ಬ್ರೇಕಿಂಗ್ ನ್ಯೂಸ್
14-05-21 04:46 pm Mangalore Correspondent ಕರಾವಳಿ
ಮಂಗಳೂರು, ಮೇ 14: ಲಾಕ್ಡೌನ್ ವೇಳೆ ಸದಾ ಬೀದಿ ಸುತ್ತುವ ಪೊಲೀಸರಿಗೆ ಕೊರೊನಾ ಸೋಂಕು ಹರಡುತ್ತಿದ್ದು, ಇದನ್ನು ಮನಗಂಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಪೊಲೀಸ್ ಸಿಬಂದಿಗಾಗಿಯೇ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭಿಸಿದ್ದಾರೆ.
ನಗರದ ಅಲೋಶಿಯಸ್ ಕಾಲೇಜು ಆವರಣದಲ್ಲಿರುವ ಹಾಸ್ಟೆಲ್ ಕಟ್ಟಡದಲ್ಲಿ 40 ಬೆಡ್ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್ ರೆಡಿ ಮಾಡಲಾಗಿದ್ದು, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಉದ್ಘಾಟನೆ ನೆರವೇರಿಸಿದರು.



ಈ ವೇಳೆ ಮಾತನಾಡಿದ ಪೊಲೀಸ್ ಕಮಿಷನರ್ ಶಶಿಕುಮಾರ್, ಈಗಾಗ್ಲೇ ಮಂಗಳೂರಿನಲ್ಲಿ 62 ಮಂದಿಗೆ ಕೋವಿಡ್ ಸೋಂಕು ತಗಲಿದೆ. ಈ 16 ಮಂದಿ ಗುಣಮುಖರಾಗಿದ್ದು, 42 ಮಂದಿ ಹೋಮ್ ಐಸೋಲೇಶನಲ್ಲಿದ್ದಾರೆ. ಆದರೆ, ಮನೆಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದವರು, ಏನಾದ್ರೂ ಆರೋಗ್ಯ ತೊಂದರೆ ಇದ್ದವರು ಇಲ್ಲಿ ಬಂದು ಸೇರಿಕೊಳ್ಳಬಹುದು. ಇಲ್ಲಿ 24 ಗಂಟೆ ಕಾಲ ವೈದ್ಯರು ಮತ್ತು ನರ್ಸ್ ಗಳು ಇರಲಿದ್ದು, ರೋಗಿಗಳ ಆರೈಕೆ ಮಾಡಲಿದ್ದಾರೆ.
ಅಲ್ಲದೆ, ಊಟ, ತಿಂಡಿ, ಚಹಾವನ್ನು ಕಾಲ ಕಾಲಕ್ಕೆ ಅಲೋಶಿಯಸ್ ಕಾಲೇಜಿನ ಹಾಸ್ಟೆಲ್ ವತಿಯಿಂದ ರೆಡಿ ಮಾಡಿ ಕೊಡುತ್ತಿದ್ದಾರೆ. ಟಿವಿ, ನೀರು, ಬೆಡ್ ವ್ಯವಸ್ಥೆ ಎಲ್ಲ ಇರುವುದರಿಂದ ತೊಂದರೆ ಇಲ್ಲ. ಮಧುಮೇಹ, ಬಿಪಿ ಇನ್ನಿತರ ಸಣ್ಣಪುಟ್ಟ ಕಾಯಿಲೆಗಳಿಂದ ಬಳಲುತ್ತಿರುವ ಪೊಲೀಸ್ ಇಲಾಖೆಯಲ್ಲಿರುವ ಸೋಂಕಿತರು ಮತ್ತು ಅವರ ಸಂಬಂಧಿಕರಿಗಾಗಿ ಈ ಕೋವಿಡ್ ಕೇರ್ ಆರಂಭಿಸಲಾಗಿದೆ ಎಂದು ತಿಳಿಸಿದರು.



ಭವಿಷ್ಯದಲ್ಲಿ ಇಲ್ಲಿನ ಬೆಡ್ ವ್ಯವಸ್ಥೆ ಸಾಕಾಗದಿದ್ದಲ್ಲಿ ಸುರತ್ಕಲ್ ಎನ್ಐಟಿಕೆಯಲ್ಲಿ ಕಳೆದ ಬಾರಿ ರೆಡಿ ಮಾಡಿದ್ದ ಕೋವಿಡ್ ಕೇರ್ ಸೆಂಟರ್ ಇದೆ. ಫ್ರಂಟ್ ಲೈನ್ ವಾರಿಯರ್ಸ್ ಗಾಗಿಯೇ ಅಲ್ಲಿ 300 ಬೆಡ್ ಗಳ ಸೆಂಟರ್ ಇದೆ. ಅದನ್ನೂ ಅಗತ್ಯ ಬಿದ್ದರೆ ಬಳಸಿಕೊಳ್ಳಲಾಗುವುದು ಎಂದು ಕಮಿಷನರ್ ಹೇಳಿದರು.
Deputy Commissioner (DC) Dr. Rajendra KV inaugurated an 18-bed Covid care center, exclusively for police personnel and for their family members in the now vacant student ladies hostel near St Aloysius Gonzaga School, here on Friday, May 14.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am