ಬ್ರೇಕಿಂಗ್ ನ್ಯೂಸ್
17-05-21 10:20 pm Mangaluru Correspondent ಕರಾವಳಿ
ಮಂಗಳೂರು, ಮೇ 17: ರಾಜ್ಯದಲ್ಲಿ ಕೊರೊನಾ ಸ್ಥಿತಿ ವಿಪರೀತಕ್ಕೆ ಹೋಗುತ್ತಿದ್ದು ರಾಷ್ಟ್ರೀಯ ವಿಪತ್ತಾಗಿ ದೇಶಕ್ಕೆ ಬೆದರಿಕೆಯಾಗಿ ಪರಿಣಮಿಸಿದೆ. ಆದರೆ, ಇದನ್ನು ನಿರ್ವಹಿಸಲು ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯ ಸರ್ಕಾರ ಕೂಡ ಕೇಂದ್ರದಿಂದ ಪರಿಹಾರ ಪಡೆದುಕೊಳ್ಳುವಲ್ಲಿ ವಿಫಲವಾಗಿದ್ದು ಸಾಮಾನ್ಯ ಜನರ ಸ್ಥಿತಿ ಶೋಚನೀಯವಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜನರಿಗೆ ಇವತ್ತು ಲಸಿಕೆಯೂ ಸಿಗುತ್ತಿಲ್ಲ. ಔಷಧಿಯೂ ಸಿಗುತ್ತಿಲ್ಲ. ಕಳೆದ ಬಾರಿಗೆ ಕೊರೊನಾ ಹೊಸತಾಗಿತ್ತು. ಆದರೆ, ಒಂದು ವರ್ಷ ಕಳೆದರೂ, ನಿರ್ವಹಣೆ ಮಾಡಲು ಸಾಧ್ಯವಾಗಿಲ್ಲ ಅಂದ್ರೆ ಇವರ ವೈಫಲ್ಯ ಅಲ್ಲದೆ ಮತ್ತೇನು ? ಇಲ್ಲೊಬ್ಬರು ಲೋಕಸಭಾ ಸದಸ್ಯರಿದ್ದಾರೆ. ಬಾಲಿಶವಾಗಿ ಹೇಳಿಕೆ ನೀಡುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ. ಕೊರೊನಾ ಹೆಚ್ಚಲು ಕಾಂಗ್ರೆಸ್ ಕಾರಣವಂತೆ. ಲಸಿಕೆಯನ್ನು ಜನರಿಗೆ ಕೊಡುವಂತದ್ದು ಅಧಿಕಾರದಲ್ಲಿ ಯಾರಿದ್ದಾರೆ ಅವರ ಕೆಲಸ. ಈಗ ಲಸಿಕೆಯೇ ಸಿಗಲ್ಲ. ಮತ್ತೊಂದೆಡೆ ಮೊದಲ ಡೋಸ್ ಕೊಟ್ಟವರಿಗೆ ಎರಡನೇ ಡೋಸ್ ಪಡೆಯಲು ಸಮಯ ಬಂದಿದ್ದರೆ, ಯಾವಾಗ ಸಿಗಲಿದೆ ಎಂದು ಸಿಎಂಗೇ ಗೊತ್ತಿಲ್ಲದಾಗಿದೆ. ಆಕ್ಸಿಜನ್, ಐಸಿಯು, ಚಿಕಿತ್ಸೆ ಇಲ್ಲದೇ ಜನರು ಸಾಯುತ್ತಿದ್ದಾರೆ. ಬಿಜೆಪಿ ಸರಕಾರ ರಾಜ್ಯದಲ್ಲಿ ಕೆಟ್ಟ ಸ್ಥಿತಿಯನ್ನು ತಂದಿಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕೊರೊನಾ ಪೀಡಿತರಾಗಿ ಮನೆ, ಆಸ್ತಿ ಕಳಕೊಂಡವರಿಗೆ ಪ್ಯಾಕೇಜ್ ಕೊಡಬೇಕು. ಅದರಲ್ಲೂ ಇಂತಹ ಮಂದಿಗೆ ಪ್ಯಾಕೇಜ್ ಕೊಡಲೇಬೇಕು ಎಂದು ಆಗ್ರಹಿಸಿದ ರಮಾನಾಥ ರೈ, ಇವತ್ತು ಕಾಂಗ್ರೆಸ್ ಇದ್ದಿದ್ದರೆ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಇರುತ್ತಿತ್ತು. ಮನೆ ಮನೆಗೆ ಕೊರೊನಾ ಕಿಟ್ ಹೋಗುತ್ತಿತ್ತು ಎಂದು ಸವಾಲೆಸೆದರು.
ಕೊರೊನಾ ನಿರ್ವಹಣೆಯಿಂದ ವೈಫಲ್ಯಕ್ಕೀಡಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮುಜುಗರಕ್ಕೀಡಾಗಿದ್ದಾರೆ. ಪ್ರಧಾನಿಯವರ ಇಮೇಜನ್ನು ಹೇಗೆ ಸೇವ್ ಮಾಡುವುದು ಅಂತಾ ಬಿಜೆಪಿಯವರು ಯೋಚಿಸುತ್ತಿದ್ದಾರೆಯೇ ವಿನಾ ಜನರ ಪ್ರಾಣ ಕಾಪಾಡುವ ಬಗ್ಗೆ ಯಾವುದೇ ಯೋಚನೆ ಅವರಿಗಿಲ್ಲ. ಜನರ ಬಗ್ಗೆ ಕನಿಷ್ಠ ಕಾಳಜಿ ಇರುತ್ತಿದ್ದರೆ ಇಷ್ಟು ನಿರ್ಲಕ್ಷ್ಯ ಮಾಡುತ್ತಿರಲಿಲ್ಲ ಎಂದು ಕಿಡಿಕಾರಿದರು.
The state and union government have completely failed in handling the pandemic, said district Congress president Harish Kumar.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am