ಬ್ರೇಕಿಂಗ್ ನ್ಯೂಸ್
10-05-21 12:51 pm Udupi Correspondent ಕರಾವಳಿ
Photo credits : newsnext
ಉಡುಪಿ, ಮೇ 10 : ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ ನಿಧನದಿಂದ ತೆರವಾಗಿರುವ ಉಡುಪಿ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಉತ್ತರಾಧಿಕಾರಿ ಆಗಿರುವ ಉಡುಪಿಯ ಅನಿರುದ್ಧ ಸರಳತ್ತಾಯ (16) ಸನ್ಯಾಸ ಸ್ವೀಕಾರ ಹಾಗೂ ಶಿರೂರು ಮಠದ ಯತಿಯಾಗಿ ಪಟ್ಟಾಭಿಷೇಕ ಕಾರ್ಯಕ್ರಮ ಮೇ 11ರಿಂದ 14ರ ವರೆಗೆ ಹಿರಿಯಡ್ಕ ಸಮೀಪದ ಶಿರೂರು ಮೂಲಮಠದಲ್ಲಿ ನಡೆಯಲಿದೆ.
ಶಿರೂರು ಮಠಕ್ಕೆ ಉತ್ತರಾಧಿಕಾರಿಯನ್ನು ನೇಮಿಸುವ ಜವಾಬ್ದಾರಿಯನ್ನು ಹೊಂದಿರುವ ಶಿರೂರು ಮಠದ ದ್ವಂದ್ವ ಮಠವಾದ ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಈ ನಿರ್ಧಾರವನ್ನು ತೆಗೆದು ಕೊಂಡಿದ್ದಾರೆ ಎಂದು ಶಿರೂರು ಮಠದ ವ್ಯವಸ್ಥಾಪಕರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಈ ಮೊದಲು ಅನಿರುದ್ಧ ಸರಳತ್ತಾಯರ ಸನ್ಯಾಸ ಸ್ವೀಕಾರ ಹಾಗೂ ಪಟ್ಟಾಭಿಷೇಕ ಕಾರ್ಯಕ್ರಮವನ್ನು ಮೇ 11ರಿಂದ 14ರ ವರೆಗೆ ಶಿರಸಿಯ ಸೋಮದಾ ಕ್ಷೇತ್ರದಲ್ಲಿ ಆಯೋಜಿಸಲು ಸೋದೆ ಶ್ರೀಗಳು ನಿರ್ಧರಿಸಿದ್ದರು. ಆದರೆ ಸರಕಾರದ ಕಠಿಣ ಮಾರ್ಗಸೂಚಿ ಹಿನ್ನೆಲೆಯಲ್ಲಿ ಇದೀಗ ಕಾರ್ಯಕ್ರಮವನ್ನು ಶಿರೂರು ಮಲ ಮಠದಲ್ಲೇ ನಡೆಸಲು ತೀರ್ಮಾನಿಸಲಾಗಿದೆ.

ಸನ್ಯಾಸಾಶ್ರಮ ಸ್ವೀಕರಿಸುವ ವಟುವು ಈಗಾಗಲೇ ತನ್ನ ಪೋಷಕರೊಂದಿಗೆ ಕೆಲವು ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಉಡುಪಿಗೆ ಹಿಂದಿರುಗಿದ್ದು, ಉಡುಪಿಯ ಅಷ್ಟಮಠಗಳ ಯತಿಗಳ ಆಶೀರ್ವಾದದೊಂದಿಗೆ ಫಲಮಂತ್ರಾಕ್ಷತೆಯನ್ನು ಸ್ವೀಕರಿಸಿದ್ದಾರೆ. ಪೂರ್ವ ನಿಗದಿಯಾದಂತೆ ಮೇ 11ರಿಂದ 14ರ ವರೆಗೆ ಶಿರೂರು ಮೂಲಮಠದಲ್ಲೇ ಸಂಪ್ರದಾಯದಂತೆ ಎಲ್ಲಾ ಧಾರ್ಮಿಕ ವಿಧಿಗಳು ನೆರವೇರಲಿವೆ ಎಂದು ಶಿರೂರು ಮಠದ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.
Udupi Shiroor Mutt Successor Chosen, 16-Year-Old Aniruddha To Be Anointed
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm