ಬ್ರೇಕಿಂಗ್ ನ್ಯೂಸ್
04-05-21 05:13 pm Mangalore Correspondent ಕರಾವಳಿ
ಮಂಗಳೂರು, ಮೇ 4 : ಕೊರೊನಾ ಸೋಂಕಿನಿಂದ ಮೃತಪಟ್ಟ ಶವಗಳಿಗೆ ಅಂತ್ಯಸಂಸ್ಕಾರ ನಡೆಸಲು ಸ್ವತಃ ರಕ್ತಸಂಬಂಧಿಗಳೇ ಹಿಂಜರಿಯುತ್ತಿದ್ದರೆ, ಇಲ್ಲೊಬ್ಬರು ಕಾರ್ಪೊರೇಟರ್ ಜನಸೇವೆಯೇ ಜನಾರ್ದನ ಸೇವೆ ಎನ್ನುತ್ತಾ ಕೋವಿಡ್ ಸಂದಿಗ್ಧ ಸ್ಥಿತಿಯಲ್ಲಿ ವಾರಸುದಾರರಿಲ್ಲದ, ಸಂಬಂಧಿಕರು ತ್ಯಜಿಸಿದ ಅನಾಥ ಶವಗಳಿಗೆ ಅಂತ್ಯಕ್ರಿಯೆ ನೆರವೇರಿಸುತ್ತಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯ ದೇರೆಬೈಲ್ ವಾರ್ಡಿನ ಕಾರ್ಪೊರೇಟರ್ ಗಣೇಶ್ ಕುಲಾಲ್, ಎರಡು ವಾರಗಳಿಂದ ತಮ್ಮ ವಿಭಿನ್ನ ಕಾರ್ಯದಿಂದ ಗಮನ ಸೆಳೆದಿದ್ದಾರೆ. ಕಳೆದ ಎರಡು ವಾರಗಳಲ್ಲಿ ವಾರಸುದಾರರಿಲ್ಲದ 12 ಮೃತದೇಹಗಳಿಗೆ ಸ್ವತಃ ಸಂಸ್ಕಾರ ನೆರವೇರಿಸಿದ್ದಾರೆ.

12 ಶವಗಳ ಪೈಕಿ 9 ಕೊರೊನಾ ಸೋಂಕಿನಿಂದ ಮೃತಪಟ್ಟದ್ದಾಗಿದ್ದು ಉಳಿದ ಮೂರು ಮಂದಿ ಇತರೇ ಕಾಯಿಲೆಯಿಂದ ಮೃತಪಟ್ಟವರು. ಇದರಲ್ಲಿ ಕೇರಳ ಹಾಗೂ ಮಡಿಕೇರಿ ಮೂಲದ ವಾರೀಸುದಾರರಿಲ್ಲದ ಶವಗಳೂ ಇದ್ದವು. ಕುಟುಂಬಸ್ಥರು ನಿರಾಕರಿಸಿದ ಎರಡು ಮೃತದೇಹಗಳಿಗೆ ಗಣೇಶ ಕುಲಾಲ್ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ವಿಶೇಷ ಅಂದ್ರೆ ಒಂಬತ್ತು ಶವಗಳು ಮಂಗಳೂರು ತಾಲೂಕಿನದ್ದೇ ಆಗಿದ್ದು ಸಂಬಂಧಿಕರಿದ್ದರೂ ಅಂತ್ಯಕ್ರಿಯೆ ಸಾಧ್ಯವಾಗದೆ ಗಣೇಶ ಕುಲಾಲರೇ ಸ್ವತಃ ಖರ್ಚಿನಲ್ಲಿ ಸಂಸ್ಕಾರ ನೆರವೇರಿಸಿದ್ದಾರೆ. ಐವರು ಮಹಿಳೆಯರಾಗಿದ್ದು, ಏಳು ಮಂದಿ ಪುರುಷರು. ಎಲ್ಲ ಶವಗಳನ್ನೂ ನಂದಿಗುಡ್ಡೆ ಹಾಗೂ ಬೋಳೂರು ಚಿತಾಗಾರದಲ್ಲಿ ವಿಧಿವತ್ತಾಗಿ ಭಸ್ಮ ಮಾಡಿದ್ದಾರೆ.

ಗಣೇಶ ಕುಲಾಲ್ ಸಾಮಾಜಿಕವಾಗಿಯೂ ಕೆಲಸ ಮಾಡುತ್ತಿದ್ದಾರೆ. ಅಗತ್ಯ ಇದ್ದವರಿಗೆ ಆ್ಯಂಬುಲೆನ್ಸ್ ವ್ಯವಸ್ಥೆ ಜೊತೆಗೆ ಚಿತಾಗಾರದಲ್ಲಿ ಅಂತ್ಯಸಂಸ್ಕಾರಕ್ಕೆ ಉಚಿತ ವ್ಯವಸ್ಥೆಯನ್ನೂ ನೆರವೇರಿಸಿದ್ದಾರೆ. ಕೊರೊನಾ ಸೋಂಕು ಸಮಾಜದಲ್ಲಿ ಭೀತಿ ಮೂಡಿಸಿರುವಾಗ, ಆಸ್ಪತ್ರೆಯಲ್ಲಿ ಶವಗಳನ್ನು ಬಿಟ್ಟು ಸ್ವಂತ ಸಂಬಂಧಿಗಳೇ ದೂರ ಹೋಗುತ್ತಿರುವಾಗ ಒಬ್ಬ ಜನಪ್ರತಿನಿಧಿಯಾಗಿ ಗಣೇಶ್ ಕುಲಾಲ್ ಉತ್ತಮ ಕಾರ್ಯ ಮಾಡುತ್ತಿದ್ದು ತಮ್ಮ ಕೆಲಸದಿಂದಲೇ ಗಮನ ಸೆಳೆದಿದ್ದಾರೆ.
Mangalore MCC Derebail Corporater Ganesh Kulal is giving dignified burial to unclaimed Covid-19 victims in the city. The Corporater has gained huge appreciation for his humanitarian work.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm