ಬ್ರೇಕಿಂಗ್ ನ್ಯೂಸ್
26-05-21 01:25 pm Mangalore Correspondent ಕರಾವಳಿ
ಮಂಗಳೂರು, ಮೇ 26 : ದೇಶದಲ್ಲಿ ಅತ್ಯಂತ ಹೆಚ್ಚು ಜನರು ಓಡಾಡುವ 50 ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ 2019-20ರಲ್ಲಿ 29ನೇ ರ್ಯಾಂಕ್ ಪಡೆದಿದ್ದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಲಾಕ್ಡೌನ್ ವರ್ಷದಲ್ಲಿ ತೀವ್ರ ಪರಿಣಾಮ ಎದುರಾಗಿದ್ದು ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದೆ. ಇದರ ಜೊತೆಗೆ 2020- 21ನೇ ಸಾಲಿನಲ್ಲಿ ರ್ಯಾಂಕಿಂಗ್ ಕೂಡ 31ನೇ ಸ್ಥಾನಕ್ಕೆ ಕುಸಿದಿದೆ.
2019-20ರಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ದೇಶೀಯ ಹಾಗೂ ಅಂತಾರಾಷ್ಟ್ರೀಯ ಪ್ರಯಾಣ ಸೇರಿ ಒಟ್ಟಾರೆ 18,76,294 ಮಂದಿ ಪ್ರಯಾಣಿಸಿದ್ದರು. 2020- 21ನೇ ಸಾಲಿನಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.67.2ರಷ್ಟು ಕುಸಿತ ಕಂಡಿದ್ದು, ಕೇವಲ 6,14,845 ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಒಟ್ಟು ಪ್ರಯಾಣಿಕರ ನಿರ್ವಹಣೆಯಲ್ಲಿ 2019-20ರಲ್ಲಿ 29ನೇ ರ್ಯಾಂಕ್ ನಲ್ಲಿದ್ದ ಮಂಗಳೂರು ವಿಮಾನ ನಿಲ್ದಾಣ ಈಗ ಎರಡು ಸ್ಥಾನಕ್ಕೆ ಕುಸಿದು 31ನೇ ಸ್ಥಾನಕ್ಕೆ ಇಳಿದಿದೆ.


2020-21ನೇ ಸಾಲಿನಲ್ಲಿ 1,52,434 ಅಂತಾರಾಷ್ಟ್ರೀಯ ಪ್ರಯಾಣಿಕರು ಸಂಚರಿಸಿದ್ದು, ಶೇ.73.3ರಷ್ಟು ಕುಸಿತ ಕಂಡಿದೆ. 2019-20ರಲ್ಲಿ ಒಟ್ಟು 5,71,226 ಪ್ರಯಾಣಿಕರ ನಿರ್ವಹಣೆಯಾಗಿತ್ತು. ಇದೇ ಅವಧಿಯಲ್ಲಿ 4,62,411 ದೇಶೀಯ ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣಿಸಿದ್ದು , ಶೇ.75.9ರಷ್ಟು ಕುಸಿತ ದಾಖಲಾಗಿದೆ. 2019- 20ರಲ್ಲಿ ಒಟ್ಟು 13,05,068 ಪ್ರಯಾಣಿಕರ ನಿರ್ವಹಣೆಯಾಗಿತ್ತು.
ಲಾಕ್ಡೌನ್ ಕಾರಣದಿಂದ ವಿಮಾನ ಪ್ರಯಾಣಿಕರ ಸಂಖ್ಯೆಯಲ್ಲಿ ತೀವ್ರ ಕುಸಿತವಾಗಿದ್ದು ಇದರಿಂದ ಶ್ರೇಯಾಂಕವೂ ಕುಸಿತವಾಗಿದೆ.
The international airport here, which had been allotted 29th rank in the year 2019-20, has slipped to No. 31 in the year 2020-21 in the ranking list of 50 top airports with the highest passenger traffic in India due to the lockdown effect.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm