ಬ್ರೇಕಿಂಗ್ ನ್ಯೂಸ್
18-05-21 12:04 pm Mangalore Correspondent ಕರಾವಳಿ
ಮಂಗಳೂರು, ಮೇ 18: ನಗರದ ಮಂಗಳಾದೇವಿ ದೇವಸ್ಥಾನದ ಬಳಿಯ ಪೆಟ್ರೋಲ್ ಪಂಪ್ ಎದುರುಗಡೆ ನಿಲ್ಲಿಸಿದ್ದ ಖಾಸಗಿ ಬಸ್ ನಿನ್ನೆ ತಡರಾತ್ರಿ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.
ರೂಟ್ ನಂಬ್ರ 15ರ ಮಂಗಳೂರು- ಸುರತ್ಕಲ್ ಸಂಚಾರ ನಡೆಸುತ್ತಿದ್ದ ರಾಜಲಕ್ಷ್ಮಿ ಹೆಸರಿನ ಖಾಸಗಿ ಬಸ್ಸನ್ನು ಇತ್ತೀಚೆಗೆ ಲಾಕ್ಡೌನ್ ಘೋಷಣೆಯಾದ ಬಳಿಕ ಅದೇ ಜಾಗದಲ್ಲಿ ನಿಲ್ಲಿಸಲಾಗಿತ್ತು. ಅಲ್ಲಿ ರಾಜಲಕ್ಷ್ಮಿ ಕಂಪನಿಗೆ ಸೇರಿದ ಇತರ ಮೂರ್ನಾಲ್ಕು ಬಸ್ ಗಳು ಕೂಡ ನಿಂತಿದ್ದವು. ಆದರೆ, ಒಂದು ಬಸ್ ಮಾತ್ರ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.





ಘಟನೆ ಬಗ್ಗೆ ಪಾಂಡೇಶ್ವರ ಠಾಣೆಗೆ ದೂರು ನೀಡಲಾಗಿದ್ದು ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ. ಯಾರೋ ಕಿಡಿಗೇಡಿಗಳ ಕೃತ್ಯ ಆಗಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಈ ಬಗ್ಗೆ ಖಾಸಗಿ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ ಬಳಿ ಕೇಳಿದಾಗ, ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಹತ್ತಿಕೊಳ್ಳುವ ಸಾಧ್ಯತೆ ಇಲ್ಲ. 15-20 ದಿನಗಳಿಂದ ಒಂದೇ ಕಡೆ ನಿಂತಿದ್ದರೆ ಬಸ್ಸಿನ ಬ್ಯಾಟರಿ ವೀಕ್ ಆಗಿರತ್ತೆ. ಪವರ್ ಇಲ್ಲದೆ ಶಾರ್ಟ್ ಸರ್ಕಿಟ್ ಆಗಲಿಕ್ಕಿಲ್ಲ. ಇದು ಯಾರೋ ರಾತ್ರಿ ಬಸ್ಸಿನಲ್ಲಿ ಒಳಗೆ ಬಂದು ಕುಳಿತವರ ಕೃತ್ಯ ಆಗಿರುವ ಸಾಧ್ಯತೆಯಿದೆ. ಇಲ್ಲದಿದ್ದರೆ ಉದ್ದೇಶಪೂರ್ವಕ ಯಾರೋ ಕೃತ್ಯ ನಡೆಸಿದ್ದಾರೆ. ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
Video:
Miscreants set Route No 15 Bus Rajalakshmi which was parked since lockdown on Fire at Mangaladevi in Mangalore. The bus is completely gutted by fire.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm