ಬ್ರೇಕಿಂಗ್ ನ್ಯೂಸ್
09-05-21 03:57 pm Mangaluru Correspondent ಕರಾವಳಿ
ಮಂಗಳೂರು, ಮೇ 9: ಕೊರೊನಾ ಸೋಂಕಿನಿಂದ ಮೃತಪಟ್ಟ ಹಿಂದು ಧರ್ಮೀಯರ ಶವಗಳನ್ನು ಅಂತ್ಯ ಸಂಸ್ಕಾರ ಮಾಡಲು ಬಜರಂಗದಳದ ಸ್ವಯಂಸೇವಕರು ಇದ್ದಾರೆ. ಮುಸ್ಲಿಂ ಸಂಘಟನೆಗಳು ಈ ಕೆಲಸ ಮಾಡಿ ಪ್ರಚಾರ ಪಡೆಯುವ ಅಗತ್ಯವಿಲ್ಲ ಎಂದು ವಿಶ್ವ ಹಿಂದು ಪರಿಷತ್ ವಿಭಾಗ ಸಂಚಾಲಕ ಶರಣ್ ಪಂಪ್ವೆಲ್ ತಿಳಿಸಿದ್ದಾರೆ.
ಇತ್ತೀಚೆಗೆ ಹಿಂದೂಗಳ ಮೃತದೇಹವನ್ನು ಮುಸಲ್ಮಾನರು ಅಂತ್ಯಸಂಸ್ಕಾರ ಮಾಡಿದರು ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಪಡೆಯುತ್ತಿದೆ. ಇದನ್ನು ತಪ್ಪಿಸಲು ಮಂಗಳೂರಿನ ವಿಶ್ವ ಹಿಂದು ಪರಿಷತ್ ವತಿಯಿಂದ ಕರಾವಳಿಯ ಎಲ್ಲ ಆಸ್ಪತ್ರೆಗಳಿಗೆ ಹಿಂದುಗಳ ಶವವನ್ನು ಹಿಂದೂಗಳಿಗೆ ಮಾತ್ರ ಬಿಟ್ಟು ಕೊಡಬೇಕೆಂದು ಒತ್ತಾಯ ಮಾಡಲಾಗಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ವಿಶ್ವ ಹಿಂದು ಪರಿಷದ್ ಮುಖಂಡ ಶರಣ್ ಪಂಪ್ವೆಲ್, ಉಡುಪಿ ಮತ್ತು ಮಂಗಳೂರಿನ ಆಸ್ಪತ್ರೆಗಳ ಆಡಳಿತ ಮಂಡಳಿಯವರು ಕೋವಿಡ್ನಿಂದ ಹಿಂದುಗಳು ಮೃತರಾದರೆ ಅವರ ಶವಗಳನ್ನು ಹಿಂದೂಗಳಿಗೆ ಮಾತ್ರ ಬಿಟ್ಟು ಕೊಡಬೇಕು. ಹಿಂದು ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ಮಾಡಲು ಹಿಂದೂ ಕಾರ್ಯಕರ್ತರ ಪಡೆ ಸಿದ್ಧವಿದೆ ಎಂದು ಹೇಳಿದ್ದಾರೆ.
ಇತ್ತೀಚೆಗೆ ಕೆಲ ಮುಸ್ಲಿಂ ಸಂಘಟನೆಗಳ ಕಾರ್ಯಕರ್ತರು ಶವ ಸಂಸ್ಕಾರ ಮಾಡಿ ಪ್ರಚಾರ ಪಡೆಯುವ ಉದ್ದೇಶದಿಂದ ತಮ್ಮ ಸೇವೆಯನ್ನು ಮಾರಾಟ ಮಾಡುತ್ತಿದ್ದಾರೆ. ಇದರ ಅವಶ್ಯಕತೆ ಹಿಂದುಗಳಿಗಿಲ್ಲ. ಹಿಂದುಗಳ ಶವ ಅನಾಥವಾಗಲು ಯಾವತ್ತೂ ಸಾಧ್ಯವಿಲ್ಲ. ಈಗಾಗಲೇ ಬಜರಂಗದಳದ ಸ್ವಯಂಸೇವಕರ ತಂಡ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದು ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ಕಾರ್ಯ ನಡೆಸುತ್ತಿದ್ದು, ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸೇವೆ ಮಾಡುತ್ತಿದೆ ಎಂದು ಶರಣ್ ಪಂಪ್ವೆಲ್ ತಿಳಿಸಿದ್ದಾರೆ.
Let Muslims not cremate the dead bodies of Hindus who have died of Covid-19 in Mangalore and then post it on their Facebook for publicity said VHP Leader Sharan Pumpwell striking controversy by posting a post on his Facebook wall. He also added we have enough Hindu members to cremate the dead bodies of our Hindus brothers and sisters.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am