ಬ್ರೇಕಿಂಗ್ ನ್ಯೂಸ್
26-05-21 08:42 pm Mangaluru Correspondent ಕರಾವಳಿ
ಮುಲ್ಕಿ, ಮೇ 26: ಇಸ್ರೇಲ್ ಬೆಂಬಲಿಸಿ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಬೇಕರಿ ಮಾಲಕನ ಮೇಲೆ ಕಿಡಿಗೇಡಿ ಯುವಕರು ಹಲ್ಲೆಗೈದ ಘಟನೆ ಮುಲ್ಕಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧಿಸಿ ಮುಲ್ಕಿ ಪೊಲೀಸರು ಐದು ಮಂದಿ ಯುವಕರನ್ನು ಬಂಧಿಸಿದ್ದಾರೆ.
ಕುಂದಾಪುರ ಮೂಲದ ಯುವಕನೊಬ್ಬ ಮುಲ್ಕಿಯಲ್ಲಿ ಬೇಕರಿ ನಡೆಸುತ್ತಿದ್ದು, ಇಸ್ರೇಲ್ – ಪ್ಯಾಲೆಸ್ತೀನ್ ಸಂಘರ್ಷದ ವಿಚಾರದಲ್ಲಿ ಇತ್ತೀಚೆಗೆ ಇಸ್ರೇಲನ್ನು ಬೆಂಬಲಿಸಿ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿದ್ದ. ಇದನ್ನು ತಿಳಿದ ಕೆಲವು ಕಿಡಿಗೇಡಿ ಯುವಕರು ಬೇಕರಿಗೆ ಬಂದು ಯುವಕನಿಗ ಹಲ್ಲೆಗೈದಿದ್ದಲ್ಲದೆ, ತನ್ನದು ತಪ್ಪಾಯ್ತೆಂದು ಕ್ಷಮೆ ಕೇಳುವಂತೆ ಹೇಳಿ ವಿಡಿಯೋ ಮಾಡಿದ್ದಾರೆ. ಅಲ್ಲದೆ, ಇನ್ನು ಈ ರೀತಿ ಪೋಸ್ಟ್ ಮಾಡಿದರೆ ಜೀವ ತೆಗೆಯುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.
ಈ ರೀತಿಯ ಘಟನೆ ನಡೆದಿರುವುದು ಬಳಿಕ ಹಿಂದು ಸಂಘಟನೆಗಳ ಕಾರ್ಯಕರ್ತರಿಗೆ ತಿಳಿದು ಬೇಕರಿಗೆ ಬಂದು ಸಮಾಧಾನ ಹೇಳಿದ್ದಾರೆ. ಅಲ್ಲದೆ, ಮುಲ್ಕಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಪಣಂಬೂರು ಎಸಿಪಿ ಕಚೇರಿಗೆ ಒಯ್ದು ವಿಚಾರಣೆ ನಡೆಸಿದ್ದಾರೆ. ಆನಂತರ ಆರೋಪಿಗಳಲ್ಲಿ ಮುಚ್ಚಳಿಕೆ ಬರೆಯಿಸಿ, ಜಾಮೀನು ನೀಡಿ ಕಳುಹಿಸಿದ್ದಾರೆ.
ವಿಷಯ ತಿಳಿದ ಮೂಲ್ಕಿ- ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಹಿಂದು ಸಂಘಟನೆಗಳ ನಾಯಕರ ಜೊತೆ ಬೇಕರಿಗೆ ಭೇಟಿ ನೀಡಿದ್ದು ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಮುಲ್ಕಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
The police personnel of Mulky station have arrested five young men who have been accused of vandalizing a bakery and beating up the bakery owner allegedly angered by the fact that the victim had supported Israel in his Facebook post.
09-06-25 03:02 pm
Bangalore Correspondent
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
Bhaskar Rao, Cm Siddaramaiah, DK Shivakumar:...
07-06-25 08:04 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm