ಬ್ರೇಕಿಂಗ್ ನ್ಯೂಸ್
04-05-21 05:13 pm Mangalore Correspondent ಕರಾವಳಿ
ಮಂಗಳೂರು, ಮೇ 4 : ಕೊರೊನಾ ಸೋಂಕಿನಿಂದ ಮೃತಪಟ್ಟ ಶವಗಳಿಗೆ ಅಂತ್ಯಸಂಸ್ಕಾರ ನಡೆಸಲು ಸ್ವತಃ ರಕ್ತಸಂಬಂಧಿಗಳೇ ಹಿಂಜರಿಯುತ್ತಿದ್ದರೆ, ಇಲ್ಲೊಬ್ಬರು ಕಾರ್ಪೊರೇಟರ್ ಜನಸೇವೆಯೇ ಜನಾರ್ದನ ಸೇವೆ ಎನ್ನುತ್ತಾ ಕೋವಿಡ್ ಸಂದಿಗ್ಧ ಸ್ಥಿತಿಯಲ್ಲಿ ವಾರಸುದಾರರಿಲ್ಲದ, ಸಂಬಂಧಿಕರು ತ್ಯಜಿಸಿದ ಅನಾಥ ಶವಗಳಿಗೆ ಅಂತ್ಯಕ್ರಿಯೆ ನೆರವೇರಿಸುತ್ತಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯ ದೇರೆಬೈಲ್ ವಾರ್ಡಿನ ಕಾರ್ಪೊರೇಟರ್ ಗಣೇಶ್ ಕುಲಾಲ್, ಎರಡು ವಾರಗಳಿಂದ ತಮ್ಮ ವಿಭಿನ್ನ ಕಾರ್ಯದಿಂದ ಗಮನ ಸೆಳೆದಿದ್ದಾರೆ. ಕಳೆದ ಎರಡು ವಾರಗಳಲ್ಲಿ ವಾರಸುದಾರರಿಲ್ಲದ 12 ಮೃತದೇಹಗಳಿಗೆ ಸ್ವತಃ ಸಂಸ್ಕಾರ ನೆರವೇರಿಸಿದ್ದಾರೆ.

12 ಶವಗಳ ಪೈಕಿ 9 ಕೊರೊನಾ ಸೋಂಕಿನಿಂದ ಮೃತಪಟ್ಟದ್ದಾಗಿದ್ದು ಉಳಿದ ಮೂರು ಮಂದಿ ಇತರೇ ಕಾಯಿಲೆಯಿಂದ ಮೃತಪಟ್ಟವರು. ಇದರಲ್ಲಿ ಕೇರಳ ಹಾಗೂ ಮಡಿಕೇರಿ ಮೂಲದ ವಾರೀಸುದಾರರಿಲ್ಲದ ಶವಗಳೂ ಇದ್ದವು. ಕುಟುಂಬಸ್ಥರು ನಿರಾಕರಿಸಿದ ಎರಡು ಮೃತದೇಹಗಳಿಗೆ ಗಣೇಶ ಕುಲಾಲ್ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ವಿಶೇಷ ಅಂದ್ರೆ ಒಂಬತ್ತು ಶವಗಳು ಮಂಗಳೂರು ತಾಲೂಕಿನದ್ದೇ ಆಗಿದ್ದು ಸಂಬಂಧಿಕರಿದ್ದರೂ ಅಂತ್ಯಕ್ರಿಯೆ ಸಾಧ್ಯವಾಗದೆ ಗಣೇಶ ಕುಲಾಲರೇ ಸ್ವತಃ ಖರ್ಚಿನಲ್ಲಿ ಸಂಸ್ಕಾರ ನೆರವೇರಿಸಿದ್ದಾರೆ. ಐವರು ಮಹಿಳೆಯರಾಗಿದ್ದು, ಏಳು ಮಂದಿ ಪುರುಷರು. ಎಲ್ಲ ಶವಗಳನ್ನೂ ನಂದಿಗುಡ್ಡೆ ಹಾಗೂ ಬೋಳೂರು ಚಿತಾಗಾರದಲ್ಲಿ ವಿಧಿವತ್ತಾಗಿ ಭಸ್ಮ ಮಾಡಿದ್ದಾರೆ.

ಗಣೇಶ ಕುಲಾಲ್ ಸಾಮಾಜಿಕವಾಗಿಯೂ ಕೆಲಸ ಮಾಡುತ್ತಿದ್ದಾರೆ. ಅಗತ್ಯ ಇದ್ದವರಿಗೆ ಆ್ಯಂಬುಲೆನ್ಸ್ ವ್ಯವಸ್ಥೆ ಜೊತೆಗೆ ಚಿತಾಗಾರದಲ್ಲಿ ಅಂತ್ಯಸಂಸ್ಕಾರಕ್ಕೆ ಉಚಿತ ವ್ಯವಸ್ಥೆಯನ್ನೂ ನೆರವೇರಿಸಿದ್ದಾರೆ. ಕೊರೊನಾ ಸೋಂಕು ಸಮಾಜದಲ್ಲಿ ಭೀತಿ ಮೂಡಿಸಿರುವಾಗ, ಆಸ್ಪತ್ರೆಯಲ್ಲಿ ಶವಗಳನ್ನು ಬಿಟ್ಟು ಸ್ವಂತ ಸಂಬಂಧಿಗಳೇ ದೂರ ಹೋಗುತ್ತಿರುವಾಗ ಒಬ್ಬ ಜನಪ್ರತಿನಿಧಿಯಾಗಿ ಗಣೇಶ್ ಕುಲಾಲ್ ಉತ್ತಮ ಕಾರ್ಯ ಮಾಡುತ್ತಿದ್ದು ತಮ್ಮ ಕೆಲಸದಿಂದಲೇ ಗಮನ ಸೆಳೆದಿದ್ದಾರೆ.
Mangalore MCC Derebail Corporater Ganesh Kulal is giving dignified burial to unclaimed Covid-19 victims in the city. The Corporater has gained huge appreciation for his humanitarian work.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm