ಬ್ರೇಕಿಂಗ್ ನ್ಯೂಸ್
15-05-21 10:27 pm Mangaluru Correspondent ಕರಾವಳಿ
ಮಂಗಳೂರು, ಮೇ 15: ತೀವ್ರ ಚಂಡಮಾರುತದ ಪರಿಣಾಮ ಎನ್ಎಂಪಿಟಿ ಬಂದರಿನ ಬಳಿ ಸಮುದ್ರ ಮಧ್ಯೆ ಒಂಬತ್ತು ಕಾರ್ಮಿಕರಿದ್ದ ಟಗ್ ಮಗುಚಿ ಬಿದ್ದಿದ್ದು ಒಬ್ಬನ ಶವ ಪತ್ತೆಯಾಗಿದೆ. ಇಬ್ಬರನ್ನು ರಕ್ಷಣೆ ಮಾಡಲಾಗಿದೆ.
ಮಂಗಳೂರಿನ ಎಂಆರ್ ಪಿಎಲ್ ರಿಫೈನರಿಗೆ ಸೇರಿದ ಟಗ್ ಬೋಟ್ ಆಗಿದ್ದು ಬೃಹದ್ಗಾತ್ರದ ಹಡಗುಗಳಿಂದ ಕಚ್ಚಾತೈಲ ಇಳಿಸಲು ಬಳಸಲಾಗುತ್ತಿತ್ತು. ಸಮುದ್ರ ಮಧ್ಯೆ ಕಾರ್ಯಾಚರಣೆ ವೇಳೆ ಟಗ್ ತೀವ್ರ ಗಾಳಿಗೆ ಮಗುಚಿದ್ದು ಕಾರ್ಮಿಕರಾಗಿದ್ದ ಹೇಮಚಂದ್ರ ಜಾ ಎಂಬವರ ಶವ ಪಡುಬಿದ್ರೆಯಲ್ಲಿ ಪತ್ತೆಯಾಗಿದೆ.



ಟಗ್ ಬೋಟಿನಲ್ಲಿ ಒಟ್ಟು ಒಂಬತ್ತು ಜನರು ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಮಂಗಳೂರಿನ ಪಣಂಬೂರಿನ ಬಂದರಿನಿಂದ ಕೆಲವೇ ನಾಟಿಕಲ್ ಮೈಲು ದೂರದಲ್ಲಿ ಘಟನೆ ನಡೆದಿದೆ.
ಚಂಡಮಾರುತದಿಂದ ಎದ್ದ ಬೃಹತ್ ಅಲೆಗೆ ಟಗ್ ಮಗುಚಿ ಬಿದ್ದಿದೆ ಎನ್ನಲಾಗುತ್ತಿದ್ದು ಬೋಟಿನಲ್ಲಿದ್ದ 9 ಜನರು ನೀರುಪಾಲಾಗಿದ್ದರು. ಈ ಪೈಕಿ ಇಬ್ಬರು ಟ್ಯೂಬಿನ ಸಹಾಯದಿಂದ ಸತತ ಎಂಟು ಗಂಟೆ ಕಾಲ ಈಜಿ ಸಾವಿನ ದವಡೆಯಿಂದ ಪಾರಾಗಿದ್ದಾರೆ.
ಸಮುದ್ರ ಮಧ್ಯೆ ಉಡುಪಿಯ ಮಟ್ಟು ಕೊಪ್ಪಲು ಎಂಬಲ್ಲಿ ಕಾಣಿಸಿಕೊಂಡ ಇಬ್ಬರನ್ನು ಸ್ಥಳೀಯರು ದೋಣಿ ಮೂಲಕ ದಡಕ್ಕೆ ಎಳೆದು ರಕ್ಷಿಸಿದ್ದಾರೆ. ಉಳಿದವರ ಪತ್ತೆಗಾಗಿ ಕರಾವಳಿ ಕಾವಲು ಪಡೆ ಶೋಧ ಕಾರ್ಯಾಚರಣೆ ನಡೆಸುತ್ತಿದೆ.
ಉಡುಪಿಯಲ್ಲಿ ಆಸ್ಪತ್ರೆಗೆ ದಾಖಲು
ಟಗ್ ಮಗುಚಿ, ಎಂಟು ಗಂಟೆ ಕಾಲ ಈಜಿ ಜೀವ ಉಳಿಸಿಕೊಂಡ ಇಬ್ಬರಿಗೆ ಉಡುಪಿಯ ಅಜ್ಜರಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಪಶ್ಚಿಮ ಬಂಗಾಳ ಮೂಲದ ಮೊಮಿರುಲ್ ಮುಲ್ಲಾ( 34) ಹಾಗೂ ಕರೀಮುಲ್ಲಾ ಶೇಕ್ (24) ಸಾವಿನ ದವಡೆಗೆ ಸಿಲುಕಿ ಪಾರಾಗಿ ಬಂದವರು. ಮಂಗಳೂರಿನ ಸುರತ್ಕಲ್ ನಿಂದ 17 ನಾಟಿಕಲ್ ದೂರದಲ್ಲಿ ದುರಂತ ನಡೆದಿತ್ತು.
Six fishermen go missing after Mangalore MRPL Tug boat capsizes due to Cyclone Tauktae in which one has been found dead and two have been rescued and have been admitted to govt hospital in Udupi. The search is on for the three.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm