ಬ್ರೇಕಿಂಗ್ ನ್ಯೂಸ್
08-05-21 04:59 pm Mangalore Correspondent ಕರಾವಳಿ
ಮಂಗಳೂರು, ಮೇ 8: ಕೋವಿಡ್ ಸೋಂಕು ಕರಾವಳಿಯಲ್ಲಿ ತೀವ್ರವಾಗಿ ಹರಡುತ್ತಿದ್ದು, ಚರ್ಚ್ ಫಾದರ್ ಗಳನ್ನೂ ಬಿಟ್ಟಿಲ್ಲ. ಮಾಹಿತಿ ಪ್ರಕಾರ, ನಗರದ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ 30ಕ್ಕೂ ಹೆಚ್ಚು ಪಾದ್ರಿಗಳು ಹಾಗೂ ಸಿಸ್ಟರ್ ಗಳು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.


ಕಾರವಾರ, ಉಡುಪಿ, ಹಾಸನ, ಚಿಕ್ಕಮಗಳೂರು ಹೀಗೆ ವಿವಿಧೆಡೆ ಚರ್ಚ್ ಗಳಲ್ಲಿ ಫಾದರ್ ಆಗಿರುವ 30ಕ್ಕೂ ಹೆಚ್ಚು ಮಂದಿಗೆ ಕೋವಿಡ್ ಸೋಂಕು ತಗಲಿದೆ. ಇದಕ್ಕಾಗಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಪ್ರತ್ಯೇಕ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.
ಆದರೆ, ಈ ಬಗ್ಗೆ ಅಧಿಕೃತ ಮಾಹಿತಿ ಡಿಎಚ್ಓ ಬಳಿಯೂ ಇಲ್ಲ. ಫಾದರ್ ಮುಲ್ಲರ್ ಆಸ್ಪತ್ರೆಯಿಂದ ಆ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ ಎನ್ನುತ್ತಿದ್ದಾರೆ. ಆದರೆ, ಖಚಿತ ಮೂಲಗಳ ಪ್ರಕಾರ ಮಂಗಳೂರು ಸೇರಿ ವಿವಿಧ ಕಡೆ ಇರುವ ಚರ್ಚ್ ಫಾದರ್ ಗಳಿಗೆ ಸೋಂಕು ತಗಲಿದೆ.

ಈಗಾಗ್ಲೇ ಗುಜರಾತಿನ ಚರ್ಚ್ ಗಳಲ್ಲಿರುವ ಮಂಗಳೂರು ಮೂಲದ ಹತ್ತಕ್ಕೂ ಹೆಚ್ಚು ಪಾದ್ರಿಗಳು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ ಎಂಬ ಮಾಹಿತಿಗಳಿವೆ. ಈ ನಡುವೆ ಮಂಗಳೂರಿನಲ್ಲಿಯೂ ಹಲವಾರು ಮಂದಿ ಪಾದ್ರಿಗಳಿಗೆ ಸೋಂಕು ತಗಲಿದೆ ಎನ್ನಲಾಗುತ್ತಿದ್ದು ಆತಂಕ ಮೂಡಿಸಿದೆ.

ಇತ್ತೀಚಿನ ದಿನಗಳಲ್ಲಿ 50 ಜನಕ್ಕೆ ಸೀಮಿತಗೊಳಿಸಿ ಚರ್ಚ್ ಗಳಲ್ಲಿ ಮದುವೆ ನಡೆದಿರುವುದು, ಆ ಸಂದರ್ಭದಲ್ಲಿ ಪಾದ್ರಿಗಳು ಪ್ರಮುಖವಾಗಿ ಕರ್ತವ್ಯ ನಿಭಾಯಿಸುತ್ತಾರೆ. ಇದೇ ವೇಳೆ, ನೇರವಾಗಿ ಪಾದ್ರಿಗಳಿಗೆ ಕೋವಿಡ್ ಸೋಂಕು ತಗಲಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಧಾರ್ಮಿಕ ಕೇಂದ್ರಗಳಿಗೆ ಕಳೆದ 15 ದಿವಸಗಳಿಂದ ಜನರ ಪ್ರವೇಶಕ್ಕೆ ನಿಷೇಧ ಇದ್ದರೂ, ಹೊರ ಜಗತ್ತಿನಲ್ಲಿ ಕಾಣಿಸಿಕೊಳ್ಳದ ಪಾದ್ರಿಗಳಿಗೆ ದಿಢೀರ್ ಆಗಿ ಸೋಂಕು ತಗಲಿರುವುದು ಹೇಗೆ ಎಂಬ ಪ್ರಶ್ನೆ ಸಹಜವಾಗಿ ಕಾಡಿದೆ.
Read: ಬೆಥನಿ ಕಾನ್ವೆಂಟಿಗೆ ವಕ್ಕರಿಸಿದ ಕೊರೊನಾ ! 19 ಮಂದಿಗೆ ಪಾಸಿಟಿವ್
Over 30 Catholic priests and Nuns from Mangalore and various districts of Karnataka serving under the diocese of Mangalore have been positive for covid 19 and have been admitted at Father Mullers Hospital in two separate wards.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am