ಬ್ರೇಕಿಂಗ್ ನ್ಯೂಸ್
10-05-21 12:51 pm Udupi Correspondent ಕರಾವಳಿ
Photo credits : newsnext
ಉಡುಪಿ, ಮೇ 10 : ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ ನಿಧನದಿಂದ ತೆರವಾಗಿರುವ ಉಡುಪಿ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಉತ್ತರಾಧಿಕಾರಿ ಆಗಿರುವ ಉಡುಪಿಯ ಅನಿರುದ್ಧ ಸರಳತ್ತಾಯ (16) ಸನ್ಯಾಸ ಸ್ವೀಕಾರ ಹಾಗೂ ಶಿರೂರು ಮಠದ ಯತಿಯಾಗಿ ಪಟ್ಟಾಭಿಷೇಕ ಕಾರ್ಯಕ್ರಮ ಮೇ 11ರಿಂದ 14ರ ವರೆಗೆ ಹಿರಿಯಡ್ಕ ಸಮೀಪದ ಶಿರೂರು ಮೂಲಮಠದಲ್ಲಿ ನಡೆಯಲಿದೆ.
ಶಿರೂರು ಮಠಕ್ಕೆ ಉತ್ತರಾಧಿಕಾರಿಯನ್ನು ನೇಮಿಸುವ ಜವಾಬ್ದಾರಿಯನ್ನು ಹೊಂದಿರುವ ಶಿರೂರು ಮಠದ ದ್ವಂದ್ವ ಮಠವಾದ ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಈ ನಿರ್ಧಾರವನ್ನು ತೆಗೆದು ಕೊಂಡಿದ್ದಾರೆ ಎಂದು ಶಿರೂರು ಮಠದ ವ್ಯವಸ್ಥಾಪಕರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಮೊದಲು ಅನಿರುದ್ಧ ಸರಳತ್ತಾಯರ ಸನ್ಯಾಸ ಸ್ವೀಕಾರ ಹಾಗೂ ಪಟ್ಟಾಭಿಷೇಕ ಕಾರ್ಯಕ್ರಮವನ್ನು ಮೇ 11ರಿಂದ 14ರ ವರೆಗೆ ಶಿರಸಿಯ ಸೋಮದಾ ಕ್ಷೇತ್ರದಲ್ಲಿ ಆಯೋಜಿಸಲು ಸೋದೆ ಶ್ರೀಗಳು ನಿರ್ಧರಿಸಿದ್ದರು. ಆದರೆ ಸರಕಾರದ ಕಠಿಣ ಮಾರ್ಗಸೂಚಿ ಹಿನ್ನೆಲೆಯಲ್ಲಿ ಇದೀಗ ಕಾರ್ಯಕ್ರಮವನ್ನು ಶಿರೂರು ಮಲ ಮಠದಲ್ಲೇ ನಡೆಸಲು ತೀರ್ಮಾನಿಸಲಾಗಿದೆ.
ಸನ್ಯಾಸಾಶ್ರಮ ಸ್ವೀಕರಿಸುವ ವಟುವು ಈಗಾಗಲೇ ತನ್ನ ಪೋಷಕರೊಂದಿಗೆ ಕೆಲವು ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಉಡುಪಿಗೆ ಹಿಂದಿರುಗಿದ್ದು, ಉಡುಪಿಯ ಅಷ್ಟಮಠಗಳ ಯತಿಗಳ ಆಶೀರ್ವಾದದೊಂದಿಗೆ ಫಲಮಂತ್ರಾಕ್ಷತೆಯನ್ನು ಸ್ವೀಕರಿಸಿದ್ದಾರೆ. ಪೂರ್ವ ನಿಗದಿಯಾದಂತೆ ಮೇ 11ರಿಂದ 14ರ ವರೆಗೆ ಶಿರೂರು ಮೂಲಮಠದಲ್ಲೇ ಸಂಪ್ರದಾಯದಂತೆ ಎಲ್ಲಾ ಧಾರ್ಮಿಕ ವಿಧಿಗಳು ನೆರವೇರಲಿವೆ ಎಂದು ಶಿರೂರು ಮಠದ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.
Udupi Shiroor Mutt Successor Chosen, 16-Year-Old Aniruddha To Be Anointed
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 05:24 pm
Mangalore Correspondent
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
08-06-25 03:59 pm
HK News Desk
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm