ಬ್ರೇಕಿಂಗ್ ನ್ಯೂಸ್
05-05-21 03:22 pm Mangalore Correspondent ಕರಾವಳಿ
ಉಳ್ಳಾಲ, ಮೇ 5 : ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಿದ್ದು ಕೋವಿಡ್ ಬಾಧಿತರಿಗಾಗಿ ತುರ್ತು ಸಹಾಯವಾಣಿ ರಚಿಸಲಾಗಿದೆ. ಉಳ್ಳಾಲ ನಗರಸಭೆ ಕೋವಿಡ್ ಸಹಾಯವಾಣಿ 8024487311 ಆಗಿರುತ್ತದೆ ಎಂದು ಉಳ್ಳಾಲ ನಗರಸಭೆ ಪೌರಾಯುಕ್ತ ರಾಯಪ್ಪ ತಿಳಿಸಿದ್ದಾರೆ.
ನಗರ ವ್ಯಾಪ್ತಿಯಲ್ಲಿ ಮೇ 4 ರ ವರೆಗೆ 202 ಕೋವಿಡ್ ಪಾಸಿಟಿವ್ ಕೇಸ್ ಕಂಡುಬಂದಿದೆ. ಅದರಲ್ಲಿ 164 ಮಂದಿ ಹೋಮ್ ಐಸೊಲೇಷನಲ್ಲಿ ಇದ್ದು ನಗರಸಭೆ ಅಧಿಕಾರಿಗಳು ನಿತ್ಯವೂ ಅವರಿಗೆ ಫೋನ್ ಮಾಡಿ ಆರೋಗ್ಯ ವಿಚಾರಿಸುತ್ತಿದ್ದಾರೆ. 38 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಪಾಸಿಟಿವ್ ಬಂದ ಕೂಡಲೇ ಆಸ್ಪತ್ರೆಗೆ ದಾಖಲಾಗುವ ಅಗತ್ಯ ಇಲ್ಲ. ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯಬಹುದು.

ನಗರಸಭೆಯ ಅಧಿಕಾರಿಗಳು ಹೋಮ್ ಐಸೊಲೇಷನ್ ನಲ್ಲಿ ಇರುವವರನ್ನು ದಿನನಿತ್ಯವೂ ಸಂಪರ್ಕಿಸಿ ರೋಗ ಉಲ್ಬಣವಾದಲ್ಲಿ ಅವರನ್ನು ಆಸ್ಪತ್ರೆ ಸೇರಿಸುವ ಕಾರ್ಯ ನಡೆಸುತ್ತಾರೆ. ಜನರು ಸಾಮಾಜಿಕ ಅಂತರ, ಮಾಸ್ಕ್ ಹಾಕದೆ ಬೇಜವಾಬ್ದಾರಿಯಿಂದ ವರ್ತಿಸುವುದು ಸರಿಯಲ್ಲ. ಸರಕಾರದ ಆದೇಶಗಳನ್ನು ಗಾಳಿಗೆ ತೂರುವವರ ವಿರುದ್ಧ ದಂಡ ಪ್ರಯೋಗಿಸಿದ್ದೇವೆ. ಕೋವಿಡ್ ಎರಡನೇ ಅಲೆಯು ತೀವ್ರವಾಗಿ ಹರಡುತ್ತಿದ್ದು ಸಾರ್ವಜನಿಕರು ಸರಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆಗೆ ಮನೆಯಲ್ಲೇ ಇದ್ದು ಅಗತ್ಯವಿದ್ದರೆ ಮಾತ್ರ ಹೊರಗಡೆ ಬರುವಂತೆ ಪೌರಾಯುಕ್ತ ರಾಯಪ್ಪ ಅವರು ಎಚ್ಚರಿಕೆ ನೀಡಿದರು.
ನಗರ ಉಪಾಧ್ಯಕ್ಷ ಆಯುಬ್ ಮಂಚಿಲ ಮಾತನಾಡಿ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲೂ ಕೋವಿಡ್ ನಿಯಮ ಪಾಲಿಸುವಂತೆ ನಗರಸಭೆಯ ವತಿಯಿಂದ ಲಿಖಿತವಾಗಿ ವಿನಂತಿಸಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಕೋವಿಡ್ ತೀವ್ರತೆಯನ್ನು ಗಮನಿಸಿ ನಗರಸಭೆ ವತಿಯಿಂದ ದಿನಸಿ ಕಿಟ್ ಗಳನ್ನು ವಿತರಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದು. ಮುಂಬರುವ ದಿನಗಳಲ್ಲಿ ಕೋವಿಡ್ ಬಾಧಿತರನ್ನು ಆಸ್ಪತ್ರೆಗೆ ಕರೆದೊಯ್ಯಲು ನಗರಸಭೆಯಿಂದ ಆಂಬುಲೆನ್ಸ್ ವ್ಯವಸ್ಥೆಯನ್ನು ಮಾಡಲಾಗುವುದೆಂದು ಹೇಳಿದರು. ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಝರಿನಾ ಬಾನು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
For the help of Covid - 19 patients, the Ullal town municipal corporation had released a helpline no during distress 8024487311.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm