ಬ್ರೇಕಿಂಗ್ ನ್ಯೂಸ್
21-05-21 03:06 pm Udupi Correspondent ಕರಾವಳಿ
ಉಡುಪಿ, ಮೇ 21: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಕೊರೊನಾ ಪಾಸಿಟಿವ್ ಕಂಡುಬರುವ ಮನೆಗಳನ್ನು ಪೂರ್ತಿಯಾಗಿ ಸೀಲ್ ಡೌನ್ ಮಾಡಲು ಮುಂದಾಗಿದೆ.
ಪಾಸಿಟಿವ್ ಬಂದು ಸೋಂಕಿತರು ಹೋಂ ಐಸೋಲೇಷನ್ ಆಗುವ ಮನೆಗಳನ್ನು ಗುರುತಿಸಿ ಪಟ್ಟಿ ಅಳವಡಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಇದರಿಂದ ಯಾವುದೇ ಗ್ರಾಮದಲ್ಲಿ ಪಾಸಿಟಿವ್ ಬಂದವರನ್ನು ಸುಲಭವಾಗಿ ಗುರುತಿಸಲು ಸಾಧ್ಯವಾಗುತ್ತದೆ ಎನ್ನುವ ನಂಬಿಕೆ ಜಿಲ್ಲಾಡಳಿತದ್ದು.
ಅಲ್ಲದೆ ಸೋಂಕಿತರ ಚಲನವನಗಳ ಮೇಲೆ ನಿಗಾ ಇರಿಸುವ ಉದ್ದೇಶವೂ ಇದರ ಹಿಂದಿದೆ. ಈ ರೀತಿಯ ಸೀಲ್ ಡೌನ್ ಮಾಡಲು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ ಅವರೇ ಸ್ವತಃ ಮುಂದಾಗಿದ್ದಾರೆ.

ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮ ವ್ಯಾಪ್ತಿಯಲ್ಲಿ ಸ್ವತಃ ಜಿಲ್ಲಾಧಿಕಾರಿಗಳೇ ತೆರಳಿ, ಸೀಲ್ ಡೌನ್ ಮಾಡುವುದಕ್ಕಾಗಿ ಮನೆಯ ಸುತ್ತ ಎಚ್ಚರಿಕೆ ಸೂಚಿಸುವ ಟೇಪ್ ಕಟ್ಟಿ ಜಾಗೃತಿ ಮೂಡಿಸಿದ್ದಾರೆ.
ಅಲ್ಲದೆ, ಸೋಂಕಿತರನ್ನು ಮಾತನಾಡಿಸಿದ ಜಿಲ್ಲಾಧಿಕಾರಿ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ್ದಾರೆ. ಮನೆಯಲ್ಲಿಯೇ ಇದ್ದು, ಆರೋಗ್ಯದ ಬಗ್ಗೆ ನಿಗಾ ಇಡುವಂತೆ ಸೂಚಿಸಿದ್ದಾರೆ.
ಇದೇ ವೇಳೆ, ಇಡೀ ಜಿಲ್ಲೆಯಾದ್ಯಂತ ಕೋವಿಡ್ ಪಾಸಿಟಿವ್ ಬಂದವರ ಮನೆಗಳನ್ನು ಸೀಲ್ ಡೌನ್ ಮಾಡಲು ಕ್ರಮ ಕೈಗೊಂಡಿದ್ದಾರೆ. ಈ ರೀತಿಯ ಕ್ರಮಗಳು ಕಳೆದ ವರ್ಷ ಕೋವಿಡ್ ಮೊದಲ ಅಲೆಯ ವೇಳೆ ಚಾಲ್ತಿಯಲ್ಲಿದ್ದು ಆನಂತರ ಹೆಚ್ಚು ಮುತುವರ್ಜಿ ವಹಿಸಿರಲಿಲ್ಲ. ಇದೀಗ ಹೋಮ್ ಐಸೋಲೇಶನಲ್ಲಿರುವ ಮಂದಿ ಹೊರಗಡೆ ಸುತ್ತಾಡುತ್ತಿದ್ದಾರೆಂದು ಸೋಂಕಿತರ ಓಡಾಟಕ್ಕೆ ಕಡಿವಾಣ ಹಾಕಲು ಈ ರೀತಿಯ ಕ್ರಮ ತೆಗೆದುಕೊಂಡಿದ್ದಾರೆ.
Those tested positive for Covid-19 their homes will be entirely sealed down in order to control the spread of Virus says Udupi Dc Jagadish.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm