ಬ್ರೇಕಿಂಗ್ ನ್ಯೂಸ್
05-05-21 02:25 pm Mangalore Correspondent ಕರಾವಳಿ
ಮಂಗಳೂರು, ಮೇ 5: ದೇಶದಲ್ಲಿ ಆಮ್ಲಜನಕ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಬಹರೈನ್ ದೇಶ ಸಹಾಯ ಹಸ್ತ ಚಾಚಿದೆ. 40 ಮೆಟ್ರಿಕ್ ಟನ್ ಆಕ್ಸಿಜನ್ ಹೊತ್ತ ಹಡಗು ಮಂಗಳೂರಿನ ಎನ್ಎಂಪಿಟಿ ಬಂದರು ತಲುಪಿದೆ.

ಭಾರತ ಮತ್ತು ಬಹರೇನ್ ನಡುವಿನ ಒಪ್ಪಂದ ಪ್ರಕಾರ ಸಮುದ್ರ ಸೇತು ಯೋಜನೆಯಡಿ ಭಾರತೀಯ ಕರಾವಳಿ ತಟರಕ್ಷಣಾ ಪಡೆಯ ಐಎನ್ಎಸ್ ತಲ್ವಾರ್ ಹಡಗು ಆಕ್ಸಿಜನ್ ಟ್ಯಾಂಕರನ್ನು ಹೊತ್ತು ತಂದಿದೆ. 20 ಮೆಟ್ರಿಕ್ ಟನ್ ತೂಕದ ಎರಡು ಲಿಕ್ವಿಡ್ ಆಕ್ಸಿಜನ್ ಟ್ಯಾಂಕರನ್ನು ಹಡಗಿನಲ್ಲಿ ತರಲಾಗಿದ್ದು ಮಧ್ಯಾಹ್ನ ಸುಮಾರಿಗೆ ಎನ್ಎಂಪಿಟಿ ಬಂದರಿನಲ್ಲಿ ತಂದಿರಿಸಲಾಗಿದೆ.

ಆಕ್ಸಿಜನ್ ಹಡಗು ಬರುವ ಹಿನ್ನೆಲೆಯಲ್ಲಿ ಎನ್ಎಂಪಿಟಿ ಬಂದರಿನಲ್ಲಿ ಇತರೇ ಹಡಗುಗಳನ್ನು ನಿರ್ಬಂಧಿಸಲಾಗಿತ್ತು. ಬಂದರಿನಲ್ಲಿ ಎಲ್ಲ ಶಿಪ್ಪಿಂಗ್ ಕಾರ್ಯಾಚರಣೆ ಸ್ಥಗಿತಗೊಳಿಸಿ ಸರಕು ನಿರ್ವಹಣೆಯ ಕ್ರೇನ್ ಗಳನ್ನು ಆಕ್ಸಿಜನ್ ಟ್ಯಾಂಕರ್ ಇಳಿಸಲು ಬಳಸಿಕೊಳ್ಳಲಾಗಿದೆ.

ಈಗಾಗ್ಲೇ ಭಾರತದಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ನೂರಾರು ಮಂದಿ ಸಾವನ್ನಪ್ಪುತ್ತಿದ್ದು ಹಲವಾರು ನೆರೆ ರಾಷ್ಟ್ರಗಳು ನೆರವು ನೀಡುತ್ತಿವೆ. ಯುಎಇ, ಸೌದಿ ಅರೇಬಿಯಾ ರಾಷ್ಟ್ರಗಳು ಈಗಾಗ್ಲೇ ನೆರವು ನೀಡಿದ್ದು ಬಹರೈನ್ ಈಗ 40 ಮೆಟ್ರಿಕ್ ಟನ್ ಆಕ್ಸಿಜನ್ ಕಳುಹಿಸಿ ಕೊಟ್ಟಿದೆ.

ಕೇಂದ್ರ ಸರಕಾರದ ಸೂಚನೆಯಂತೆ ಮಂಗಳೂರು ಮೂಲಕ ಲಿಕ್ವಿಡ್ ಆಕ್ಸಿಜನ್ ಬಂದಿದ್ದು ಅದನ್ನು ಯಾವ ಜಿಲ್ಲೆಗೆ ಪೂರೈಸಬೇಕು ಎಂಬ ಬಗ್ಗೆ ರಾಜ್ಯ ಸರಕಾರ ನಿರ್ಧರಿಸಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.
Navy Deployed Warship I N S Talwar brings 20 metric tonnes of Medical liquid oxygen to Mangalore NMPT Port from Bahrain as a result of skyrocketing covid-19 infections.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm