ಬ್ರೇಕಿಂಗ್ ನ್ಯೂಸ್
09-05-21 01:24 pm Mangaluru Correspondent ಕರಾವಳಿ
ಮಂಗಳೂರು, ಮೇ 9: ನಗರದ ಜಿಲ್ಲಾ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟ ಮಹಿಳೆಯ ಚಿನ್ನದ ಕಿವಿಯೋಲೆ ನಾಪತ್ತೆಯಾಗಿರುವ ಬಗ್ಗೆ ದೂರು ಕೇಳಿಬಂದಿದೆ.
ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ಬೊಳ್ಳೂರು ನಿವಾಸಿ ಡೀಕಯ್ಯ ಪೂಜಾರಿ ಎಂಬವರು ತಮ್ಮ ತಾಯಿಯ ಬಂಗಾರದ ಕಿವಿಯೋಲೆ ನಾಪತ್ತೆಯಾಗಿದೆ ಎಂದು ವೀಡಿಯೊ ಚಿತ್ರೀಕರಿಸಿ ಅಳಲು ತೋಡಿಕೊಂಡಿದ್ದಾರೆ.
ಮೇ 5ರಂದು ಮಧ್ಯರಾತ್ರಿ ತಾಯಿಯನ್ನು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೇ 7ರಂದು ಮೃತಪಟ್ಟಿದ್ದಾರೆ. ಆಸ್ಪತ್ರೆಯವರು ಮೃತದೇಹ ಹಸ್ತಾಂತರ ಮಾಡುವ ವೇಳೆ ಕಿವಿಯೋಲೆ ನಾಪತ್ತೆಯಾಗಿದೆ ಎಂದು ಡೀಕಯ್ಯ ಪೂಜಾರಿ ದೂರಿದ್ದಾರೆ.
ಉಸಿರಾಟದ ತೊಂದರೆಯಿಂದ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ತಾಯಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆದರೆ, ಅವರ ಮೃತದೇಹವನ್ನು ಆಸ್ಪತ್ರೆಯಲ್ಲಿ ಹಸ್ತಾಂತರಿಸುವ ಸಂದರ್ಭ ತಾಯಿಯ ಕಿವಿಯೋಲೆ ನಾಪತ್ತೆಯಾಗಿದೆ. ಈ ಬಗ್ಗೆ ಅಲ್ಲಿ ವಿಚಾರಿಸಿದಾಗ ಮೃತದೇಹದ ಪೋಟೊ ತೆಗೆಯಬೇಕಿತ್ತು ಎಂದು ಆಸ್ಪತ್ರೆ ಸಿಬ್ಬಂದಿ ಉಡಾಫೆಯ ಮಾತುಗಳನ್ನಾಡಿದ್ದಾರೆ.
ಈ ಬಗ್ಗೆ ತಾನು ಆಸ್ಪತ್ರೆಯ ಡಿಎಂಒ ಡಾ.ಸದಾಶಿವ ಅವರಿಗೆ ಲಿಖಿತ ದೂರು ನೀಡಿದ್ದು, ಈವರೆಗೆ ಯಾವ ಉತ್ತರವೂ ನಮಗೆ ದೊರಕಿಲ್ಲ ಎಂದು ದೂರಿದ್ದಾರೆ. ಅಲ್ಲದೆ, ನಾವು ತಾಯಿಯನ್ನು ಆಸ್ಪತ್ರೆಗೆ ಕೊಂಡೊಯ್ದ ಸಂದರ್ಭದಲ್ಲೂ ಸಾಕಷ್ಟು ಹೊತ್ತು ನಮ್ಮನ್ನು ಹೊರಗೆ ಕಾಯುವಂತೆ ಮಾಡಿದ್ದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರೂ ಬೇಗ ದಾಖಲು ಮಾಡಿಲ್ಲ. ಇದು ನಮ್ಮ ಸಮಸ್ಯೆ ಮಾತ್ರವಲ್ಲ, ಇಲ್ಲಿ ಬರುವ ಎಲ್ಲರ ಸಮಸ್ಯೆ ಎಂದು ದೂರಿದ್ದಾರೆ.
A man filed a complaint to the office of district surgeon and medical superintendent of Wenlock hospital urging the authorities to return his mother's missing earrings as gold has been missing from her body. A case has been registered at the Pandeshwar Police station.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am