ಬ್ರೇಕಿಂಗ್ ನ್ಯೂಸ್
27-05-21 03:47 pm Mangalore Correspondent ಕರಾವಳಿ
ಮಂಗಳೂರು, ಮೇ 27: ಅರಬ್ಬೀ ಸಮುದ್ರ ಮಧ್ಯೆ ಇಂಜಿನ್ ಕೆಟ್ಟು ಅಪಾಯಕ್ಕೀಡಾಗಿದ್ದ ತಮಿಳುನಾಡು ಮೂಲದ ಹತ್ತು ಮಂದಿ ಮೀನುಗಾರರನ್ನು ಇಂಡಿಯನ್ ಕೋಸ್ಟ್ ಗಾರ್ಡ್ ರಕ್ಷಣೆ ಮಾಡಿದೆ.
ಮಂಗಳೂರು ಬಂದರಿನಿಂದ 20 ನಾಟಿಕಲ್ ಮೈಲು ದೂರದಲ್ಲಿ ಇಂಜಿನ್ ಕೆಟ್ಟು ಹೋಗಿ, ಬೋಟ್ ಅಪಾಯಕ್ಕೀಡಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಇಂಡಿಯನ್ ಕೋಸ್ಟ್ ಗಾರ್ಡ್ ಪಡೆಯು ಐಸಿಜಿಎಸ್ ರಾಜದೂತ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಮೀನುಗಾರರನ್ನು ಮಂಗಳೂರಿನ ಹಳೆ ಬಂದರಿಗೆ ಕರೆತಂದಿದೆ.





ತಮಿಳುನಾಡು ಮೂಲದ ಲಾರ್ಡ್ ಆಫ್ ಓಶಿಯನ್ ಹೆಸರಿನ ಬೋಟ್ ಆಳಸಮುದ್ರ ಮೀನುಗಾರಿಕೆಗೆಂದು ತೆರಳಿದ್ದ ವೇಳೆ ಇತ್ತೀಚೆಗೆ ತೌಕ್ತೆ ಚಂಡಮಾರುತ ಎದುರಾಗಿತ್ತು. ಚಂಡಮಾರುತದಿಂದ ತಪ್ಪಿಸಿಕೊಳ್ಳಲು ಬೋಟ್ ಮೇ 14ರಂದು ಗುಜರಾತ್ ಕರಾವಳಿಯ ಪೋರ್ ಬಂದರಿಗೆ ತೆರಳಿತ್ತು. ಮೇ 19ರ ವರೆಗೂ ಪೋರ್ ಬಂದರಿನಲ್ಲಿದ್ದ ಬೋಟ್ ಬಳಿಕ ಸಮುದ್ರ ಮೂಲಕ ಮತ್ತೆ ತಮಿಳುನಾಡಿನತ್ತ ಪಯಣ ಬೆಳೆಸಿತ್ತು.
ಈ ವೇಳೆ, ಮಂಗಳೂರಿನಿಂದ 20 ನಾಟಿಕಲ್ ಮೈಲು ದೂರದ ಸಮುದ್ರದಲ್ಲಿ ಸಾಗುತ್ತಿದ್ದಾಗ ಬೋಟಿನ ಇಂಜಿನ್ ಕೆಟ್ಟು ಹೋಗಿದ್ದು ಕೋಸ್ಟ್ ಗಾರ್ಡ್ ಪಡೆಗೆ ಮಾಹಿತಿ ನೀಡಲಾಗಿತ್ತು. ಇಂಜಿನ್ ಚಾಲೂ ಆಗದ್ದರಿಂದ ಬೋಟನ್ನು ತಕ್ಷಣಕ್ಕೆ ರಿಪೇರಿ ಮಾಡುವುದಕ್ಕಾಗಿ ಕೋಸ್ಟ್ ಗಾರ್ಡ್ ಪಡೆಯವರು ಮಂಗಳೂರಿನ ಹಳೆ ಬಂದರಿನ ಅಲ್ ಬದ್ರಿಯಾ ಸಂಸ್ಥೆಗೆ ತಿಳಿಸಿದ್ದರು. ಬಳಿಕ ಐಸಿಜಿಎಸ್ ರಾಜದೂತ್ ಮತ್ತು ಅಲ್ ಬದ್ರಿಯಾ ಸಂಸ್ಥೆಯ ಸಿಬಂದಿ ಸೇರಿ ಇಂಜಿನ್ ಕೆಟ್ಟಿದ್ದ ಬೋಟನ್ನು ಮಂಗಳೂರಿನ ಹಳೆ ಬಂದರಿಗೆ ಎಳೆದು ತಂದಿದ್ದಾರೆ. ಅದರಲ್ಲಿದ್ದ ಹತ್ತು ಮಂದಿ ಮೀನುಗಾರರನ್ನು ರಕ್ಷಣೆ ಮಾಡಿ, ತಾತ್ಕಾಲಿಕ ಆಶ್ರಯ ನೀಡಲಾಗಿದೆ.
Video:
The Indian Coast Gaurd, Mangalore has rescued 10 Tamilnadu Fishermen Stranded in the Arabian Sea 20 Nautical Miles off the coast of New Mangalore in DK.
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm