ಬ್ರೇಕಿಂಗ್ ನ್ಯೂಸ್
15-05-21 12:53 pm Udupi Correspondent ಕರಾವಳಿ
ಉಡುಪಿ, ಮೇ 15: ಇಲ್ಲಿನ ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳೇ ಸೇರಿ ಜೈಲಿನ ಸುಪರಿಡೆಂಟ್ ವಿರುದ್ಧ ಒಂದು ದಿನದ ಉಪವಾಸ ನಡೆಸಿದ್ದಾರೆ. ಜೈಲಿನ ಸುಪರಿಡೆಂಟ್ ಶ್ರೀನಿವಾಸ ಗೌಡ, ಯಾವುದೇ ಸೌಲಭ್ಯಗಳನ್ನು ನೀಡುತ್ತಿಲ್ಲ. ನಮ್ಮನ್ನು ಶೋಷಣೆ ಮಾಡುತ್ತಿದ್ದಾರೆಂದು ಆರೋಪಿಸಿ ಕೈದಿಗಳು ಉಪವಾಸ ನಡೆಸಿ ಜಿಲ್ಲಾಡಳಿತದ ಗಮನ ಸೆಳೆದಿದ್ದಾರೆ.
ಸರಕಾರದಿಂದ ಕೈದಿಗಳಿಗೆ ಏನೆಲ್ಲಾ ಸೌಲಭ್ಯಗಳನ್ನು ಕೊಡುತ್ತಾರೋ, ಅವನ್ನು ಜೈಲು ಸುಪರಿಡೆಂಟ್ ಕೊಡುತ್ತಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಕೈದಿಗಳು ಸೇರಿಕೊಂಡು ಶುಕ್ರವಾರ ಇಡೀ ದಿನ ಆಹಾರ ಸ್ವೀಕರಿಸದೆ ನಿರಶನ ನಡೆಸಿದ್ದಾರೆ. ಜೈಲು ಸುಪರಿಡೆಂಟ್ ಮತ್ತು ಮತ್ತೊಬ್ಬ ಅಧಿಕಾರಿ ಸೇರಿ ಕೈದಿಗಳಿಗೆ ಕಿರುಕುಳ ನೀಡುತ್ತಿದ್ದು, ಆಹಾರ ಇನ್ನಿತರ ಸೌಲಭ್ಯ ನೀಡಬೇಕಿದ್ದರೆ ಲಂಚ ಕೇಳುತ್ತಿದ್ದರು ಎಂದು ಆರೋಪ ಕೇಳಿಬಂದಿದೆ.
ಅಲ್ಲದೆ, ಕೈದಿಗಳಿಗೆ ಕಳಪೆ ಆಹಾರವನ್ನು ಪೂರೈಸಲಾಗುತ್ತಿದೆ. ಕಾನೂನು ಪ್ರಕಾರ, ವಾರದಲ್ಲಿ ಒಮ್ಮೆಯಾದರೂ ಮಾಂಸ, ಮೀನಿನ ಪದಾರ್ಥ ಕೊಡಬೇಕೆಂದಿದೆ. ಆದರೆ, ಇಲ್ಲಿ ಕೋಳಿಯ ಕಾಲುಗಳನ್ನು ಹಾಕಿ ಸಾರು ಮಾಡಿ ಕೊಡುತ್ತಿದ್ದಾರೆ. ಜೈಲಿನ ಕೈದಿಗಳಿಗೆ ಸಿಗುತ್ತಿದ್ದ ಸೌಲಭ್ಯ, ಇನ್ನಿತರ ರೇಷನ್ ವಸ್ತುಗಳನ್ನು ಜೈಲಿನ ಅಧಿಕಾರಿಗಳು ತಮ್ಮ ಮನೆಗೆ ಒಯ್ಯುತ್ತಿದ್ದಾರೆ. ಪ್ರತಿಯೊಂದಕ್ಕೂ ಶ್ರೀನಿವಾಸ ಗೌಡ ಸೇರಿ ಜೈಲಿನ ಅಧಿಕಾರಿಗಳು ಕೈದಿಗಳ ಬಳಿಯಿಂದಲೇ ಹಣ ಕೇಳುತ್ತಿದ್ದಾರೆ ಎಂದು ಕೈದಿಯೊಬ್ಬ ಅಲ್ಲಿನ ಪರಿಸ್ಥಿತಿ ಹೇಳಿಕೊಂಡಿದ್ದಾನೆ.
ಜೈಲಿನ ಸ್ಥಿತಿಯ ಬಗ್ಗೆ ಕೈದಿಗಳು ಸೇರಿ ಜಿಲ್ಲಾ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಆಬಳಿಕ ಜಿಲ್ಲಾ ನ್ಯಾಯಾಧೀಶರು ಮತ್ತು ಕಾಪು ಶಾಸಕ ಲಾಲಾಜಿ ಮೆಂಡನ್ ಜೈಲಿಗೆ ಭೇಟಿ ನೀಡಿದ್ದು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ್ದರಿಂದ ಕೈದಿಗಳು ತಮ್ಮ ನಿರಶನ ಅಂತ್ಯಗೊಳಿಸಿದ್ದಾರೆ.
Inmates at Kajaraguthu district prison at Hiriadka, Udupi here held a hunger strike accusing the jail superintendent Srinivas Gowda of misusing the facilities given to the prisoners.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 09:08 pm
HK News Desk
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm