ಬ್ರೇಕಿಂಗ್ ನ್ಯೂಸ್
11-05-21 05:20 pm Udupi Correspondent ಕರಾವಳಿ
ಕುಂದಾಪುರ, ಮೇ 11: ಲಾಕ್ಡೌನ್ ಇರುವುದರಿಂದ ಗ್ರೋಸರಿ ತರುವುದಕ್ಕೂ ವಾಹನ ಬಳಸುವಂತಿಲ್ಲ ಎಂದು ರಾಜ್ಯ ಸರಕಾರ ನಿಯಮ ಹೇರಿರುವುದರಿಂದ ಹೆಚ್ಚಿನ ಕಡೆ ಪೊಲೀಸರು ಲಾಠಿ ಬೀಸಿದ್ದು ಪರ- ವಿರೋಧ ಟೀಕೆಗೂ ಕಾರಣವಾಗಿದೆ. ಇದೇ ವೇಳೆ, ಇಲ್ಲಿನ ಕುಂಭಾಸಿಯ ಯುವಕನೊಬ್ಬ ಪೊಲೀಸರ ಲಾಠಿರುಚಿಯನ್ನು ಅಣಕಿಸುವುದಕ್ಕಾಗಿಯೇ ಹೊಸ ತಂತ್ರಕ್ಕೆ ಮೊರೆಹೋಗಿರುವ ಫೋಟೋ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಕುಂಭಾಸಿಯ ವಿನೇಂದ್ರ ಆಚಾರ್ಯ ಎಂಬವರು ಸೈಕಲ್ ನಲ್ಲಿ ಪೇಟೆಗೆ ಹೊರಟಿದ್ದು ತಲೆಗೆ ಹೆಲ್ಮೆಟ್ ಮತ್ತು ಬೆನ್ನಿಗೆ ತಗಡು ಶೀಟನ್ನು ಕಟ್ಟಿಕೊಂಡಿದ್ದಾರೆ. ಬೆನ್ನಿಗೆ ಪೆಟ್ಟು ಬಿದ್ದರೂ ತಗಡು ಶೀಟ್ ಇದೆಯೆಂಬ ರೀತಿ ಬಿಂಬಿಸಿ, ಸೈಕಲಿನಲ್ಲಿ ಹೊರಟಿರುವ ಫೋಟೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರ ಲಾಠಿಗೆ ಪ್ರತಿತಂತ್ರ ಎನ್ನುವ ರೀತಿ ಬಿಂಬಿತವಾಗುತ್ತಿದೆ.

ಬೆಳಗ್ಗೆ ಹತ್ತು ಗಂಟೆ ವರೆಗೆ ಅಗತ್ಯ ಸಾಮಗ್ರಿ ಖರೀದಿಸಲು ಅವಕಾಶ ನೀಡಿದ್ದು ಆದರೆ ನಡೆದುಕೊಂಡೇ ಮನೆ ಪರಿಸರದ ಅಂಗಡಿಗಳಿಂದ ಖರೀದಿ ನಡೆಸಬೇಕು. ಯಾವುದೇ ಕಾರಣಕ್ಕೂ ವಾಹನಗಳಲ್ಲಿ ದೂರಕ್ಕೆ ಪ್ರಯಾಣ ಮಾಡಬಾರದು. ಅಗತ್ಯ ವಸ್ತು ಖರೀದಿಗೆಂದು ಮಾರುಕಟ್ಟೆ ಇನ್ನಿತರ ಪ್ರದೇಶಕ್ಕೆ ಹೋಗಬಾರದೆಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. ಆದರೆ, ಈ ನಿಯಮವನ್ನು ಬಹುತೇಕ ಕಡೆ ಜನರು ಮುರಿಯುತ್ತಿದ್ದಾರೆ. ಪೊಲೀಸರು ಅಡ್ಡಗಟ್ಟಿದರೂ ಒಳದಾರಿಗಳಿಂದ ಅಂಗಡಿಗಳಿಗೆ ತೆರಳುತ್ತಿದ್ದಾರೆ. ಈ ವೇಳೆ, ಕೆಲವು ಕಡೆ ಪೊಲೀಸರು ಲಾಠಿ ಬೀಸಿ ಜನರನ್ನು ಚದುರಿಸುವ ಘಟನೆ ನಡೆದಿದೆ.
ಪೊಲೀಸರ ಲಾಠಿ ಬೀಸುವ ನಡೆಗೆ ಭಾರೀ ವಿರೋಧ ವ್ಯಕ್ತವಾಗಿದ್ದು, ವಯಸ್ಸಾದವರು ತಮ್ಮ ಸ್ಕೂಟರ್ ಬಳಸದೆ ಗ್ರೋಸರಿ ತರುವುದು ಹೇಗೆಂಬ ಮಾತುಗಳು ಕೇಳಿಬಂದಿದ್ದವು. ಅದಕ್ಕೆ ಕೆಲವು ಕಡೆ ವಯಸ್ಸಾದವರು, ಅಸಹಾಯಕರಿಗೆ ಮಾತ್ರ ವಾಹನ ಬಳಕೆಗೆ ಅವಕಾಶ ನೀಡಲಾಗಿದೆ. ಹೀಗಿದ್ದರೂ, ಜನರು ಅಂಗಡಿ ಮುಂದೆ ಸೇರುವುದು, ಮುಗಿ ಬೀಳುವುದು ಕಾಮನ್ ಆಗಿದೆ. ಇಂಥ ಸಂದರ್ಭದಲ್ಲೇ ಯುವಕನೊಬ್ಬ ಬೆನ್ನಿಗೆ ಕಬ್ಬಿಣದ ಶೀಟ್ ಕಟ್ಟಿಕೊಂಡು ಸೈಕಲಿನಲ್ಲಿ ಪೇಟೆಗೆ ಹೊರಟು ಸುದ್ದಿಯಾಗಿದ್ದಾನೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am