ಖರೀದಿಸಬಹುದು. ಅಲ್ಲದೆ, ಸ್ಥಳೀಯ ಮಾರುಕಟ್ಟೆಗಳಲ್ಲಿಯೇ ಕಟ್ಟಿಂಗ್ ಮಾಡುವುದು ಮತ್ತು ಶುಚಿಗೊಳಿಸುವುದನ್ನೂ ಮಾಡಬಹುದು. ಮಂಗಳೂರು ಮೀನುಗಾರಿಕೆ ಬಂದರಿನ ಒಳಗೆ ಹೊರ ರಾಜ್ಯದಿಂದ ಬರುವ ಮೀನುಗಳ ಹೋಲ್ ಸೇಲ್ ಮಾರುಕಟ್ಟೆಯಲ್ಲಿ ಚಿಲ್ಲರೆ ವ್ಯಾಪಾರ ಮಾಡುವಂತಿಲ್ಲ. ಸಾರ್ವಜನಿಕರು ಕೂಡ ಬಂದರಿನಲ್ಲಿ ಅನವಶ್ಯಕ ಓಡಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Covid lockdown effect Entry of people into Bunder Port is prohibited orders Mangalore DC Dr Rajendra Kumar after a meeting held with officals.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm