ಬ್ರೇಕಿಂಗ್ ನ್ಯೂಸ್
15-05-21 10:27 pm Mangaluru Correspondent ಕರಾವಳಿ
ಮಂಗಳೂರು, ಮೇ 15: ತೀವ್ರ ಚಂಡಮಾರುತದ ಪರಿಣಾಮ ಎನ್ಎಂಪಿಟಿ ಬಂದರಿನ ಬಳಿ ಸಮುದ್ರ ಮಧ್ಯೆ ಒಂಬತ್ತು ಕಾರ್ಮಿಕರಿದ್ದ ಟಗ್ ಮಗುಚಿ ಬಿದ್ದಿದ್ದು ಒಬ್ಬನ ಶವ ಪತ್ತೆಯಾಗಿದೆ. ಇಬ್ಬರನ್ನು ರಕ್ಷಣೆ ಮಾಡಲಾಗಿದೆ.
ಮಂಗಳೂರಿನ ಎಂಆರ್ ಪಿಎಲ್ ರಿಫೈನರಿಗೆ ಸೇರಿದ ಟಗ್ ಬೋಟ್ ಆಗಿದ್ದು ಬೃಹದ್ಗಾತ್ರದ ಹಡಗುಗಳಿಂದ ಕಚ್ಚಾತೈಲ ಇಳಿಸಲು ಬಳಸಲಾಗುತ್ತಿತ್ತು. ಸಮುದ್ರ ಮಧ್ಯೆ ಕಾರ್ಯಾಚರಣೆ ವೇಳೆ ಟಗ್ ತೀವ್ರ ಗಾಳಿಗೆ ಮಗುಚಿದ್ದು ಕಾರ್ಮಿಕರಾಗಿದ್ದ ಹೇಮಚಂದ್ರ ಜಾ ಎಂಬವರ ಶವ ಪಡುಬಿದ್ರೆಯಲ್ಲಿ ಪತ್ತೆಯಾಗಿದೆ.



ಟಗ್ ಬೋಟಿನಲ್ಲಿ ಒಟ್ಟು ಒಂಬತ್ತು ಜನರು ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಮಂಗಳೂರಿನ ಪಣಂಬೂರಿನ ಬಂದರಿನಿಂದ ಕೆಲವೇ ನಾಟಿಕಲ್ ಮೈಲು ದೂರದಲ್ಲಿ ಘಟನೆ ನಡೆದಿದೆ.
ಚಂಡಮಾರುತದಿಂದ ಎದ್ದ ಬೃಹತ್ ಅಲೆಗೆ ಟಗ್ ಮಗುಚಿ ಬಿದ್ದಿದೆ ಎನ್ನಲಾಗುತ್ತಿದ್ದು ಬೋಟಿನಲ್ಲಿದ್ದ 9 ಜನರು ನೀರುಪಾಲಾಗಿದ್ದರು. ಈ ಪೈಕಿ ಇಬ್ಬರು ಟ್ಯೂಬಿನ ಸಹಾಯದಿಂದ ಸತತ ಎಂಟು ಗಂಟೆ ಕಾಲ ಈಜಿ ಸಾವಿನ ದವಡೆಯಿಂದ ಪಾರಾಗಿದ್ದಾರೆ.
ಸಮುದ್ರ ಮಧ್ಯೆ ಉಡುಪಿಯ ಮಟ್ಟು ಕೊಪ್ಪಲು ಎಂಬಲ್ಲಿ ಕಾಣಿಸಿಕೊಂಡ ಇಬ್ಬರನ್ನು ಸ್ಥಳೀಯರು ದೋಣಿ ಮೂಲಕ ದಡಕ್ಕೆ ಎಳೆದು ರಕ್ಷಿಸಿದ್ದಾರೆ. ಉಳಿದವರ ಪತ್ತೆಗಾಗಿ ಕರಾವಳಿ ಕಾವಲು ಪಡೆ ಶೋಧ ಕಾರ್ಯಾಚರಣೆ ನಡೆಸುತ್ತಿದೆ.
ಉಡುಪಿಯಲ್ಲಿ ಆಸ್ಪತ್ರೆಗೆ ದಾಖಲು
ಟಗ್ ಮಗುಚಿ, ಎಂಟು ಗಂಟೆ ಕಾಲ ಈಜಿ ಜೀವ ಉಳಿಸಿಕೊಂಡ ಇಬ್ಬರಿಗೆ ಉಡುಪಿಯ ಅಜ್ಜರಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಪಶ್ಚಿಮ ಬಂಗಾಳ ಮೂಲದ ಮೊಮಿರುಲ್ ಮುಲ್ಲಾ( 34) ಹಾಗೂ ಕರೀಮುಲ್ಲಾ ಶೇಕ್ (24) ಸಾವಿನ ದವಡೆಗೆ ಸಿಲುಕಿ ಪಾರಾಗಿ ಬಂದವರು. ಮಂಗಳೂರಿನ ಸುರತ್ಕಲ್ ನಿಂದ 17 ನಾಟಿಕಲ್ ದೂರದಲ್ಲಿ ದುರಂತ ನಡೆದಿತ್ತು.
Six fishermen go missing after Mangalore MRPL Tug boat capsizes due to Cyclone Tauktae in which one has been found dead and two have been rescued and have been admitted to govt hospital in Udupi. The search is on for the three.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm