ಬ್ರೇಕಿಂಗ್ ನ್ಯೂಸ್
18-05-21 09:34 pm Mangaluru Correspondent ಕರಾವಳಿ
ಮಂಗಳೂರು, ಮೇ 18: ರಾಜ್ಯ ಪೌರ ಘನ ತ್ಯಾಜ್ಯ ನಿಯಮ, ಮಂಗಳೂರು ಮಹಾನಗರಪಾಲಿಕೆ ತ್ಯಾಜ್ಯ ನಿರ್ವಹಣೆ ಉಪವಿಧಿಯಂತೆ ಹಾಗೂ ರಾಜ್ಯ ಉಚ್ಛ ನಾಯ್ಯಾಲಯದ ನಿರ್ದೇಶನದಂತೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮನೆಗಳು ಹಾಗೂ ವಸತಿ ಸಮುಚ್ಚಯಗಳಿಂದ ಉತ್ಪತ್ತಿಯಾಗುವ ತ್ಯಾಜ್ಯಗಳನ್ನು ಮೂಲದಲ್ಲಿಯೇ ಹಸಿ ಕಸ, ಒಣ ಕಸವನ್ನಾಗಿಸಿ ವಿಂಗಡಿಸಿ ನೀಡುವುದನ್ನು ಕಡ್ಡಾಯ ಮಾಡಲಾಗಿದೆ.
ಪ್ರಸುತ್ತ ಪಾಲಿಕೆ ವ್ಯಾಪ್ತಿ ಒಳಗೆ ಕೋವಿಡ್-19 ಪಾಸಿಟಿವ್ ಪ್ರಕರಣಗಳು ಏರಿಕೆಯಾಗುತ್ತಿದ್ದು ಮೂಲದಲ್ಲಿಯೇ ಕಸ ವಿಂಗಡಿಸದೆ ನೀಡದಿದ್ದಲ್ಲಿ ಘನ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಕಸ ವಿಗಂಡಿಸುವ ಕರ್ತವ್ಯ ನಿರ್ವಹಿಸುತ್ತಿರುವ ನೈರ್ಮಲ್ಯ ಕಾರ್ಮಿಕರು ಅಪಾಯಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚಿರುತ್ತದೆ. ಈ ಹಿನ್ನೆಲೆಯಲ್ಲಿ ಈಗಾಗ್ಲೇ ಕಸವನ್ನು ಬೇರ್ಪಡಿಸಿ ನೀಡುವಂತೆ ಪಾಲಿಕೆ ವತಿಯಿಂದ ಹಲವು ಬಾರಿ ಎಚ್ಚರಿಕೆ ನೀಡಲಾಗಿರುತ್ತದೆ.

ಮಂಗಳೂರು ಮಹಾನಗರ ಪಾಲಿಕೆಯು ಇನ್ನು ಮುಂದೆ ಬೇರ್ಪಡಿಸದೆ ನೀಡುವ ಕಸವನ್ನು ಸಂಗ್ರಹಿಸದೆ ತಿರಸ್ಕರಿಸಲು ತೀರ್ಮಾನಿಸಿದ್ದು, ಈ ಹಿನ್ನೆಲೆಯಲ್ಲಿ ಪ್ರತಿ ಶುಕ್ರವಾರ ಒಣ ಕಸವನ್ನು ಹಾಗೂ ಶುಕ್ರವಾರ ಹೊರತುಪಡಿಸಿ ವಾರದ ಎಲ್ಲ ದಿನಗಳಲ್ಲಿ ಹಸಿ ಕಸವನ್ನು ಪಾಲಿಕೆಯ ತ್ಯಾಜ್ಯ ಸಂಗ್ರಹಣ ವಾಹನಕ್ಕೆ ನೀಡಿ ಸ್ವಚ್ಛ ಮಂಗಳೂರು ನಿರ್ಮಾಣಕ್ಕೆ ಸಾರ್ವಜನಿಕರು ಸಹಕಾರಿಸಬೇಕು.
ಈ ಸೂಚನೆಯನ್ನು ಉಲ್ಲಂಘಿಸುವುವವರ ವಿರುದ್ಧ ಕೆ.ಎಂ.ಸಿ ನಿಯಮ 1976 ಹಾಗೂ ಮಂಗಳೂರು ಮಹಾನಗರ ಪಾಲಿಕೆ ತ್ಯಾಜ್ಯ ನಿರ್ವಹಣೆ ಉಪವಿಧಿಯಂತೆ ಭಾರಿ ದಂಡವನ್ನು ವಿಧಿಸಲಾಗುತ್ತದೆ. ಸಾರ್ವಜನಿಕರು ರಸ್ತೆ ಬದಿಗಳಲ್ಲಿ ಕಸ ಎಸೆಯುವುದು ಅಥವಾ ಹಾಕುವುದು ಕಂಡುಬಂದಲ್ಲಿ 10,000 ರೂ. ದಂಡವನ್ನು ವಿಧಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು.
ತಮ್ಮಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಂಸ್ಕರಿಸಲು ಕಾಂಪೋಸ್ಟಿಂಗ್ ಘಟಕವನ್ನು ಅಳವಡಿಸಿಕೊಂಡಲ್ಲಿ ಪ್ರಸಕ್ತ ಸಾಲಿನ ಆಸ್ತಿ ತೆರಿಗೆಯ ಘನ ತ್ಯಾಜ್ಯ ಕರದಲ್ಲಿ ಶೇ.50ರಷ್ಟು ವಿನಾಯಿತಿ ನೀಡುವ ಮೂಲಕ ಪ್ರೋತ್ಸಾಹಿಸಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
MCC ( Mangalore City Corporation) has ordered that anyone who refuses to segregate waste, will be penalised with a Criminal case or a 10 thousand fine will be imposed in Mangalore.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm