ಬ್ರೇಕಿಂಗ್ ನ್ಯೂಸ್
17-05-21 11:10 am Mangalore Correspondent ಕರಾವಳಿ
ಮಂಗಳೂರು, ಮೇ 17: ಪಡುಬಿದ್ರಿ ಬಳಿಯ ಸಮುದ್ರದಲ್ಲಿ ಸಿಕ್ಕಿಬಿದ್ದಿರುವ ಎಂಆರ್ ಪಿಎಲ್ ಗುತ್ತಿಗೆ ಕೆಲಸ ಮಾಡುವ ಟಗ್ ಬೋಟಿನ ಕಾರ್ಮಿಕರ ರಕ್ಷಣೆಗೆ ಕೊಚ್ಚಿಯಿಂದ ಹೆಲಿಕಾಪ್ಟರ್ ಬಂದಿದ್ದು ಎಲ್ಲ ಒಂಬತ್ತು ಮಂದಿಯನ್ನೂ ರಕ್ಷಿಸಲಾಗಿದೆ.
ಇಂದು ಬೆಳಗ್ಗೆ ಏಳು ಗಂಟೆಗೆ ಕೊಚ್ಚಿಯಿಂದ ಮಂಗಳೂರಿಗೆ ಬಂದ ನೌಕಾಪಡೆಯ ಹೆಲಿಕಾಪ್ಟರ್, ಎಂಟು ಗಂಟೆ ಸುಮಾರಿಗೆ ರಕ್ಷಣಾ ಕಾರ್ಯಾಚರಣೆ ಆರಂಭಿಸಿತ್ತು. ಪಡುಬಿದ್ರಿ ಬಳಿಯಿಂದ ಐದು ಮೈಲ್ ದೂರವಿರುವ ಸಮುದ್ರ ಮಧ್ಯೆ ಟಗ್ ಸಿಕ್ಕಿಹಾಕಿಕೊಂಡಿದ್ದು ಅದನ್ನು ರಕ್ಷಣೆ ಮಾಡುವುದು ಕೋಸ್ಟ್ ಗಾರ್ಡ್ ಪಡೆಗೆ ಸವಾಲಾಗಿತ್ತು. ಹೀಗಾಗಿ ದ.ಕ. ಜಿಲ್ಲಾಧಿಕಾರಿ ನಿನ್ನೆ ಸಂಜೆಯೇ ರಾಜ್ಯದ ಸಿಎಂ ಕಚೇರಿಯಿಂದ ಅನುಮತಿ ಪಡೆದು ನೌಕಾಪಡೆಯ ನೆರವು ಕೋರಿದ್ದರು. ಸಮುದ್ರ ತುಂಬ ರಫ್ ಇದ್ದುದರಿಂದ ಮತ್ತು ಗಾಳಿ ವೇಗವಾಗಿ ಬೀಸುತ್ತಿರುವುದರಿಂದ ರಕ್ಷಣೆಗೆ ಹೆಲಿಕಾಪ್ಟರ್ ತರಿಸಲು ಕೇಳಿಕೊಂಡಿದ್ದರು. ಗೋವಾದಿಂದ ಹೆಲಿಕಾಪ್ಟರ್ ತರಿಸುವ ಯೋಚನೆ ಮಾಡಲಾಗಿತ್ತಾದರೂ, ನಿನ್ನೆ ಸಂಜೆಯಿಂದ ಗೋವಾ ಭಾಗದಲ್ಲಿ ಚಂಡಮಾರುತದ ಪ್ರಭಾವ ಹೆಚ್ಚಿದ್ದರಿಂದ ಕೊಚ್ಚಿ ವಿಭಾಗದಿಂದ ನೆರವು ಕೇಳಲಾಗಿತ್ತು.




ಇಂದು ಬೆಳಗ್ಗೆ ಕೊಚ್ಚಿಯಿಂದ ಆಗಮಿಸಿದ ಹೆಲಿಕಾಪ್ಟರ್, ಮಂಗಳೂರು ಏರ್ಪೋರ್ಟ್ ಗೆ ಬಂದು ಕಾರ್ಯಾಚರಣೆ ಆರಂಭಿಸಿದೆ. ಬೆಳಗ್ಗೆ 10.30 ರ ವೇಳೆಗೆ ಎಲ್ಲ ಒಂಬತ್ತು ಮಂದಿ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಕಾಪ್ಟರ್ ನಲ್ಲಿ ಒಬ್ಬೊಬ್ಬರನ್ನೇ ಮೇಲಕ್ಕೆ ತಂದು ಬಳಿಕ ಅಲ್ಲಿಯೇ ಸನಿಹ ಇದ್ದ ಕೋಸ್ಟ್ ಗಾರ್ಡ್ ಪಡೆಯ ಹಡಗಿನಲ್ಲಿ ಇಳಿಸಲಾಗಿತ್ತು. ಇಂದು ಬೆಳಗ್ಗಿನ ಹೊತ್ತಿಗೆ ಸಮುದ್ರ ಬಿರುಸು ಕಳಕೊಂಡಿದ್ದರಿಂದ ಕೋಸ್ಟ್ ಗಾರ್ಡ್ ಸಿಬಂದಿಯೂ ಸ್ಪೀಡ್ ಬೋಟ್ ನಲ್ಲಿ ರಕ್ಷಣೆಗೆ ಇಳಿದಿದ್ದರು.




ಕೋಸ್ಟ್ ಗಾರ್ಡ್ ಹಡಗು ಕಳೆದ ಎರಡು ದಿನಗಳಿಂದ ಟಗ್ ನಲ್ಲಿರುವ ಒಂಬತ್ತು ಕಾರ್ಮಿಕರ ಬಗ್ಗೆ ನಿಗಾ ಇಟ್ಟಿತ್ತು. ಎಂಆರ್ ಪಿಎಲ್ ನಲ್ಲಿ ಗುತ್ತಿಗೆ ಕೆಲಸ ಮಾಡಿಕೊಂಡಿದ್ದ ಟಗ್ ಕಾರ್ಮಿಕರು ಮೊನ್ನೆ ಶನಿವಾರ ದಡಕ್ಕೆ ಬರುವ ಯೋಚನೆ ಮಾಡಿದ್ದರು. ಆದರೆ, ಅಷ್ಟರಲ್ಲಿ ಚಂಡಮಾರುತ ಪ್ರಭಾವಕ್ಕೆ ಸಿಲುಕಿ ಸಮುದ್ರದಲ್ಲಿ ಅಪಾಯಕ್ಕೀಡಾಗಿದ್ದರು. ಗಾಳಿಯ ರಭಸಕ್ಕೆ ಜನರೇಟರ್ ಕೈಕೊಟ್ಟಿದ್ದರಿಂದ ಇಂಜಿನ್ ಚಾಲೂ ಆಗದೆ, ಗಾಳಿ ಬಂದ ಕಡೆಗೆ ತೇಲುತ್ತಾ ಹೋಗುವಂತಾಗಿತ್ತು.
ಎನ್ಎಂಪಿಟಿ ಬಂದರು ವ್ಯಾಪ್ತಿಗೆ ಬರುವ ಈ ಟಗ್, ಚಂಡಮಾರುತದ ಎಚ್ಚರಿಕೆ ಇದ್ದರೂ ಸಮುದ್ರದಲ್ಲಿ ಯಾಕೆ ಉಳಿದುಕೊಂಡಿತ್ತು. ಇದಕ್ಕೆ ಎಂಆರ್ ಪಿಎಲ್ ಮತ್ತು ಎನ್ಎಂಪಿಟಿ ಬಂದರು ಅಧಿಕಾರಿಗಳ ನಿರ್ಲಕ್ಷ್ಯ ಕಾರಣವೇ ಎನ್ನುವುದರ ಬಗ್ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಎರಡೂ ಸಂಸ್ಥೆಗಳಿಂದ ಪ್ರತ್ಯೇಕ ವರದಿ ನೀಡುವಂತೆ ಕೇಳಿದ್ದಾರೆ.
MRPL Tugboat with Nine persons that were stranded through cyclone Tauktae has been rescued by Mangalore Coast Gaurd through the help of Cochi Helicopter. All the nine are said to be safe.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am