ಬ್ರೇಕಿಂಗ್ ನ್ಯೂಸ್
17-05-21 10:20 pm Mangaluru Correspondent ಕರಾವಳಿ
ಮಂಗಳೂರು, ಮೇ 17: ರಾಜ್ಯದಲ್ಲಿ ಕೊರೊನಾ ಸ್ಥಿತಿ ವಿಪರೀತಕ್ಕೆ ಹೋಗುತ್ತಿದ್ದು ರಾಷ್ಟ್ರೀಯ ವಿಪತ್ತಾಗಿ ದೇಶಕ್ಕೆ ಬೆದರಿಕೆಯಾಗಿ ಪರಿಣಮಿಸಿದೆ. ಆದರೆ, ಇದನ್ನು ನಿರ್ವಹಿಸಲು ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯ ಸರ್ಕಾರ ಕೂಡ ಕೇಂದ್ರದಿಂದ ಪರಿಹಾರ ಪಡೆದುಕೊಳ್ಳುವಲ್ಲಿ ವಿಫಲವಾಗಿದ್ದು ಸಾಮಾನ್ಯ ಜನರ ಸ್ಥಿತಿ ಶೋಚನೀಯವಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜನರಿಗೆ ಇವತ್ತು ಲಸಿಕೆಯೂ ಸಿಗುತ್ತಿಲ್ಲ. ಔಷಧಿಯೂ ಸಿಗುತ್ತಿಲ್ಲ. ಕಳೆದ ಬಾರಿಗೆ ಕೊರೊನಾ ಹೊಸತಾಗಿತ್ತು. ಆದರೆ, ಒಂದು ವರ್ಷ ಕಳೆದರೂ, ನಿರ್ವಹಣೆ ಮಾಡಲು ಸಾಧ್ಯವಾಗಿಲ್ಲ ಅಂದ್ರೆ ಇವರ ವೈಫಲ್ಯ ಅಲ್ಲದೆ ಮತ್ತೇನು ? ಇಲ್ಲೊಬ್ಬರು ಲೋಕಸಭಾ ಸದಸ್ಯರಿದ್ದಾರೆ. ಬಾಲಿಶವಾಗಿ ಹೇಳಿಕೆ ನೀಡುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ. ಕೊರೊನಾ ಹೆಚ್ಚಲು ಕಾಂಗ್ರೆಸ್ ಕಾರಣವಂತೆ. ಲಸಿಕೆಯನ್ನು ಜನರಿಗೆ ಕೊಡುವಂತದ್ದು ಅಧಿಕಾರದಲ್ಲಿ ಯಾರಿದ್ದಾರೆ ಅವರ ಕೆಲಸ. ಈಗ ಲಸಿಕೆಯೇ ಸಿಗಲ್ಲ. ಮತ್ತೊಂದೆಡೆ ಮೊದಲ ಡೋಸ್ ಕೊಟ್ಟವರಿಗೆ ಎರಡನೇ ಡೋಸ್ ಪಡೆಯಲು ಸಮಯ ಬಂದಿದ್ದರೆ, ಯಾವಾಗ ಸಿಗಲಿದೆ ಎಂದು ಸಿಎಂಗೇ ಗೊತ್ತಿಲ್ಲದಾಗಿದೆ. ಆಕ್ಸಿಜನ್, ಐಸಿಯು, ಚಿಕಿತ್ಸೆ ಇಲ್ಲದೇ ಜನರು ಸಾಯುತ್ತಿದ್ದಾರೆ. ಬಿಜೆಪಿ ಸರಕಾರ ರಾಜ್ಯದಲ್ಲಿ ಕೆಟ್ಟ ಸ್ಥಿತಿಯನ್ನು ತಂದಿಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕೊರೊನಾ ಪೀಡಿತರಾಗಿ ಮನೆ, ಆಸ್ತಿ ಕಳಕೊಂಡವರಿಗೆ ಪ್ಯಾಕೇಜ್ ಕೊಡಬೇಕು. ಅದರಲ್ಲೂ ಇಂತಹ ಮಂದಿಗೆ ಪ್ಯಾಕೇಜ್ ಕೊಡಲೇಬೇಕು ಎಂದು ಆಗ್ರಹಿಸಿದ ರಮಾನಾಥ ರೈ, ಇವತ್ತು ಕಾಂಗ್ರೆಸ್ ಇದ್ದಿದ್ದರೆ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಇರುತ್ತಿತ್ತು. ಮನೆ ಮನೆಗೆ ಕೊರೊನಾ ಕಿಟ್ ಹೋಗುತ್ತಿತ್ತು ಎಂದು ಸವಾಲೆಸೆದರು.
ಕೊರೊನಾ ನಿರ್ವಹಣೆಯಿಂದ ವೈಫಲ್ಯಕ್ಕೀಡಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮುಜುಗರಕ್ಕೀಡಾಗಿದ್ದಾರೆ. ಪ್ರಧಾನಿಯವರ ಇಮೇಜನ್ನು ಹೇಗೆ ಸೇವ್ ಮಾಡುವುದು ಅಂತಾ ಬಿಜೆಪಿಯವರು ಯೋಚಿಸುತ್ತಿದ್ದಾರೆಯೇ ವಿನಾ ಜನರ ಪ್ರಾಣ ಕಾಪಾಡುವ ಬಗ್ಗೆ ಯಾವುದೇ ಯೋಚನೆ ಅವರಿಗಿಲ್ಲ. ಜನರ ಬಗ್ಗೆ ಕನಿಷ್ಠ ಕಾಳಜಿ ಇರುತ್ತಿದ್ದರೆ ಇಷ್ಟು ನಿರ್ಲಕ್ಷ್ಯ ಮಾಡುತ್ತಿರಲಿಲ್ಲ ಎಂದು ಕಿಡಿಕಾರಿದರು.
The state and union government have completely failed in handling the pandemic, said district Congress president Harish Kumar.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm