ಬ್ರೇಕಿಂಗ್ ನ್ಯೂಸ್
07-05-21 01:04 pm Mangalore Correspondent ಕರಾವಳಿ
ಮಂಗಳೂರು, ಮೇ 7: ಅಡ್ಡ ಬಂದ ಸ್ಕೂಟರನ್ನು ತಪ್ಪಿಸಲು ಹೋಗಿ ಬೈಕ್ ಸವಾರ ನಿಯಂತ್ರಣಕ್ಕೆ ಸಿಗದೆ ಪಲ್ಟಿ ಹೊಡೆದ ಘಟನೆ ನಗರದ ಪದವಿನಂಗಡಿಯಲ್ಲಿ ಇಂದು ಬೆಳಗ್ಗೆ ನಡೆದಿದ್ದು ಇಡೀ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

ಬೋಂದೆಲ್ ಕಡೆಯಿಂದ ಕೆಟಿಎಂ ಬೈಕಿನಲ್ಲಿ ವೇಗವಾಗಿ ಬರುತ್ತಿದ್ದ ಸವಾರ ಪ್ರಶಾಂತ್ ಎಂಬ ಯುವಕ ಅಡ್ಡಲಾಗಿ ಬಂದ ಸ್ಕೂಟರನ್ನು ತಪ್ಪಿಸಲು ಹೋಗಿ ಎರಡು ಪಲ್ಟಿ ಹೊಡೆದಿದ್ದಾನೆ. ಸ್ಕೂಟರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಿ, ಮತ್ತೊಂದು ಬೈಕಿನ ನಡುವೆ ನುಗ್ಗಿ ಬಂದ ಕೆಟಿಎಂ ಬೈಕ್ ಅಂಗಡಿಯೊಂದರ ಮುಂದೆ ಇರಿಸಿದ್ದ ಕೋಲ್ಡ್ ಡ್ರಿಂಕ್ಸ್ ಬಾಟಲಿಗಳ ಬಾಕ್ಸ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ.

ಬೈಕ್ ಪಲ್ಟಿಯಾಗಿ ಅಲ್ಲಿಯೇ ರಸ್ತೆಗೆ ಬಿದ್ದರೆ, ಸವಾರ ನೇರವಾಗಿ ಗಾಳಿಯಲ್ಲಿ ಮೇಲ್ಮುಖವಾಗಿ ಉಲ್ಟಾ ಎಸೆಯಲ್ಪಟ್ಟು ರಸ್ತೆಗೆ ಬಿದ್ದಿದ್ದಾನೆ. ಬೈಕ್ ರಸ್ತೆಗೆ ಅಡ್ಡ ಬಿದ್ದ ಪರಿಣಾಮ ಹಿಂಭಾಗದಿಂದ ಬರುತ್ತಿದ್ದ ಮತ್ತೊಂದು ಬೈಕಿನ ಮೇಲೆ ತಾಗಿ ಅದು ಕೂಡ ಉರುಳಿ ಬಿದ್ದಿದೆ. ಅದರಲ್ಲಿದ್ದ ಸವಾರ ಸ್ವಲ್ಪ ಗಾಯಗೊಂಡು ಅಲ್ಲಿಂದ ಎದ್ದು ಹೋಗುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.


ಬೈಕ್ ಸವಾರ ಪ್ರಶಾಂತ್ ನೀರುಮಾರ್ಗದಲ್ಲಿ ಇರುವ ಚೇತನಾ ಎಂಟರ್ ಪ್ರೈಸಸ್ ಎಂಬ ಅಂಗಡಿಯಲ್ಲಿ ಕೆಲಸಕ್ಕಿದ್ದಾನೆ ಎನ್ನಲಾಗುತ್ತಿದ್ದು ಗಂಭೀರ ಗಾಯಗೊಂಡ ಆತನನ್ನು ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಘಟನೆ ನಡೆದಿದೆ.
Read: ಬೈಕ್ ಪಲ್ಟಿ ; ಗಂಭೀರ ಸ್ಥಿತಿಯಲ್ಲಿದ್ದ ಯುವಕ ಮೃತ್ಯು
Video:
Horrific accident at Padavinangady youth thrown in the air after a bike accident in Mangalore. The KTM bike rider met with an accident after he went to save the Active rider who stood at the middle of the road.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am