ಬ್ರೇಕಿಂಗ್ ನ್ಯೂಸ್
09-05-21 09:37 pm Mangaluru Correspondent ಕರಾವಳಿ
ಮಂಗಳೂರು, ಮೇ 9: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಕುಟುಂಬಸ್ಥರು ಅಲ್ಲಿನ ವೈದ್ಯರ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಟ್ಲ ಸಮೀಪದ ಸಾಲೆತ್ತೂರು ನಿವಾಸಿ ಭಾರತಿ ರೈ(52) ಮೃತ ಮಹಿಳೆ. ಮೇ 5ರಂದು ಅವರನ್ನು ಪುತ್ತೂರಿನಲ್ಲಿ ತಪಾಸಣೆಗೆ ಒಳಪಡಿಸಿದ್ದು, ಕೊರೊನಾ ಪಾಸಿಟಿವ್ ಆಗಿದ್ದರು. ಪಲ್ಸ್ ರೇಟ್ ಕಡಿಮೆ ಇದ್ದುದರಿಂದ ಮಂಗಳೂರಿಗೆ ಕರೆತಂದು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.



ಮಹಿಳೆಗೆ ಆಕ್ಸಿಜನ್ ಕೊಟ್ಟಿದ್ದರಿಂದ ಸ್ವಲ್ಪ ಗುಣಮುಖರಾಗಿದ್ದರು. ಊಟ, ತಿಂಡಿಯನ್ನೂ ಮಾಡುತ್ತಿದ್ದರು. ವೆನ್ಲಾಕ್ ಆಸ್ಪತ್ರೆಗೆ ದಾಖಲಾದ ಬಳಿಕವೂ ಫೋನಲ್ಲಿ ಮಾತನಾಡುತ್ತಿದ್ದರು. ಇಂದು ಮಧ್ಯಾಹ್ನವೂ ಫೋನಲ್ಲಿ ಮಾತನಾಡಿದ್ದಾರೆ. ಆದರೆ, ಇಂದು ವೆಂಟಿಲೇಟರ್ ಗೆ ಹಾಕಿದ್ದರಂತೆ. ಸಂಜೆ ವೇಳೆಗೆ ಮೃತಪಟ್ಟಿರುವ ಬಗ್ಗೆ ವೈದ್ಯರು ಹೇಳುತ್ತಿದ್ದಾರೆ. ಕೇಳಿದ್ದಕ್ಕೆ ವೆಂಟಿಲೇಟರ್ ಸರಿಯಿಲ್ಲ ಎನ್ನುತ್ತಿದ್ದಾರೆ. ನಾವು ಡ್ಯೂಟಿ ಡಾಕ್ಟರ್ ಇಬ್ಬರೇ ಇರುವುದು. ಎಲ್ಲವನ್ನೂ ಸಂಭಾಳಿಸಬೇಕು ಎನ್ನುತ್ತಿದ್ದಾರೆ ಎಂಬುದಾಗಿ ಮೃತರ ಸಂಬಂಧಿಕರು ದೂರಿದ್ದಾರೆ.
ಸಂಬಂಧಿಕರು ಅಲ್ಲಿನ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ತರಾಟೆಗೆತ್ತಿಕೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಅಲ್ಲದೆ, ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಕೂಡ ಆಸ್ಪತ್ರೆಗೆ ಬಂದಿದ್ದು, ವೈದ್ಯರ ಜೊತೆ ಮಾತುಕತೆ ನಡೆಸಿದ್ದಾರೆ. ವೆಂಟಿಲೇಟರ್ ಸಮಸ್ಯೆಯಿಂದಾಗಿ ಮಹಿಳೆಯ ಸಾವು ಆಗಿದೆಯೇ ಎನ್ನುವ ಬಗ್ಗೆ ಪೊಲೀಸರು ಮತ್ತು ಜಿಲ್ಲಾಡಳಿತ ತನಿಖೆ ನಡೆಸಬೇಕಿದೆ.
A fight erupted at the Wenlock government hospital after a Women died of covid 19 at the hospital. The family and relatives of the deceased have alleged that the negligence of the doctors is the reason for her death. The deceased has been identified as Bharathi Rai (52).
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am