ಬ್ರೇಕಿಂಗ್ ನ್ಯೂಸ್
27-05-21 12:37 pm Mangalore Correspondent ಕರಾವಳಿ
ಮಂಗಳೂರು, ಮೇ 27: ಕ್ರಿಕೆಟ್ ಆಡುತ್ತಿದ್ದ ಯುವಕರು ಮಾಸ್ಕ್ ಹಾಕದೇ ಗುಂಪು ಸೇರಿದ್ದನ್ನು ಪ್ರಶ್ನೆ ಮಾಡಿದ್ದ ಪಿಡಿಓ ಅಧಿಕಾರಿ ಮೇಲೆ ಹಲ್ಲೆಗೈದಿದ್ದ ನಾಲ್ವರು ಯುವಕರನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಫರಂಗಿಪೇಟೆಯ ಮಹಮ್ಮದ್ ಇದಾಯತುಲ್ಲಾ (25), ಪುದು ನಿವಾಸಿ ಅಹ್ಮದ್ ಬಸೀರ್ (30), ಕುತ್ತಾರ್ ನಿವಾಸಿ ಅಬುಬಕ್ಕರ್ ಸಿದ್ದಿಕ್(26), ಪರಂಗಿಪೇಟೆಯ ಅಹ್ಮದ್ ಸಿದ್ದಿಕ್ (33) ಬಂಧಿತರು.
ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಪಿಡಿಓ ಆಗಿರುವ ರಾಜೇಂದ್ರ ಶೆಟ್ಟಿಗೆ ಮಲ್ಲೂರಿನಲ್ಲಿ ಪಿಡಿಓ ಮತ್ತು ಕೋವಿಡ್ ನಿಯಂತ್ರಣದ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿತ್ತು. ಮಲ್ಲೂರು ಗ್ರಾಪಂ ಕಚೇರಿ ಬಳಿಯಲ್ಲಿ ಮೇ 25ರಂದು ಯುವಕರು ಕ್ರಿಕೆಟ್ ಆಡುತ್ತಿದ್ದ ವೇಳೆ ಗುಂಪು ಕೂಡಿದ್ದರು. ಈ ವೇಳೆ ಸ್ಥಳಕ್ಕೆ ತೆರಳಿದ್ದ ರಾಜೇಂದ್ರ ಶೆಟ್ಟಿ, ಕೊರೊನಾ ಇರುವುದರಿಂದ ಮಾಸ್ಕ್ ಹಾಕದೇ ಗುಂಪು ಸೇರುವುದು ಸರಿಯಲ್ಲ ಎಂದಿದ್ದರು. ಆದರೆ, ಯುವಕರು ತನ್ನ ಮಾತನ್ನು ಕೇಳದೇ ಇದ್ದಾಗ ರಾಜೇಂದ್ರ ಶೆಟ್ಟಿ ಮೊಬೈಲಿನಲ್ಲಿ ವಿಡಿಯೋ ಮಾಡಲು ಯತ್ನಿಸಿದ್ದಾರೆ.

ವಿಡಿಯೋ ಮಾಡಿದ್ದನ್ನು ಪ್ರಶ್ನಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಯುವಕರು ರಾಜೇಂದ್ರ ಶೆಟ್ಟಿಯ ಕೆನ್ನೆಗೆ ಹೊಡೆದಿದ್ದು ದೂಡಿ ಹಾಕಿ ಹಲ್ಲೆ ಮಾಡಿದ್ದಾರೆ. ಅಷ್ಟರಲ್ಲಿ ಮಲ್ಲೂರು ಗ್ರಾಪಂ ಕಚೇರಿಯಲ್ಲಿದ್ದ ಸಿಬಂದಿ ಗಿರೀಶ್ ಮತ್ತು ಅಧ್ಯಕ್ಷ ಇಸ್ಮಾಯಿಲ್ ಓಡಿ ಬಂದಿದ್ದು, ಆರೋಪಿಗಳು ತಮ್ಮ ಬೈಕಿನಲ್ಲಿ ಪರಾರಿಯಾಗಿದ್ದರು. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ಮನ್ಸೂರ್ ಆಲಿ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದಾನೆ.
ಪೊಲೀಸ್ ಕಮಿಷನರ್ ಶಶಿಕುಮಾರ್ ಸುದ್ದಿಗೋಷ್ಠಿ ಕರೆದು ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಕೆಲವು ಒಳ ಪ್ರದೇಶಗಳಲ್ಲಿ ಯುವಕರು ಕ್ರಿಕೆಟ್, ವಾಲಿಬಾಲ್ ಆಡುತ್ತಿರುವ ವಿಚಾರ ಗಮನಕ್ಕೆ ಬಂದಿದೆ. ಇದಕ್ಕಾಗಿ ಆಯಾ ಠಾಣೆಯ ವ್ಯಾಪ್ತಿಯಲ್ಲಿ ಪೊಲೀಸರ ಗಸ್ತನ್ನು ಹೆಚ್ಚಿಸುವಂತೆ ಸೂಚಿಸಿದ್ದೇನೆ. ಯುವಕರು ಕ್ರಿಕೆಟ್ ಆಡುವುದು ಪತ್ತೆಯಾದರೆ ಬಂಧಿಸಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
Read: ಮಾಸ್ಕ್ ಹಾಕದ್ದನ್ನು ಪ್ರಶ್ನಿಸಿದ ಪಿಡಿಓ ಮೇಲೆ ಯುವಕರಿಂದ ಹಲ್ಲೆ ; ಮಲ್ಲೂರಿನಲ್ಲಿ ಘಟನೆ
In connection to assault on Ulaibettu Gram Panchyath PDO the Mangalore City Police have arrested four youths. The incident took place when the youths were found playing cricket violating covid rules.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am