ಬ್ರೇಕಿಂಗ್ ನ್ಯೂಸ್
08-05-21 03:56 pm Mangalore Correspondent ಕರಾವಳಿ
ಪುತ್ತೂರು, ಮೇ 8: ಸಹಕಾರಿ ರಂಗದಲ್ಲಿ ಅಗ್ರಗಣ್ಯ ಎನಿಸಿಕೊಂಡಿರುವ ಕ್ಯಾಂಪ್ಕೋ ಸಂಸ್ಥೆಯಿಂದ ಕೊರೊನಾ ಸೋಂಕಿತರಿಗೆ ನೆರವಾಗುವ ನಿಟ್ಟಿನಲ್ಲಿ ಒಂದು ಕೋಟಿ ಮೌಲ್ಯದ ಆಕ್ಸಿಜನ್ ನೀಡಲು ನಿರ್ಧರಿಸಲಾಗಿದೆ.

ಇದರ ಅಂಗವಾಗಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ 60 ಲಕ್ಷ ರೂ. ವೆಚ್ಚದಲ್ಲಿ ಆಕ್ಸಿಜನ್ ಪ್ಲಾಂಟ್ ಸ್ಥಾಪನೆಗೆ ಕ್ಯಾಂಪ್ಕೋ ಮುಂದಾಗಿದ್ದು, ಇನ್ನು 15-20 ದಿನಗಳಲ್ಲಿ ಪ್ಲಾಂಟ್ ರೆಡಿಯಾಗಲಿದೆ ಎಂದು ಕ್ಯಾಂಪ್ಕೋ ಸಂಸ್ಥೆಯ ಮಾಜಿ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಮಾಹಿತಿ ನೀಡಿದ್ದಾರೆ.

ಇದಲ್ಲದೆ, 40 ಲಕ್ಷ ರೂ. ವೆಚ್ಚದಲ್ಲಿ ಜಂಬೋ ಆಕ್ಸಿಜನ್ ಸಿಲಿಂಡರ್ ಗಳನ್ನು ಖರೀದಿಸಿ, ಅಗತ್ಯವುಳ್ಳ ಆಸ್ಪತ್ರೆಗಳಿಗೆ ವಿತರಿಸಲು ಚಿಂತನೆ ನಡೆಸಲಾಗಿದೆ. ದಕ್ಷಿಣ ಕನ್ನಡ, ಕಾಸರಗೋಡು, ಉತ್ತರ ಕನ್ನಡ, ಉತ್ತರ ಕರ್ನಾಟಕ ಹೀಗೆ ಎಲ್ಲಿಗೆ ಅಗತ್ಯವಿದೆಯೋ ಅಲ್ಲಿಗೆ ಈ ಸಿಲಿಂಡರ್ ಗಳನ್ನು ಒದಗಿಸಲಾಗುವುದು. ಒಂದು ಜಂಬೋ ಸಿಲಿಂಡರಿಗೆ 10ರಿಂದ 13 ಸಾವಿರ ದರವಿದ್ದು, ಅದನ್ನು ನೇರವಾಗಿ ಕಂಪನಿಗಳಿಂದ ಖರೀದಿಸಿ ಆಸ್ಪತ್ರೆಗಳಿಗೆ ತಲುಪಿಸಲಾಗುವುದು ಎಂದವರು ಹೇಳಿದ್ದಾರೆ.

ಕೋವಿಡ್ ಸೋಂಕಿತರಿಗೆ ನೆರವಾಗುವ ದೃಷ್ಟಿಯಿಂದ ಒಟ್ಟು ಒಂದು ಕೋಟಿ ರೂ. ವ್ಯಯಿಸಲಾಗುವುದು ಎಂದಿದ್ದಾರೆ. ಈಗಾಗ್ಲೇ ಜಿಲ್ಲಾಡಳಿತ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್ ಸ್ಥಾಪನೆಗೆ ಮುಂದಾಗಿದೆ. ಇದೀಗ ಬಿಜೆಪಿ ನಾಯಕರ ಮನಿಯನ್ನು ಪರಿಗಣಿಸಿ ಕ್ಯಾಂಪ್ಕೋ ವತಿಯಿಂದ ಪುತ್ತೂರಿನಲ್ಲಿ ಆಕ್ಸಿಜನ್ ಪ್ಲಾಂಟ್ ಸ್ಥಾಪಿಸಲಾಗುತ್ತಿದೆ.
Campco extends a helping hand to fight Covid by planning to set up an Oxygen plant worth 60 lakhs at Puttur Govt Hospital. Also the company has planned to distribute free Jumbo oxygen cylinders to many districts of Karnataka worth 40 lakhs.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm