ಬ್ರೇಕಿಂಗ್ ನ್ಯೂಸ್
06-05-21 05:23 pm Mangalore Correspondent ಕರಾವಳಿ
ಮಂಗಳೂರು, ಮೇ 6 : ಬಹ್ರೇನ್ನಿಂದ ಮಂಗಳೂರಿಗೆ ತರಿಸಿದ 40 ಮೆಟ್ರಿಕ್ ಟನ್ ಆಕ್ಸಿಜನ್ ಸಂಪೂರ್ಣ ಕ್ರೆಡಿಟ್ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸಲ್ಲಬೇಕೆಂಬ ಸ್ಥಳೀಯ ಬಿಜೆಪಿ ನಾಯಕರ ವಾದಕ್ಕೆ ಮಾಜಿ ಸಚಿವ ಯು.ಟಿ. ಖಾದರ್ ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಕುಹಕವಾಡಿರುವ ಯು.ಟಿ ಖಾದರ್, ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಬಳಸಲು ನಮಗೆ ಅವಕಾಶವಿಲ್ಲ. ದೂರದ ಬಹ್ರೇನ್ನಿಂದ ಕಳಿಸಿಕೊಟ್ಟ ಆಕ್ಸಿಜನ್ ಹಡಗೇರಿ ಖುಷಿಪಡುವ ಬಿಜೆಪಿ ನಾಯಕರ ಆತ್ಮನಿರ್ಭರಕ್ಕೆ ಚಪ್ಪಾಳೆ ಹೊಡೆಯಬೇಕೋ, ದೀಪ ಹಚ್ಚಬೇಕೋ ತಿಳಿಯುತ್ತಿಲ್ಲ. ಧಿಕ್ಕಾರವಿದೆ ನಿಮ್ಮ ಆಡಳಿತ ವೈಫಲ್ಯಕ್ಕೆ ಅಂತಾ ಆಕ್ಸಿಜನ್ ಟ್ಯಾಂಕ್ ಎದುರು ನಿಂತ ಬಿಜೆಪಿ ನಾಯಕರ ಫೋಟೋ ಹಾಕಿ ವ್ಯಂಗ್ಯವಾಡಿದ್ದಾರೆ.

ನಿನ್ನೆ ಬಹ್ರೇನ್ ಮತ್ತು ಭಾರತ ಸರ್ಕಾರದ ನಡುವಿನ ಸಹಕಾರ ಒಪ್ಪಂದದಂತೆ 30 ಮೆಟ್ರಿಕ್ ಟನ್ನ ಎರಡು ಲಿಕ್ವಿಡ್ ಆಕ್ಸಿಜನ್ ಟ್ಯಾಂಕರ್ಗಳು ನವಮಂಗಳೂರು ಬಂದರಿಗೆ ಬಂದಿತ್ತು. ಭಾರತೀಯ ಕರಾವಳಿ ತಟರಕ್ಷಣಾ ಪಡೆಯ ಐಎನ್ಎಸ್ ತಲ್ವಾರ್ ಆಕ್ಸಿಜನ್ ಟ್ಯಾಂಕರ್ ಗಳನ್ನು ಬಹ್ರೇನ್ನಿಂದ ಹೊತ್ತು ತಂದಿದ್ದು, ಕ್ರೇನ್ ಮೂಲಕ ಟ್ಯಾಂಕರ್ ಗಳನ್ನು ಬಂದರಿನಲ್ಲಿ ಕೆಳಗಿಳಿಸಲಾಗಿತ್ತು.
ನೌಕೆಯಲ್ಲಿ ಕೊವೀಡ್ ಚಿಕಿತ್ಸೆಗೆ ಬಳಸುವ ಇತರ ವೈದ್ಯಕೀಯ ಉಪಕರಣಗಳನ್ನೂ ಕಳಿಸಿಕೊಡಲಾಗಿದ್ದು, ಯುದ್ಧ ನೌಕೆಯನ್ನು ಸ್ವಾಗತ ಮಾಡಲು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಅಧಿಕಾರಿಗಳು ಜನಪ್ರತಿನಿಧಿಗಳು ಭಾಗವಹಿಸಿದ್ದರು.
Read: ಬಹರೈನ್ ಸಹಾಯ ಹಸ್ತ ; ಮಂಗಳೂರಿಗೆ ಬಂತು 40 ಮೆಟ್ರಿಕ್ ಟನ್ ಆಕ್ಸಿಜನ್ !!
ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಬಳಸಲು ನಮಗೆ ಅವಕಾಶವಿಲ್ಲ. ದೂರದ ಬಹರೈನ್ ನಿಂದ ಬಂದ ಆಕ್ಸಿಜನ್ ಹಡಗೇರಿ ಖುಷಿಪಡುವ ಬಿಜೆಪಿ ನಾಯಕರ ಆತ್ಮನಿರ್ಭರತೆಗೆ ಚಪ್ಪಾಳೆ ಹೊಡೆಯ ಬೇಕೋ ದೀಪ ಹಚ್ಚ ಬೇಕೋ ತಿಳಿಯುತ್ತಿಲ್ಲ.
— UT Khadér (@utkhader) May 6, 2021
ಧಿಕ್ಕಾರವಿದೆ ನಿಮ್ಮ ಅಸಮರ್ಥತೆಗೆ.@BJP4Karnataka @nalinkateel @KotasBJP @vedavyasbjp pic.twitter.com/A2cwEbyWxI
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm