ಬ್ರೇಕಿಂಗ್ ನ್ಯೂಸ್
15-05-21 09:05 pm Udupi Correspondent ಕರಾವಳಿ
ಉಡುಪಿ, ಮೇ 15: ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡ ತೌಕ್ತೆ ಚಂಡಮಾರುತದಿಂದಾಗಿ ಕರಾವಳಿಯಲ್ಲಿ ಕಂಡು ಕೇಳರಿಯದ ರೀತಿ ಸಮುದ್ರ ಅಬ್ಬರಿಸತೊಡಗಿದ್ದು ಉಡುಪಿ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗಿನ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮುಂದಿನ ಎರಡು ದಿನ ಉಡುಪಿ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಮಾಡಲಾಗಿದೆ. ಮೇ 16 ಮತ್ತು 17 ರ ವರೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ದಿನಕ್ಕೆ 65-115 ಮಿಮೀ ಮಳೆ ಸಾಧ್ಯತೆಯಿದೆ.


ಇದೇ ವೇಳೆ, ಸಮುದ್ರ, ನದಿ ತೀರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದೆ. ಮಲ್ಪೆ- ಪಡುಕೆರೆ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಸಮುದ್ರ ಭೋರ್ಗರೆಯುತ್ತಿದ್ದು ಅಲ್ಲಿನ ನಿವಾಸಿಗಳನ್ನು ಸ್ಥಳಾಂತರ ಮಾಡಲು ಜಿಲ್ಲಾಡಳಿತ ಚಿಂತನೆ ನಡೆಸಿದೆ.
ಮಲ್ಪೆ ಪಡುಕೆರೆಯಲ್ಲಿ ಮೀನುಗಾರಿಕಾ ರಸ್ತೆಗಳ ಮೇಲೆ ಸಮುದ್ರ ನೀರು ಬಂದಿದ್ದು ಕಡಲ ತೀರದ ನಿವಾಸಿಗಳಿಗೆ ಅಪಾಯದ ಮುನ್ನೆಚ್ಚರಿಕೆ ನೀಡಲಾಗಿದೆ.
ಸ್ಥಳಕ್ಕೆ ಉಡುಪಿ ಶಾಸಕ ರಘುಪತಿ ಭಟ್, ಪಡುಕೆರೆಯ ಮೀನುಗಾರರ ನಿವಾಸಗಳಿಗೆ ಭೇಟಿ ನೀಡಿದ್ದಾರೆ. ತೀರದ ನಿವಾಸಿಗಳನ್ನು ಸ್ಥಳಾಂತರಿಸಲು ಮನವೊಲಿಸಿದ್ದಾರೆ.


ಸಂಜೆಯ ನಂತರ ಮತ್ತೆ ನೀರಿನ ಅಬ್ಬರ ಇರುವ ಸಾಧ್ಯತೆ ಇರುವುದರಿಂದ ತೀರದ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಗಿದೆ. ಇದಕ್ಕಾಗಿ ಮಲ್ಪೆಯ ಏಳೂರು ಮೊಗವೀರ ಭವನದಲ್ಲಿ ಕಾಳಜಿ ಕೇಂದ್ರ ಆರಂಭಿಸಲಾಗಿದೆ.
ಚಂಡಮಾರುತದ ಪರಿಣಾಮ ಜಿಲ್ಲೆಯಲ್ಲಿ ಎಂಟು ಮನೆಗಳಿಗೆ ಹಾನಿಯಾಗಿದ್ದು ಐದು ಮೀನುಗಾರಿಕೆ ಮತ್ತು ಕೃಷಿ ಶೆಡ್ ಗಳಿಗೆ ಭಾಗಶಃ ಹಾನಿಯಾಗಿದೆ. ಇದೇ ವೇಳೆ, ಕಾಪು ತಾಲೂಕಿನಲ್ಲಿ ರಮೇಶ್ (51) ಎಂಬ ಕೃಷಿಕ ವಿದ್ಯುತ್ ತಂತಿ ತುಳಿದು ಸಾವು ಕಂಡಿದ್ದಾರೆ. ಬ್ರಹ್ಮಾವರದ ಕೋಡಿ, ಕಾಪು ಸಮುದ್ರ ತೀರದಲ್ಲಿ ಹೈ ಎಲರ್ಟ್ ಮಾಡಲಾಗಿದೆ. ಅಗತ್ಯ ಬಿದ್ದರೆ ಆಯಾ ಭಾಗದಲ್ಲಿ ಪುನರ್ವಸತಿ ಕೇಂದ್ರ ಕಲ್ಪಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಮಾಹಿತಿ ನೀಡಿದ್ದಾರೆ.
With Cyclone Tauktae forming over the Arabian Sea, heavy rains continued to lash Udupi district since May 15 morning. Farmer dies of electrocution due to heavy rains of cyclone in Udupi.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm