ಬ್ರೇಕಿಂಗ್ ನ್ಯೂಸ್
17-05-21 10:30 pm Udupi Correspondent ಕರಾವಳಿ
ಉಡುಪಿ, ಮೇ 17: ಕೊರೊನಾ ಕಾರಣದಿಂದ ಶಾಲೆಯಿಂದ ಹೊರಗುಳಿದಿರುವ ಮಕ್ಕಳು ಮೊಬೈಲ್, ವಿಡಿಯೋ ಗೇಮ್ ಹುಚ್ಚಿಗೆ ಬಿದ್ದು ಎಷ್ಟರ ಮಟ್ಟಿಗೆ ಮಾನಸಿಕ ಸ್ವಾಸ್ಥ್ಯ ಕಳಕೊಳ್ಳುತ್ತಿದ್ದಾರೆ ಎಂಬುದಕ್ಕೆ ಈ ಘಟನೆ ನಿದರ್ಶನ. ಇಲ್ಲೊಬ್ಬ 16 ವರ್ಷದ ಹುಡುಗನೊಬ್ಬ ತಂದೆ, ತಾಯಿ ಮೊಬೈಲ್ ನೋಡುತ್ತಿದ್ದುದಕ್ಕೆ ಗದರಿದರೆಂದು ಮನೆಯಿಂದ ಸ್ವಲ್ಪ ದೂರವಿರುವ ಸಾರ್ವಜನಿಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ತಾಲೂಕಿನಲ್ಲಿ ನಡೆದಿದೆ.

ಕಾಪು ತಾಲೂಕಿನ ಮಣಿಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಸುಹೇಬತ್ ಅಸ್ಲಾಮಿಯಾ(16) ಮೃತ ದುರಂತ ಸಾವನ್ನಪ್ಪಿದ ಬಾಲಕ. ಈ ಬಗ್ಗೆ ಹುಡುಗನ ಹೆತ್ತವರಾದ ಜುಬೇದಾ ಮತ್ತು ಶಬಾನ್ ದಂಪತಿ ಕಾಪು ಠಾಣೆಗೆ ದೂರು ನೀಡಿದ್ದಾರೆ. ಅಸ್ಲಾಮಿಯಾ ದಿನವಿಡೀ ಮೊಬೈಲಿನಲ್ಲಿ ವಿಡಿಯೋ ಗೇಮ್ ಆಡುತ್ತಿದ್ದುದಲ್ಲದೆ ತಂದೆ, ತಾಯಿ ಮಾತು ಕೇಳುತ್ತಿರಲಿಲ್ಲ. ಮೇ 15ರಂದು ಸಂಜೆ ಮೊಬೈಲ್ ಒತ್ತುತ್ತಿದ್ದ ಹುಡುಗನಿಗೆ ತಾಯಿ ಗದರಿದ್ದು, ಗೇಮ್ಸ್ ಆಡುವುದು ಬೇಡವೆಂದು ಹೇಳಿ ಮೊಬೈಲ್ ಕಿತ್ತುಕೊಂಡಿದ್ದರು. ಇದರಿಂದ ಸಿಟ್ಟಿಗೆದ್ದ ಹುಡುಗ, ತಾಯಿ ಬಳಿ ಕೋಪದಿಂದ ಮನೆಯ ಮೂಲೆಯಲ್ಲಿ ಕುಳಿತುಕೊಂಡಿದ್ದ.
ಆನಂತರ ಹುಡುಗನ ತಾಯಿ ನಮಾಜ್ ಮಾಡಲೆಂದು ಕೋಣೆಗೆ ತೆರಳಿದ್ದರೆ, ತಂದೆ ಬಾತ್ ರೂಮಿಗೆ ತೆರಳಿದ್ದರು. ನಮಾಜ್ ಮುಗಿಸಿದ ಬಳಿಕ ತಾಯಿ ಹೊರಬಂದಾಗ ಹುಡುಗ ಮನೆಯಲ್ಲಿ ಇರಲಿಲ್ಲ. ಬಳಿಕ ತಂದೆ, ತಾಯಿ ಇಬ್ಬರೂ ಮನೆ ಪರಿಸರದಲ್ಲಿ ಹುಡುಕಾಡಿದ್ದು, ಹೊರಗಡೆ ತೆರಳಿದಾಗ 200 ಮೀಟರ್ ದೂರದಲ್ಲಿ ಬಾವಿ ಬಳಿ ಜನ ಸೇರಿರುವುದು ಕಂಡುಬಂದಿದೆ. ಅಲ್ಲಿ ತೆರಳಿದಾಗ ಹುಡುಗ ಬಾವಿಗೆ ಹಾರಿರುವುದು ತಿಳಿದುಬಂದಿದ್ದು ಬಳಿಕ ಫೈರ್ ಸರ್ವಿಸ್ ನವರು ಬಂದು ಹುಡುಗನನ್ನು ಮೇಲೆತ್ತಿದ್ದು ಅಷ್ಟರಲ್ಲಿ ಸಾವು ಕಂಡಿದ್ದಾನೆ. ಕಾಪು ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
In an incident that highlights how mobile gaming addiction has taken over the lives of youngsters, a 16-year-old boy ended his life after being rebuked by her parents for playing video games on mobile phone. The incident occurred on the evening of May 15 at Manipur Kote, Manipura village, Udupi.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am