ಬ್ರೇಕಿಂಗ್ ನ್ಯೂಸ್
27-05-21 12:37 pm Mangalore Correspondent ಕರಾವಳಿ
ಮಂಗಳೂರು, ಮೇ 27: ಕ್ರಿಕೆಟ್ ಆಡುತ್ತಿದ್ದ ಯುವಕರು ಮಾಸ್ಕ್ ಹಾಕದೇ ಗುಂಪು ಸೇರಿದ್ದನ್ನು ಪ್ರಶ್ನೆ ಮಾಡಿದ್ದ ಪಿಡಿಓ ಅಧಿಕಾರಿ ಮೇಲೆ ಹಲ್ಲೆಗೈದಿದ್ದ ನಾಲ್ವರು ಯುವಕರನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಫರಂಗಿಪೇಟೆಯ ಮಹಮ್ಮದ್ ಇದಾಯತುಲ್ಲಾ (25), ಪುದು ನಿವಾಸಿ ಅಹ್ಮದ್ ಬಸೀರ್ (30), ಕುತ್ತಾರ್ ನಿವಾಸಿ ಅಬುಬಕ್ಕರ್ ಸಿದ್ದಿಕ್(26), ಪರಂಗಿಪೇಟೆಯ ಅಹ್ಮದ್ ಸಿದ್ದಿಕ್ (33) ಬಂಧಿತರು.
ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಪಿಡಿಓ ಆಗಿರುವ ರಾಜೇಂದ್ರ ಶೆಟ್ಟಿಗೆ ಮಲ್ಲೂರಿನಲ್ಲಿ ಪಿಡಿಓ ಮತ್ತು ಕೋವಿಡ್ ನಿಯಂತ್ರಣದ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿತ್ತು. ಮಲ್ಲೂರು ಗ್ರಾಪಂ ಕಚೇರಿ ಬಳಿಯಲ್ಲಿ ಮೇ 25ರಂದು ಯುವಕರು ಕ್ರಿಕೆಟ್ ಆಡುತ್ತಿದ್ದ ವೇಳೆ ಗುಂಪು ಕೂಡಿದ್ದರು. ಈ ವೇಳೆ ಸ್ಥಳಕ್ಕೆ ತೆರಳಿದ್ದ ರಾಜೇಂದ್ರ ಶೆಟ್ಟಿ, ಕೊರೊನಾ ಇರುವುದರಿಂದ ಮಾಸ್ಕ್ ಹಾಕದೇ ಗುಂಪು ಸೇರುವುದು ಸರಿಯಲ್ಲ ಎಂದಿದ್ದರು. ಆದರೆ, ಯುವಕರು ತನ್ನ ಮಾತನ್ನು ಕೇಳದೇ ಇದ್ದಾಗ ರಾಜೇಂದ್ರ ಶೆಟ್ಟಿ ಮೊಬೈಲಿನಲ್ಲಿ ವಿಡಿಯೋ ಮಾಡಲು ಯತ್ನಿಸಿದ್ದಾರೆ.

ವಿಡಿಯೋ ಮಾಡಿದ್ದನ್ನು ಪ್ರಶ್ನಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಯುವಕರು ರಾಜೇಂದ್ರ ಶೆಟ್ಟಿಯ ಕೆನ್ನೆಗೆ ಹೊಡೆದಿದ್ದು ದೂಡಿ ಹಾಕಿ ಹಲ್ಲೆ ಮಾಡಿದ್ದಾರೆ. ಅಷ್ಟರಲ್ಲಿ ಮಲ್ಲೂರು ಗ್ರಾಪಂ ಕಚೇರಿಯಲ್ಲಿದ್ದ ಸಿಬಂದಿ ಗಿರೀಶ್ ಮತ್ತು ಅಧ್ಯಕ್ಷ ಇಸ್ಮಾಯಿಲ್ ಓಡಿ ಬಂದಿದ್ದು, ಆರೋಪಿಗಳು ತಮ್ಮ ಬೈಕಿನಲ್ಲಿ ಪರಾರಿಯಾಗಿದ್ದರು. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ಮನ್ಸೂರ್ ಆಲಿ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದಾನೆ.
ಪೊಲೀಸ್ ಕಮಿಷನರ್ ಶಶಿಕುಮಾರ್ ಸುದ್ದಿಗೋಷ್ಠಿ ಕರೆದು ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಕೆಲವು ಒಳ ಪ್ರದೇಶಗಳಲ್ಲಿ ಯುವಕರು ಕ್ರಿಕೆಟ್, ವಾಲಿಬಾಲ್ ಆಡುತ್ತಿರುವ ವಿಚಾರ ಗಮನಕ್ಕೆ ಬಂದಿದೆ. ಇದಕ್ಕಾಗಿ ಆಯಾ ಠಾಣೆಯ ವ್ಯಾಪ್ತಿಯಲ್ಲಿ ಪೊಲೀಸರ ಗಸ್ತನ್ನು ಹೆಚ್ಚಿಸುವಂತೆ ಸೂಚಿಸಿದ್ದೇನೆ. ಯುವಕರು ಕ್ರಿಕೆಟ್ ಆಡುವುದು ಪತ್ತೆಯಾದರೆ ಬಂಧಿಸಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
Read: ಮಾಸ್ಕ್ ಹಾಕದ್ದನ್ನು ಪ್ರಶ್ನಿಸಿದ ಪಿಡಿಓ ಮೇಲೆ ಯುವಕರಿಂದ ಹಲ್ಲೆ ; ಮಲ್ಲೂರಿನಲ್ಲಿ ಘಟನೆ
In connection to assault on Ulaibettu Gram Panchyath PDO the Mangalore City Police have arrested four youths. The incident took place when the youths were found playing cricket violating covid rules.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am