ಬ್ರೇಕಿಂಗ್ ನ್ಯೂಸ್
15-05-21 12:53 pm Udupi Correspondent ಕರಾವಳಿ
ಉಡುಪಿ, ಮೇ 15: ಇಲ್ಲಿನ ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳೇ ಸೇರಿ ಜೈಲಿನ ಸುಪರಿಡೆಂಟ್ ವಿರುದ್ಧ ಒಂದು ದಿನದ ಉಪವಾಸ ನಡೆಸಿದ್ದಾರೆ. ಜೈಲಿನ ಸುಪರಿಡೆಂಟ್ ಶ್ರೀನಿವಾಸ ಗೌಡ, ಯಾವುದೇ ಸೌಲಭ್ಯಗಳನ್ನು ನೀಡುತ್ತಿಲ್ಲ. ನಮ್ಮನ್ನು ಶೋಷಣೆ ಮಾಡುತ್ತಿದ್ದಾರೆಂದು ಆರೋಪಿಸಿ ಕೈದಿಗಳು ಉಪವಾಸ ನಡೆಸಿ ಜಿಲ್ಲಾಡಳಿತದ ಗಮನ ಸೆಳೆದಿದ್ದಾರೆ.
ಸರಕಾರದಿಂದ ಕೈದಿಗಳಿಗೆ ಏನೆಲ್ಲಾ ಸೌಲಭ್ಯಗಳನ್ನು ಕೊಡುತ್ತಾರೋ, ಅವನ್ನು ಜೈಲು ಸುಪರಿಡೆಂಟ್ ಕೊಡುತ್ತಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಕೈದಿಗಳು ಸೇರಿಕೊಂಡು ಶುಕ್ರವಾರ ಇಡೀ ದಿನ ಆಹಾರ ಸ್ವೀಕರಿಸದೆ ನಿರಶನ ನಡೆಸಿದ್ದಾರೆ. ಜೈಲು ಸುಪರಿಡೆಂಟ್ ಮತ್ತು ಮತ್ತೊಬ್ಬ ಅಧಿಕಾರಿ ಸೇರಿ ಕೈದಿಗಳಿಗೆ ಕಿರುಕುಳ ನೀಡುತ್ತಿದ್ದು, ಆಹಾರ ಇನ್ನಿತರ ಸೌಲಭ್ಯ ನೀಡಬೇಕಿದ್ದರೆ ಲಂಚ ಕೇಳುತ್ತಿದ್ದರು ಎಂದು ಆರೋಪ ಕೇಳಿಬಂದಿದೆ.
ಅಲ್ಲದೆ, ಕೈದಿಗಳಿಗೆ ಕಳಪೆ ಆಹಾರವನ್ನು ಪೂರೈಸಲಾಗುತ್ತಿದೆ. ಕಾನೂನು ಪ್ರಕಾರ, ವಾರದಲ್ಲಿ ಒಮ್ಮೆಯಾದರೂ ಮಾಂಸ, ಮೀನಿನ ಪದಾರ್ಥ ಕೊಡಬೇಕೆಂದಿದೆ. ಆದರೆ, ಇಲ್ಲಿ ಕೋಳಿಯ ಕಾಲುಗಳನ್ನು ಹಾಕಿ ಸಾರು ಮಾಡಿ ಕೊಡುತ್ತಿದ್ದಾರೆ. ಜೈಲಿನ ಕೈದಿಗಳಿಗೆ ಸಿಗುತ್ತಿದ್ದ ಸೌಲಭ್ಯ, ಇನ್ನಿತರ ರೇಷನ್ ವಸ್ತುಗಳನ್ನು ಜೈಲಿನ ಅಧಿಕಾರಿಗಳು ತಮ್ಮ ಮನೆಗೆ ಒಯ್ಯುತ್ತಿದ್ದಾರೆ. ಪ್ರತಿಯೊಂದಕ್ಕೂ ಶ್ರೀನಿವಾಸ ಗೌಡ ಸೇರಿ ಜೈಲಿನ ಅಧಿಕಾರಿಗಳು ಕೈದಿಗಳ ಬಳಿಯಿಂದಲೇ ಹಣ ಕೇಳುತ್ತಿದ್ದಾರೆ ಎಂದು ಕೈದಿಯೊಬ್ಬ ಅಲ್ಲಿನ ಪರಿಸ್ಥಿತಿ ಹೇಳಿಕೊಂಡಿದ್ದಾನೆ.
ಜೈಲಿನ ಸ್ಥಿತಿಯ ಬಗ್ಗೆ ಕೈದಿಗಳು ಸೇರಿ ಜಿಲ್ಲಾ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಆಬಳಿಕ ಜಿಲ್ಲಾ ನ್ಯಾಯಾಧೀಶರು ಮತ್ತು ಕಾಪು ಶಾಸಕ ಲಾಲಾಜಿ ಮೆಂಡನ್ ಜೈಲಿಗೆ ಭೇಟಿ ನೀಡಿದ್ದು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ್ದರಿಂದ ಕೈದಿಗಳು ತಮ್ಮ ನಿರಶನ ಅಂತ್ಯಗೊಳಿಸಿದ್ದಾರೆ.
Inmates at Kajaraguthu district prison at Hiriadka, Udupi here held a hunger strike accusing the jail superintendent Srinivas Gowda of misusing the facilities given to the prisoners.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am