ಬ್ರೇಕಿಂಗ್ ನ್ಯೂಸ್
15-05-21 10:27 pm Mangaluru Correspondent ಕರಾವಳಿ
ಮಂಗಳೂರು, ಮೇ 15: ತೀವ್ರ ಚಂಡಮಾರುತದ ಪರಿಣಾಮ ಎನ್ಎಂಪಿಟಿ ಬಂದರಿನ ಬಳಿ ಸಮುದ್ರ ಮಧ್ಯೆ ಒಂಬತ್ತು ಕಾರ್ಮಿಕರಿದ್ದ ಟಗ್ ಮಗುಚಿ ಬಿದ್ದಿದ್ದು ಒಬ್ಬನ ಶವ ಪತ್ತೆಯಾಗಿದೆ. ಇಬ್ಬರನ್ನು ರಕ್ಷಣೆ ಮಾಡಲಾಗಿದೆ.
ಮಂಗಳೂರಿನ ಎಂಆರ್ ಪಿಎಲ್ ರಿಫೈನರಿಗೆ ಸೇರಿದ ಟಗ್ ಬೋಟ್ ಆಗಿದ್ದು ಬೃಹದ್ಗಾತ್ರದ ಹಡಗುಗಳಿಂದ ಕಚ್ಚಾತೈಲ ಇಳಿಸಲು ಬಳಸಲಾಗುತ್ತಿತ್ತು. ಸಮುದ್ರ ಮಧ್ಯೆ ಕಾರ್ಯಾಚರಣೆ ವೇಳೆ ಟಗ್ ತೀವ್ರ ಗಾಳಿಗೆ ಮಗುಚಿದ್ದು ಕಾರ್ಮಿಕರಾಗಿದ್ದ ಹೇಮಚಂದ್ರ ಜಾ ಎಂಬವರ ಶವ ಪಡುಬಿದ್ರೆಯಲ್ಲಿ ಪತ್ತೆಯಾಗಿದೆ.



ಟಗ್ ಬೋಟಿನಲ್ಲಿ ಒಟ್ಟು ಒಂಬತ್ತು ಜನರು ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಮಂಗಳೂರಿನ ಪಣಂಬೂರಿನ ಬಂದರಿನಿಂದ ಕೆಲವೇ ನಾಟಿಕಲ್ ಮೈಲು ದೂರದಲ್ಲಿ ಘಟನೆ ನಡೆದಿದೆ.
ಚಂಡಮಾರುತದಿಂದ ಎದ್ದ ಬೃಹತ್ ಅಲೆಗೆ ಟಗ್ ಮಗುಚಿ ಬಿದ್ದಿದೆ ಎನ್ನಲಾಗುತ್ತಿದ್ದು ಬೋಟಿನಲ್ಲಿದ್ದ 9 ಜನರು ನೀರುಪಾಲಾಗಿದ್ದರು. ಈ ಪೈಕಿ ಇಬ್ಬರು ಟ್ಯೂಬಿನ ಸಹಾಯದಿಂದ ಸತತ ಎಂಟು ಗಂಟೆ ಕಾಲ ಈಜಿ ಸಾವಿನ ದವಡೆಯಿಂದ ಪಾರಾಗಿದ್ದಾರೆ.
ಸಮುದ್ರ ಮಧ್ಯೆ ಉಡುಪಿಯ ಮಟ್ಟು ಕೊಪ್ಪಲು ಎಂಬಲ್ಲಿ ಕಾಣಿಸಿಕೊಂಡ ಇಬ್ಬರನ್ನು ಸ್ಥಳೀಯರು ದೋಣಿ ಮೂಲಕ ದಡಕ್ಕೆ ಎಳೆದು ರಕ್ಷಿಸಿದ್ದಾರೆ. ಉಳಿದವರ ಪತ್ತೆಗಾಗಿ ಕರಾವಳಿ ಕಾವಲು ಪಡೆ ಶೋಧ ಕಾರ್ಯಾಚರಣೆ ನಡೆಸುತ್ತಿದೆ.
ಉಡುಪಿಯಲ್ಲಿ ಆಸ್ಪತ್ರೆಗೆ ದಾಖಲು
ಟಗ್ ಮಗುಚಿ, ಎಂಟು ಗಂಟೆ ಕಾಲ ಈಜಿ ಜೀವ ಉಳಿಸಿಕೊಂಡ ಇಬ್ಬರಿಗೆ ಉಡುಪಿಯ ಅಜ್ಜರಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಪಶ್ಚಿಮ ಬಂಗಾಳ ಮೂಲದ ಮೊಮಿರುಲ್ ಮುಲ್ಲಾ( 34) ಹಾಗೂ ಕರೀಮುಲ್ಲಾ ಶೇಕ್ (24) ಸಾವಿನ ದವಡೆಗೆ ಸಿಲುಕಿ ಪಾರಾಗಿ ಬಂದವರು. ಮಂಗಳೂರಿನ ಸುರತ್ಕಲ್ ನಿಂದ 17 ನಾಟಿಕಲ್ ದೂರದಲ್ಲಿ ದುರಂತ ನಡೆದಿತ್ತು.
Six fishermen go missing after Mangalore MRPL Tug boat capsizes due to Cyclone Tauktae in which one has been found dead and two have been rescued and have been admitted to govt hospital in Udupi. The search is on for the three.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am